AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ

ಆಸ್ಟ್ರೇಲಿಯಾ ಈಗಾಗಲೇ ಫಿಜರ್​, ಆಸ್ಟ್ರಾಜೆನೆಕಾ, ಮಾಡರ್ನಾ ಮತ್ತು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗಳನ್ನು ಮಾನ್ಯ ಮಾಡಿತ್ತು. ಇದೀಗ ಭಾರತದ ಕೊವಿಶೀಲ್ಡ್​ ಮತ್ತು ಚೀನಾದ ಕೊರೊನಾವ್ಯಾಕ್​ಗಳು ಆ ಸಾಲಿಗೆ ಸೇರಿದಂತಾಗಿವೆ.

ಭಾರತದ ಕೊವಿಶೀಲ್ಡ್​ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದ ಆಸ್ಟ್ರೇಲಿಯಾ ಸರ್ಕಾರ
ಕೊವಿಶೀಲ್ಡ್​ ಲಸಿಕೆ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Oct 01, 2021 | 3:26 PM

Share

ಭಾರತದ ಸೀರಂ ಇನ್​ಸ್ಟಿಟ್ಯೂಟ್​ನ ಕೊವಿಶೀಲ್ಡ್ (Covishield)​ ಕೊರೊನಾ ಲಸಿಕೆ (Coronavaccine)ಯನ್ನು ಆಸ್ಟ್ರೇಲಿಯಾ ಮಾನ್ಯ ಮಾಡಿದೆ. ಆನ್​ಲೈನ್​ ಮೂಲಕ ಭಾರತೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್ (Australian Prime Minister Scott Morrison) ​ ಈ ವಿಷಯವನ್ನು ದೃಢಪಡಿಸಿದ್ದಾರೆ. ಆಸ್ಟ್ರೇಲಿಯಾ ಚಿಕಿತ್ಸಕ ಸರಕು ಆಡಳಿತ (TGA) ಭಾರತದ ಕೊವಿಶೀಲ್ಡ್ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದೆ. ಆಸ್ಟ್ರೇಲಿಯಾಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಸೂಕ್ತ ಕೊರೊನಾ ಲಸಿಕೆ ಪಡೆದಿರಬೇಕು. ಇದೀಗ ಚೀನಾದ ಕೊರೊನಾವ್ಯಾಕ್​ (ಸಿನೋವ್ಯಾಕ್​) ಮತ್ತು ಭಾರತದ ಕೊವಿಶೀಲ್ಡ್​ ಲಸಿಕೆಗಳನ್ನೂ ಮಾನ್ಯ ಮಾಡುವಂತೆ ಟಿಜಿಎ ಸಲಹೆ ನೀಡಿದೆ ಎಂದು ಮಾರಿಸನ್​ ತಿಳಿಸಿದ್ದಾರೆ.  

ಆಸ್ಟ್ರೇಲಿಯಾ ಈಗಾಗಲೇ ಫಿಜರ್​, ಆಸ್ಟ್ರಾಜೆನೆಕಾ, ಮಾಡರ್ನಾ ಮತ್ತು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗಳನ್ನು ಮಾನ್ಯ ಮಾಡಿತ್ತು.  ಇದೀಗ ಕೊವಿಶೀಲ್ಡ್​, ಕೊರೊನಾವ್ಯಾಕ್​ಗಳು ಆ ಸಾಲಿಗೆ ಸೇರಿದಂತಾಗಿವೆ. ಕೊವಿಡ್​ 19 ಸ್ಥಿತಿಗತಿಯಿಂದಾಗಿ ಅಂತಾರಾಷ್ಟ್ರೀಯ ಪ್ರಯಾಣ ಸ್ಥಗಿತಗೊಂಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾದ ಹಲವು ಪ್ರಜೆಗಳೂ ಕೂಡ ಭಾರತ ಸೇರಿ ಕೆಲವು ರಾಷ್ಟ್ರಗಳಲ್ಲೇ ಉಳಿದುಕೊಂಡಿದ್ದಾರೆ. ಅಂಥವರು ತಾವು ಇದ್ದಲ್ಲೇ, ಆಯಾ ದೇಶಗಳ ಕೊವಿಡ್​ 19 ಲಸಿಕೆ ಪಡೆಯುತ್ತಿದ್ದಾರೆ. ಅಂಥವರಿಗೆ ಆಸ್ಟ್ರೇಲಿಯಾ ಈಗ ಕೊವಿಶೀಲ್ಡ್​ ಮತ್ತು ಕೊರೊನಾವ್ಯಾಕ್​ ಲಸಿಕೆಗಳಿಗೂ ಮಾನ್ಯತೆ ನೀಡಿದ್ದರಿಂದ ಅನುಕೂಲವಾಗಲಿದೆ. ಭಾರತದಲ್ಲಿದ್ದು, ಕೊವಿಶೀಲ್ಡ್​ ಲಸಿಕೆ ಪಡೆದವರು ಇದೀಗ ತಮ್ಮ ದೇಶಕ್ಕೆ ಹೋಗಬಹುದು.

ಹಾಗೇ, ಆಸ್ಟ್ರೇಲಿಯಾಕ್ಕೆ ಹೋಗುವ ಅಂತಾರಾಷ್ಟ್ರೀಯ ಪ್ರಯಾಣಿಕರು ತಾವು ಟಿಜಿಎ ಅನುಮೋದಿತ ಕೊರೊನಾ ಲಸಿಕೆಯನ್ನು ಪಡೆದಿದ್ದೇವೆ ಎಂಬುದಕ್ಕೆ ಸಾಕ್ಷಿಯನ್ನು ಆಡಳಿತಕ್ಕೆ ಒಪ್ಪಿಸಬೇಕಾಗುತ್ತದೆ. ಕೊವಿಡ್​ 19 ಸರ್ಟಿಫಿಕೇಟ್​ ಹೊಂದಿರಬೇಕಾಗುತ್ತದೆ ಎಂದು ಆಸ್ಟ್ರೇಲಿಯಾ ಹೈಕಮೀಷನ್​​ನ ವಕ್ತಾರರೊಬ್ಬರು ತಿಳಿಸಿದ್ದಾರೆ.  ಅಂದಹಾಗೆ, ಈಗ ಆಸ್ಟ್ರೇಲಿಯಾ ಕೊವಿಶೀಲ್ಡ್ ಲಸಿಕೆಯನ್ನು ಮಾನ್ಯ ಮಾಡಿರುವುದರಿಂದ ಆಸ್ಟ್ರೇಲಿಯಾಕ್ಕೆ ಹೋಗಲಿರುವ ಭಾರತದ ಪ್ರವಾಸಿಗರಿಗೆ ಮತ್ತು ಶಿಕ್ಷಣಕ್ಕಾಗಿ ಹೋಗಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಅನುಕೂಲವಾಗಲಿದೆ ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಯಾಕೆಂದರೆ ಪ್ರಧಾನಿ ಸ್ಕಾಟ್ ಮಾರಿಸನ್​ ಮಾತನಾಡುತ್ತ, ಇದೀಗ ಕೊವಿಶೀಲ್ಡ್​ ಮತ್ತು ಕೊರೊನಾವ್ಯಾಕ್​ ಲಸಿಕೆಗೆ ಮಾನ್ಯತೆ ನೀಡಿರುವುದು ಒಂದು ಮೈಲಿಗಲ್ಲಾಗಿದೆ. ಇದರಿಂದ ಬೇರೆ ರಾಷ್ಟ್ರಗಳಲ್ಲಿ ಸಿಲುಕಿರುವ ಆಸ್ಟ್ರೇಲಿಯನ್ನರು ಆದಷ್ಟು ಬೇಗನೇ ತಮ್ಮ ಕುಟುಂಬ ಸೇರಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Air India ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ ಸನ್ಸ್: ಮಾಧ್ಯಮ ವರದಿ ತಪ್ಪು ಎಂದ ಸರ್ಕಾರ

Conversion Law: ಮತಾಂತರ ವಿರೋಧಿ ಕಾನೂನು ತರುವ ರೀತಿ ಇದಲ್ಲ; ಕಾರಣ ಇಲ್ಲಿದೆ ನೋಡಿ

Published On - 3:23 pm, Fri, 1 October 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ