AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ

ಆಸ್ಟ್ರೇಲಿಯಾ ಈಗಾಗಲೇ ಫಿಜರ್​, ಆಸ್ಟ್ರಾಜೆನೆಕಾ, ಮಾಡರ್ನಾ ಮತ್ತು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗಳನ್ನು ಮಾನ್ಯ ಮಾಡಿತ್ತು. ಇದೀಗ ಭಾರತದ ಕೊವಿಶೀಲ್ಡ್​ ಮತ್ತು ಚೀನಾದ ಕೊರೊನಾವ್ಯಾಕ್​ಗಳು ಆ ಸಾಲಿಗೆ ಸೇರಿದಂತಾಗಿವೆ.

ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ
ಕೊವಿಶೀಲ್ಡ್​ ಲಸಿಕೆ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Oct 01, 2021 | 3:26 PM

Share

ಭಾರತದ ಸೀರಂ ಇನ್​ಸ್ಟಿಟ್ಯೂಟ್​ನ ಕೊವಿಶೀಲ್ಡ್ (Covishield)​ ಕೊರೊನಾ ಲಸಿಕೆ (Coronavaccine)ಯನ್ನು ಆಸ್ಟ್ರೇಲಿಯಾ ಮಾನ್ಯ ಮಾಡಿದೆ. ಆನ್​ಲೈನ್​ ಮೂಲಕ ಭಾರತೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್ (Australian Prime Minister Scott Morrison) ​ ಈ ವಿಷಯವನ್ನು ದೃಢಪಡಿಸಿದ್ದಾರೆ. ಆಸ್ಟ್ರೇಲಿಯಾ ಚಿಕಿತ್ಸಕ ಸರಕು ಆಡಳಿತ (TGA) ಭಾರತದ ಕೊವಿಶೀಲ್ಡ್ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದೆ. ಆಸ್ಟ್ರೇಲಿಯಾಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಸೂಕ್ತ ಕೊರೊನಾ ಲಸಿಕೆ ಪಡೆದಿರಬೇಕು. ಇದೀಗ ಚೀನಾದ ಕೊರೊನಾವ್ಯಾಕ್​ (ಸಿನೋವ್ಯಾಕ್​) ಮತ್ತು ಭಾರತದ ಕೊವಿಶೀಲ್ಡ್​ ಲಸಿಕೆಗಳನ್ನೂ ಮಾನ್ಯ ಮಾಡುವಂತೆ ಟಿಜಿಎ ಸಲಹೆ ನೀಡಿದೆ ಎಂದು ಮಾರಿಸನ್​ ತಿಳಿಸಿದ್ದಾರೆ.  

ಆಸ್ಟ್ರೇಲಿಯಾ ಈಗಾಗಲೇ ಫಿಜರ್​, ಆಸ್ಟ್ರಾಜೆನೆಕಾ, ಮಾಡರ್ನಾ ಮತ್ತು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗಳನ್ನು ಮಾನ್ಯ ಮಾಡಿತ್ತು.  ಇದೀಗ ಕೊವಿಶೀಲ್ಡ್​, ಕೊರೊನಾವ್ಯಾಕ್​ಗಳು ಆ ಸಾಲಿಗೆ ಸೇರಿದಂತಾಗಿವೆ. ಕೊವಿಡ್​ 19 ಸ್ಥಿತಿಗತಿಯಿಂದಾಗಿ ಅಂತಾರಾಷ್ಟ್ರೀಯ ಪ್ರಯಾಣ ಸ್ಥಗಿತಗೊಂಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾದ ಹಲವು ಪ್ರಜೆಗಳೂ ಕೂಡ ಭಾರತ ಸೇರಿ ಕೆಲವು ರಾಷ್ಟ್ರಗಳಲ್ಲೇ ಉಳಿದುಕೊಂಡಿದ್ದಾರೆ. ಅಂಥವರು ತಾವು ಇದ್ದಲ್ಲೇ, ಆಯಾ ದೇಶಗಳ ಕೊವಿಡ್​ 19 ಲಸಿಕೆ ಪಡೆಯುತ್ತಿದ್ದಾರೆ. ಅಂಥವರಿಗೆ ಆಸ್ಟ್ರೇಲಿಯಾ ಈಗ ಕೊವಿಶೀಲ್ಡ್​ ಮತ್ತು ಕೊರೊನಾವ್ಯಾಕ್​ ಲಸಿಕೆಗಳಿಗೂ ಮಾನ್ಯತೆ ನೀಡಿದ್ದರಿಂದ ಅನುಕೂಲವಾಗಲಿದೆ. ಭಾರತದಲ್ಲಿದ್ದು, ಕೊವಿಶೀಲ್ಡ್​ ಲಸಿಕೆ ಪಡೆದವರು ಇದೀಗ ತಮ್ಮ ದೇಶಕ್ಕೆ ಹೋಗಬಹುದು.

ಹಾಗೇ, ಆಸ್ಟ್ರೇಲಿಯಾಕ್ಕೆ ಹೋಗುವ ಅಂತಾರಾಷ್ಟ್ರೀಯ ಪ್ರಯಾಣಿಕರು ತಾವು ಟಿಜಿಎ ಅನುಮೋದಿತ ಕೊರೊನಾ ಲಸಿಕೆಯನ್ನು ಪಡೆದಿದ್ದೇವೆ ಎಂಬುದಕ್ಕೆ ಸಾಕ್ಷಿಯನ್ನು ಆಡಳಿತಕ್ಕೆ ಒಪ್ಪಿಸಬೇಕಾಗುತ್ತದೆ. ಕೊವಿಡ್​ 19 ಸರ್ಟಿಫಿಕೇಟ್​ ಹೊಂದಿರಬೇಕಾಗುತ್ತದೆ ಎಂದು ಆಸ್ಟ್ರೇಲಿಯಾ ಹೈಕಮೀಷನ್​​ನ ವಕ್ತಾರರೊಬ್ಬರು ತಿಳಿಸಿದ್ದಾರೆ.  ಅಂದಹಾಗೆ, ಈಗ ಆಸ್ಟ್ರೇಲಿಯಾ ಕೊವಿಶೀಲ್ಡ್ ಲಸಿಕೆಯನ್ನು ಮಾನ್ಯ ಮಾಡಿರುವುದರಿಂದ ಆಸ್ಟ್ರೇಲಿಯಾಕ್ಕೆ ಹೋಗಲಿರುವ ಭಾರತದ ಪ್ರವಾಸಿಗರಿಗೆ ಮತ್ತು ಶಿಕ್ಷಣಕ್ಕಾಗಿ ಹೋಗಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಅನುಕೂಲವಾಗಲಿದೆ ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಯಾಕೆಂದರೆ ಪ್ರಧಾನಿ ಸ್ಕಾಟ್ ಮಾರಿಸನ್​ ಮಾತನಾಡುತ್ತ, ಇದೀಗ ಕೊವಿಶೀಲ್ಡ್​ ಮತ್ತು ಕೊರೊನಾವ್ಯಾಕ್​ ಲಸಿಕೆಗೆ ಮಾನ್ಯತೆ ನೀಡಿರುವುದು ಒಂದು ಮೈಲಿಗಲ್ಲಾಗಿದೆ. ಇದರಿಂದ ಬೇರೆ ರಾಷ್ಟ್ರಗಳಲ್ಲಿ ಸಿಲುಕಿರುವ ಆಸ್ಟ್ರೇಲಿಯನ್ನರು ಆದಷ್ಟು ಬೇಗನೇ ತಮ್ಮ ಕುಟುಂಬ ಸೇರಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Air India ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ

Conversion Law: ಮತಾಂತರ ವಿರೋಧಿ ಕಾನೂನು ತರುವ ರೀತಿ ಇದಲ್ಲ; ಕಾರಣ ಇಲ್ಲಿದೆ ನೋಡಿ

Published On - 3:23 pm, Fri, 1 October 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!