AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia Crime: ಭಾರತ ಮೂಲದ ಯುವತಿಯನ್ನು ಜೀವಂತ ಸಮಾಧಿ ಮಾಡಿದ್ದ ಮಾಜಿ ಪ್ರಿಯಕರ

ಭಾರತ ಮೂಲದ ಯುವತಿಯನ್ನು ಮಾಜಿ ಪ್ರಿಯಕರನೊಬ್ಬ ಜೀವಂತ ಸಮಾಧಿ ಮಾಡಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Australia Crime: ಭಾರತ ಮೂಲದ ಯುವತಿಯನ್ನು ಜೀವಂತ ಸಮಾಧಿ ಮಾಡಿದ್ದ ಮಾಜಿ ಪ್ರಿಯಕರ
ಜಾಸ್ಮಿನ್ ಕೌರ್
ನಯನಾ ರಾಜೀವ್
|

Updated on: Jul 07, 2023 | 8:05 AM

Share

ಭಾರತ ಮೂಲದ ಯುವತಿಯನ್ನು ಮಾಜಿ ಪ್ರಿಯಕರನೊಬ್ಬ ಜೀವಂತ ಸಮಾಧಿ ಮಾಡಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಆಕೆ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು, 2021ರ ಮಾರ್ಚ್​ನಲ್ಲಿ ಈ ಘಟನೆ ನಡೆದಿದೆ, ಆತ 21 ವರ್ಷದ ಜಾಸ್ಮಿನ್ ಕೌರ್ ಎಂಬಾಕೆಯನ್ನು ಹತ್ಯೆ ಮಾಡಿದ್ದಾನೆ. ತಾರಿಕ್​ಜೋತ್ ಸಿಂಗ್ ಎಂಬಾತ ಜಾಸ್ಮಿನ್​ಳನ್ನು ಪ್ರೀತಿಸುತ್ತಿದ್ದ ಆದರೆ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು, ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಜಾಸ್ಮಿನ್ ಕೌರ್ ಕೆಲಸ ಮಾಡುತ್ತಿದ್ದ ಸ್ಥಳದಿಂದ ಆಕೆಯನ್ನು ಅಪಹರಿಸಿದ್ದರು, ಅಲ್ಲಿಂದ 644 ಕಿ.ಮೀ ದೂರ ಕರೆದೊಯ್ದು ಜೀವಂತ ಸಮಾಧಿ ಮಾಡಿದ್ದರು.

ಕೋರ್ಟ್​ನಲ್ಲಿ ಶಿಕ್ಷೆ ಪ್ರಕಟವಾಗುವ ಸಮಯದಲ್ಲಿ ಈ ಮಾಹಿತಿಯನ್ನು ಎಲ್ಲರಿಗೂ ನೀಡಲಾಯಿತು, ಜಾಸ್ಮಿನ್ ಅವರ ಕೊಲೆಗೆ ತಾರಿಕ್​ಜೋತ್ ಸಂಚು ರೂಪಿಸಿದ್ದ, ಕೌರ್ ಅವರ ಹತ್ಯೆ ನಿಜಕ್ಕೂ ಕ್ರೂರವಾಗಿತ್ತು.

ಮತ್ತಷ್ಟು ಓದಿ: Madikeri News: 2 ವರ್ಷದ ಮಗು, ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಪತಿ: ಬಂಧನ

ನ್ಯಾಯಾಲಯದಲ್ಲಿ ತನ್ನ ಮಗಳು ಹೇಗೆ ಮೃತಪಟ್ಟಳು ಎಂಬುದನ್ನು ಕೇಳಿ ತಾಯಿ ಕಣ್ಣೀರು ಹಾಕಿದ್ದಾರೆ. ತನ್ನ ಮಗಳನ್ನು ಜೀವಂತ ಸಮಾಧಿ ಮಾಡುವಾಗ ಆಕೆಯ ಬಾಯಿಗೆಲ್ಲಾ ಮಣ್ಣು ಹೋಗಿರಬಹುದಲ್ಲವೇ, ಉಸಿರು ಕಟ್ಟಿರಬಹುದಲ್ಲವೇ ಎಂದು ತಾಯಿ ಹೇಳುತ್ತಿರುವಾಗ ಅಲ್ಲಿದ್ದವರ ಕಣ್ಣಾಲಿಗಳಲ್ಲಿ ನೀರು ತುಂಬಿತ್ತು.

ತಾರಿಕ್​ಜೋತ್ ಈ ಮೊದಲು ತಾನು ಕೊಲೆ ಮಾಡಿಲ್ಲ, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಿದ್ದ, ಬಳಿಕ ತಪ್ಪೊಪ್ಪಿಕೊಂಡು ಆಕೆಯನ್ನು ಹೂತು ಹಾಕಿರುವುದಾಗಿ ತಿಳಿಸಿದ್ದ, ಬಳಿಕ ಸಮಾಧಿ ಸ್ಥಳಕ್ಕೆ ತೆರಳಿದಾಗ ಜಾಸ್ಮಿನ್​ಳ ಶೂಗಳು, ಕನ್ನಡಕ, ಬ್ಯಾಡ್ಜ್​ ಎಲ್ಲವೂ ಸಿಕ್ಕಿತ್ತು. ಆಕೆಯ ಕೈಕಾಲು ಕಟ್ಟಿ, ಕತ್ತು ಸೀಳಿ, ಆಕೆಯನ್ನು ಹೂತು ಹಾಕಲಾಗಿತ್ತು. ಜಾಸ್ಮಿನ್ ತಂದೆ-ತಾಯಿಗಾದ ನೋವು ಜೀವನ ಪರ್ಯಂತ ಹಾಗೆಯೇ ಉಳಿಯುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ