Sign In

By signing in or creating an account, you agree with Associated Broadcasting Company's Terms & Conditions and Privacy Policy.

Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ

ಟೈಟಾನಿಕ್ (Titanic)ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ.

Titanic Submarine: ಟೈಟಾನಿಕ್ ಹಡಗು ಮುಳುಗಿದ್ದ ಸ್ಥಳದಲ್ಲೇ ಮತ್ತೊಂದು ಅವಘಡ, ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೈಟಾನಿಕ್ ಜಲಾಂತರ್ಗಾಮಿ ನಾಪತ್ತೆ
ಟೈಟಾನಿಕ್ ಹಡಗು
Follow us
ನಯನಾ ರಾಜೀವ್
|

Updated on: Jun 20, 2023 | 9:53 AM

ಟೈಟಾನಿಕ್ (Titanic)ಹಡಗು ಮುಳುಗಿದ ಸ್ಥಳ ಅಟ್ಲಾಂಟಿಕ್ ಸಾಗರರಿಂದ ಮತ್ತೊಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಟೈಟಾನಿಕ್ ಹಡಗಿನ ಅವಶೇಷಗಳಿರುವ ಕಡೆಗೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಜಲಾಂತರ್ಗಾಮಿ ಅಟ್ಲಾಂಟಿಕ್ ಸಾಗರದಲ್ಲಿ ನಾಪತ್ತೆಯಾಗಿದೆ. ಟೈಟಾನಿಕ್ ಸಬ್​ಮೆರಿನ್ ಕಣ್ಮರೆಯಾಗಿರುವುದನ್ನು ಸ್ಕೈ ನ್ಯೂಸ್ ದೃಢಪಡಿಸಿದೆ. ನಾಪತ್ತೆಯಾಗಿರುವ ಜಲಾಂತರ್ಗಾಮಿ ನೌಕೆಯಲ್ಲಿ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ದೃಢಪಟ್ಟಿಲ್ಲ.

ಏಪ್ರಿಲ್ 14, 1912 ರಂದು ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ದೊಡ್ಡ ಮಂಜುಗಡ್ಡೆಗೆ (ಐಸ್ ರಾಕ್) ಡಿಕ್ಕಿ ಹೊಡೆದ ನಂತರ ಟೈಟಾನಿಕ್ ಹಡಗು ಎರಡು ತುಂಡಾಗಿ ಸಮುದ್ರದಲ್ಲಿ ಮುಳುಗಿತ್ತು. ಆ ಸಮಯದಲ್ಲಿ, ಟೈಟಾನಿಕ್ ಮುಳುಗುವಿಕೆಯಿಂದ 1500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಏಪ್ರಿಲ್ 10 ರಂದು, ಈ ಹಡಗು ಬ್ರಿಟನ್‌ನ ಸೌತಾಂಪ್ಟನ್ ಬಂದರಿನಿಂದ ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಿತ್ತು, ಅದು ಅಪಘಾತಕ್ಕೆ ಬಲಿಯಾಯಿತು.

ಮತ್ತಷ್ಟು ಓದಿ: Titanic Movie: ಹೊಸ ಅವತಾರದಲ್ಲಿ ರಿಲೀಸ್ ಆಗುತ್ತಿದೆ ‘ಟೈಟಾನಿಕ್​’ ಸಿನಿಮಾ; ಇಲ್ಲಿದೆ ವಿವರ

ಹಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಜೇಮ್ಸ್ ಕ್ಯಾಮರೂನ್ ಕೂಡ ಟೈಟಾನಿಕ್ ಹಡಗು ದುರಂತದ ಬಗ್ಗೆ ಅದೇ ಹೆಸರಿನಲ್ಲಿ ಚಲನಚಿತ್ರವನ್ನು ನಿರ್ಮಿಸಿದ್ದಾರೆ. ಇದರಲ್ಲಿ ಟೈಟಾನಿಕ್ ಅಪಘಾತವನ್ನು ಬಹಳ ಹತ್ತಿರದಿಂದ ತೋರಿಸಲಾಗಿದೆ. ಈ ಚಿತ್ರ ವಿಶ್ವಾದ್ಯಂತ ಪ್ರಶಂಸೆಗೆ ಪಾತ್ರವಾಯಿತು.

ನೌಕೆಯಲ್ಲಿದ್ದವರನ್ನು ರಕ್ಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆದರೆ ಎಷ್ಟು ಮಂದಿ ಇದ್ದರು ಎನ್ನುವ ಕುರಿತು ನಿಖರವಾದ ಮಾಹಿತಿ ಇಲ್ಲ ಎಂದು ಓಸಿಂಗೇಟ್ ಕಂಪನಿ ಹೇಳಿದೆ.

ಸಮುದ್ರಯಾನವು ನ್ಯೂಫೌಂಡ್​ಲ್ಯಾಂಡ್​ನ ಸೇಂಟ್​ ಜಾನ್ಸ್​ನಲ್ಲಿ ಪ್ರಾರಂಭವಾಗುತ್ತದೆ. ಅಟ್ಲಾಂಟಿಕ್​ನಾದ್ಯಂತ ಸುಮಾರು 400 ಮೈಲಿಗಳಷ್ಟು ಸಂಚರಿಸುತ್ತದೆ. ಐವರು ಮಾತ್ರ ಈ ನೌಕೆಯನ್ನು ಒಂದೇ ಸಮಯದಲ್ಲಿ ಹತ್ತಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?
ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ