AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಟೈಟಾನಿಕ್ (Titanic)ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ.

Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ
ಟೈಟಾನಿಕ್ ಹಡಗು
ನಯನಾ ರಾಜೀವ್
|

Updated on: Jun 20, 2023 | 9:53 AM

Share

ಟೈಟಾನಿಕ್ (Titanic)ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.

ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್‌ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.

ಮತ್ತಷ್ಟು ಓದಿ: Titanic Movie: ಹೊಸ ಅವತಾರದಲ್ಲಿ ರಿಲೀಸ್ ಆಗುತ್ತಿದೆ ‘ಟೈಟಾನಿಕ್​’ ಸಿನಿಮಾ; ಇಲ್ಲಿದೆ ವಿವರ

ಹಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.

ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.

ಸಮುದ್ರಯಾನವು ನ್ಯೂಫೌಂಡ್​ಲ್ಯಾಂಡ್​ನ ಸೇಂಟ್​ ಜಾನ್ಸ್​ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್​ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ