AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UN Security Council: ಭಯೋತ್ಪಾದನೆ ಕುರಿತು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಸಚಿವರ ಕಿವಿ ಹಿಂಡಿದ ಜೈಶಂಕರ್​

ಜಗತ್ತು ಪಾಕಿಸ್ತಾನವನ್ನು ಭಯೋತ್ಪಾದನೆಯ ಕೇಂದ್ರಬಿಂದುವಾಗಿ ನೋಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಜಗತ್ತಿನಲ್ಲಿ ಮತ್ತೊಂದು ನ್ಯೂಯಾರ್ಕ್‌ನ 9/11 ಅಥವಾ ಮುಂಬೈನ 26/11 ದಾಳಿ ಸಂಭವಿಸಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

UN Security Council: ಭಯೋತ್ಪಾದನೆ ಕುರಿತು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಸಚಿವರ ಕಿವಿ ಹಿಂಡಿದ ಜೈಶಂಕರ್​
S Jaishankar
TV9 Web
| Edited By: |

Updated on:Dec 16, 2022 | 10:49 AM

Share

ಜಗತ್ತು ಪಾಕಿಸ್ತಾನವನ್ನು ಭಯೋತ್ಪಾದನೆಯ ಕೇಂದ್ರಬಿಂದುವಾಗಿ ನೋಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 2ನೇ ಬಾರಿಗೆ ಮತ್ತೆ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಜೈಶಂಕರ್, ಮುಂಬೈ ಭಯೋತ್ಪಾದನಾ ದಾಳಿ ಮತ್ತು ನ್ಯೂಯಾರ್ಕ್‌ನ ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ಭಯೋತ್ಪಾದಕ ದಾಳಿ ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

ಜಗತ್ತಿನಲ್ಲಿ ಮತ್ತೊಂದು ನ್ಯೂಯಾರ್ಕ್‌ನ 9/11 ಅಥವಾ ಮುಂಬೈನ 26/11 ದಾಳಿ ಸಂಭವಿಸಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನಲ್ಲಿ ತನ್ನ ಭಯೋತ್ಪಾದನೆ ನಿಗ್ರಹ ಕಾರ್ಯಸೂಚಿಯನ್ನು ಪುನಶ್ಚೇತನಗೊಳಿಸಲು ಭಾರತ ನಡೆಸುತ್ತಿರುವ ಪ್ರಯತ್ನಗಳ ಒಂದು ಭಾಗವಾಗಿದೆ. ಭಯೋತ್ಪಾದನೆಯ ಬೆದರಿಕೆ ನಿಜವಾಗಿಯೂ ಹೆಚ್ಚು ಗಂಭೀರವಾಗಿದೆ ಎಂದರು.

ಚೀನಾ ಮತ್ತು ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡ ಜೈಶಂಕರ್, ಡಬಲ್ ಸ್ಟಾಂಡರ್ಡ್ ಅನ್ನು ಹೇಗೆ ಎದುರಿಸುವುದು ಎಂಬುದು ಒಂದು ಸವಾಲು. ಭಯೋತ್ಪಾದನೆಯು ಮತ್ತೊಂದು ಸಾಧನ ಅಥವಾ ತಂತ್ರವಾಗಿದೆ ಎಂದು ಬಹಳ ಸಮಯದಿಂದ ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಯಾವುದೇ ದೇಶವು ಭಯೋತ್ಪಾದನೆಯಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಬಾರದು.

UN Security Council: ಬಿನ್ ಲಾಡೆನ್‌ಗೆ ಆತಿಥ್ಯ ನೀಡಿದವರಿಗೆ ಬೋಧಿಸುವ ಅರ್ಹತೆಯಿಲ್ಲ ಎಂದು ಪಾಕ್ ವಿರುದ್ಧ ಸಚಿವ ಜೈಶಂಕರ್ ವಾಗ್ದಾಳಿ

ಈ ಇಬ್ಬರೂ ದಾಳಿಕೋರರಿಗೂ ಪಾಕಿಸ್ತಾನದೊಂದಿಗೆ ನೇರ ಸಂಪರ್ಕವಿದೆ. ಮತ್ತೆ ಮುಂಬೈನಲ್ಲಿ 26/11 ಅಥವಾ ನ್ಯೂಯಾರ್ಕ್‌ನಲ್ಲಿ 9/11 ದಾಳಿಗಳು ನಡೆಯಲು ನಾವು ಬಿಡುವುದಿಲ್ಲ. ಭಯೋತ್ಪಾದನೆಯ ಬೆದರಿಕೆ ನಿಜವಾಗಿಯೂ ಹೆಚ್ಚು ಗಂಭೀರವಾಗಿದೆ ಎಂದು ಹೇಳಿದರು.

ಭಯೋತ್ಪಾದನೆಯೊಂದಿಗೆ ವ್ಯವಹರಿಸುವಾಗ, ನಾವು ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಶೂನ್ಯ-ಸಹಿಷ್ಣು ವಿಧಾನವನ್ನು ವ್ಯಕ್ತಪಡಿಸಬೇಕು ಎಂದರು.

ಭಯೋತ್ಪಾದನಾ ಕೃತ್ಯಗಳಿಂದ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಬೆದರಿಕೆಗಳು: ಜಾಗತಿಕ ಭಯೋತ್ಪಾದನೆ ನಿಗ್ರಹ ವಿಧಾನ – ತತ್ವಗಳು ಮತ್ತು ಮಾರ್ಗಗಳು’ ಎಂಬ ವಿಷಯದ ಮೇಲೆ ಸಭೆಯನ್ನು ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಯಾವುದೇ ರಾಷ್ಟ್ರವು ಭಯೋತ್ಪಾದನೆಯಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಬಾರದು ಮತ್ತು ನಾವು ಯಾರೂ ಅಂತಹ ಲೆಕ್ಕಾಚಾರಗಳಿಗೆ ಎಂದಿಗೂ ಮುಂದಾಗಬಾರದು ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Fri, 16 December 22

Follow Us
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?