AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ
ವಿದ್ಯಾರ್ಥಿ
ನಯನಾ ರಾಜೀವ್
|

Updated on: Jul 14, 2023 | 12:52 PM

Share

ಸಿಡ್ನಿ, ಜುಲೈ 14: ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ. ಸಿಡ್ನಿಯ ಮೆರ್ರಿಲ್ಯಾಂಡ್ಸ್​ನಲ್ಲಿ ಮನೆಯಿಂದ ಕೆಲಸಕ್ಕೆ ಹೋಗುತ್ತಿರುವಾಗ ಖಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ 5.30ರ ವೇಳೆಗೆ ಕೆಲಸಕ್ಕೆ ಹೋಗುತ್ತಿರುವಾಗ 4-5 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ಆಸ್ಟ್ರೇಲಿಯನ್ ಟುಡೇ ವರದಿ ಮಾಡಿದೆ. ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಅದನ್ನು ಇಬ್ಬರು ಚಿತ್ರೀಕರಣ ಕೂಡ ಮಾಡಿದ್ದಾರೆ.

ಮನೆಯಿಂದ 50 ಮೀಟರ್ ದೂರದಲ್ಲಿ ಕಾರು ನಿಲ್ಲಿಸಿದ್ದ ವಿದ್ಯಾರ್ಥಿ, ಕಾರಿನಲ್ಲಿ ಹೋಗಿ ಕೂರುತ್ತಿದ್ದಂತೆ ಇದ್ದಕ್ಕಿದ್ದಂತೆ ಖಲಿಸ್ತಾನಿ ಬೆಂಬಲಿಗರು ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಕಾರಿನ ಬಾಗಿಲನ್ನು ತೆರೆದು ಮುಖಕ್ಕೆ ರಾಡ್​ನಿಂದ ಹೊಡೆದಿದ್ದರು.

ಮತ್ತಷ್ಟು ಓದಿ: Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ

ನಂತರ ಕಾರಿನಿಂದ ಹೊರಗೆಳೆದು ಕಬ್ಬಿಣದ ರಾಡ್​ನಿಂದ ಥಳಿಸಿದ್ದಾರೆ ಎಂದು ವಿದ್ಯಾರ್ಥಿ ಹೇಳಿದ್ದಾನೆ. ಈ ಘಟನೆಯನ್ನು ನೋಡಿ ಕೆಲವರು ದಾರಿಹೋಕರು ಪೊಲೀಸರಿಗೆ ಕರೆ ಮಾಡಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ವೈದ್ಯರನ್ನು ಕರೆತಂದರು.

ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ವಿದ್ಯಾರ್ಥಿಯನ್ನು ವೆಸ್ಟ್​ಮೀಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆನಡಾದಲ್ಲಿ ನಿರಂತರ ದಾಂಧಲೆ ಎಬ್ಬಿಸುತ್ತಿದ್ದ ಖಲಿಸ್ತಾನಿ ಬೆಂಬಲಿಗರಿಗೆ ಭಾರತೀಯ ಸಮುದಾಯ ಸರಿಯಾದ ಪಾಠ ಕಲಿಸಿತ್ತು.

ಟೊರಂಟೋದಲ್ಲಿ ಭಾರತದ ವಿರುದ್ಧ ಘೋಷಣೆ ಕೂಗುತ್ತಾ ಖಲಿಸ್ತಾನಿ ಧ್ವಜವನ್ನು ಹಿಡಿದುಕೊಂಡು ಗಲಾಟೆ ಮಾಡಿದ್ದರು, ಅದಕ್ಕೆ ಪ್ರತಿಯಾಗಿ ಭಾರತೀಯರು ಭಾರತದ ಧ್ವಜವನ್ನು ಪ್ರದರ್ಶಿಸಿ, ಜೈ ಕಾರ ಹಾಕುವ ಮೂಲಕ ತಕ್ಕ ಉತ್ತರ ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್