AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ
ವಿದ್ಯಾರ್ಥಿ
ನಯನಾ ರಾಜೀವ್
|

Updated on: Jul 14, 2023 | 12:52 PM

Share

ಸಿಡ್ನಿ, ಜುಲೈ 14: ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ. ಸಿಡ್ನಿಯ ಮೆರ್ರಿಲ್ಯಾಂಡ್ಸ್​ನಲ್ಲಿ ಮನೆಯಿಂದ ಕೆಲಸಕ್ಕೆ ಹೋಗುತ್ತಿರುವಾಗ ಖಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ 5.30ರ ವೇಳೆಗೆ ಕೆಲಸಕ್ಕೆ ಹೋಗುತ್ತಿರುವಾಗ 4-5 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ಆಸ್ಟ್ರೇಲಿಯನ್ ಟುಡೇ ವರದಿ ಮಾಡಿದೆ. ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಅದನ್ನು ಇಬ್ಬರು ಚಿತ್ರೀಕರಣ ಕೂಡ ಮಾಡಿದ್ದಾರೆ.

ಮನೆಯಿಂದ 50 ಮೀಟರ್ ದೂರದಲ್ಲಿ ಕಾರು ನಿಲ್ಲಿಸಿದ್ದ ವಿದ್ಯಾರ್ಥಿ, ಕಾರಿನಲ್ಲಿ ಹೋಗಿ ಕೂರುತ್ತಿದ್ದಂತೆ ಇದ್ದಕ್ಕಿದ್ದಂತೆ ಖಲಿಸ್ತಾನಿ ಬೆಂಬಲಿಗರು ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಕಾರಿನ ಬಾಗಿಲನ್ನು ತೆರೆದು ಮುಖಕ್ಕೆ ರಾಡ್​ನಿಂದ ಹೊಡೆದಿದ್ದರು.

ಮತ್ತಷ್ಟು ಓದಿ: Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ

ನಂತರ ಕಾರಿನಿಂದ ಹೊರಗೆಳೆದು ಕಬ್ಬಿಣದ ರಾಡ್​ನಿಂದ ಥಳಿಸಿದ್ದಾರೆ ಎಂದು ವಿದ್ಯಾರ್ಥಿ ಹೇಳಿದ್ದಾನೆ. ಈ ಘಟನೆಯನ್ನು ನೋಡಿ ಕೆಲವರು ದಾರಿಹೋಕರು ಪೊಲೀಸರಿಗೆ ಕರೆ ಮಾಡಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ವೈದ್ಯರನ್ನು ಕರೆತಂದರು.

ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ವಿದ್ಯಾರ್ಥಿಯನ್ನು ವೆಸ್ಟ್​ಮೀಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆನಡಾದಲ್ಲಿ ನಿರಂತರ ದಾಂಧಲೆ ಎಬ್ಬಿಸುತ್ತಿದ್ದ ಖಲಿಸ್ತಾನಿ ಬೆಂಬಲಿಗರಿಗೆ ಭಾರತೀಯ ಸಮುದಾಯ ಸರಿಯಾದ ಪಾಠ ಕಲಿಸಿತ್ತು.

ಟೊರಂಟೋದಲ್ಲಿ ಭಾರತದ ವಿರುದ್ಧ ಘೋಷಣೆ ಕೂಗುತ್ತಾ ಖಲಿಸ್ತಾನಿ ಧ್ವಜವನ್ನು ಹಿಡಿದುಕೊಂಡು ಗಲಾಟೆ ಮಾಡಿದ್ದರು, ಅದಕ್ಕೆ ಪ್ರತಿಯಾಗಿ ಭಾರತೀಯರು ಭಾರತದ ಧ್ವಜವನ್ನು ಪ್ರದರ್ಶಿಸಿ, ಜೈ ಕಾರ ಹಾಕುವ ಮೂಲಕ ತಕ್ಕ ಉತ್ತರ ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ