AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ
ವಿದ್ಯಾರ್ಥಿ
ನಯನಾ ರಾಜೀವ್
|

Updated on: Jul 14, 2023 | 12:52 PM

Share

ಸಿಡ್ನಿ, ಜುಲೈ 14: ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ. ಸಿಡ್ನಿಯ ಮೆರ್ರಿಲ್ಯಾಂಡ್ಸ್​ನಲ್ಲಿ ಮನೆಯಿಂದ ಕೆಲಸಕ್ಕೆ ಹೋಗುತ್ತಿರುವಾಗ ಖಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ 5.30ರ ವೇಳೆಗೆ ಕೆಲಸಕ್ಕೆ ಹೋಗುತ್ತಿರುವಾಗ 4-5 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ಆಸ್ಟ್ರೇಲಿಯನ್ ಟುಡೇ ವರದಿ ಮಾಡಿದೆ. ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಅದನ್ನು ಇಬ್ಬರು ಚಿತ್ರೀಕರಣ ಕೂಡ ಮಾಡಿದ್ದಾರೆ.

ಮನೆಯಿಂದ 50 ಮೀಟರ್ ದೂರದಲ್ಲಿ ಕಾರು ನಿಲ್ಲಿಸಿದ್ದ ವಿದ್ಯಾರ್ಥಿ, ಕಾರಿನಲ್ಲಿ ಹೋಗಿ ಕೂರುತ್ತಿದ್ದಂತೆ ಇದ್ದಕ್ಕಿದ್ದಂತೆ ಖಲಿಸ್ತಾನಿ ಬೆಂಬಲಿಗರು ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಕಾರಿನ ಬಾಗಿಲನ್ನು ತೆರೆದು ಮುಖಕ್ಕೆ ರಾಡ್​ನಿಂದ ಹೊಡೆದಿದ್ದರು.

ಮತ್ತಷ್ಟು ಓದಿ: Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ

ನಂತರ ಕಾರಿನಿಂದ ಹೊರಗೆಳೆದು ಕಬ್ಬಿಣದ ರಾಡ್​ನಿಂದ ಥಳಿಸಿದ್ದಾರೆ ಎಂದು ವಿದ್ಯಾರ್ಥಿ ಹೇಳಿದ್ದಾನೆ. ಈ ಘಟನೆಯನ್ನು ನೋಡಿ ಕೆಲವರು ದಾರಿಹೋಕರು ಪೊಲೀಸರಿಗೆ ಕರೆ ಮಾಡಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ವೈದ್ಯರನ್ನು ಕರೆತಂದರು.

ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ವಿದ್ಯಾರ್ಥಿಯನ್ನು ವೆಸ್ಟ್​ಮೀಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆನಡಾದಲ್ಲಿ ನಿರಂತರ ದಾಂಧಲೆ ಎಬ್ಬಿಸುತ್ತಿದ್ದ ಖಲಿಸ್ತಾನಿ ಬೆಂಬಲಿಗರಿಗೆ ಭಾರತೀಯ ಸಮುದಾಯ ಸರಿಯಾದ ಪಾಠ ಕಲಿಸಿತ್ತು.

ಟೊರಂಟೋದಲ್ಲಿ ಭಾರತದ ವಿರುದ್ಧ ಘೋಷಣೆ ಕೂಗುತ್ತಾ ಖಲಿಸ್ತಾನಿ ಧ್ವಜವನ್ನು ಹಿಡಿದುಕೊಂಡು ಗಲಾಟೆ ಮಾಡಿದ್ದರು, ಅದಕ್ಕೆ ಪ್ರತಿಯಾಗಿ ಭಾರತೀಯರು ಭಾರತದ ಧ್ವಜವನ್ನು ಪ್ರದರ್ಶಿಸಿ, ಜೈ ಕಾರ ಹಾಕುವ ಮೂಲಕ ತಕ್ಕ ಉತ್ತರ ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ