AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ.

ಸಿಡ್ನಿಯಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಭಾರತೀಯ ವಿದ್ಯಾರ್ಥಿಗೆ ರಾಡ್​ನಿಂದ ಥಳಿತ
ವಿದ್ಯಾರ್ಥಿ
ನಯನಾ ರಾಜೀವ್
|

Updated on: Jul 14, 2023 | 12:52 PM

Share

ಸಿಡ್ನಿ, ಜುಲೈ 14: ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ(Khalistani) ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬನನ್ನು ರಾಡ್​ನಿಂದ ಥಳಿಸಿರುವ ವಿಚಾರ ಬೆಳಕಿಗೆ ಬಂದಿದೆ. ಸಿಡ್ನಿಯ ಮೆರ್ರಿಲ್ಯಾಂಡ್ಸ್​ನಲ್ಲಿ ಮನೆಯಿಂದ ಕೆಲಸಕ್ಕೆ ಹೋಗುತ್ತಿರುವಾಗ ಖಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ 5.30ರ ವೇಳೆಗೆ ಕೆಲಸಕ್ಕೆ ಹೋಗುತ್ತಿರುವಾಗ 4-5 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ ಎಂದು ಆಸ್ಟ್ರೇಲಿಯನ್ ಟುಡೇ ವರದಿ ಮಾಡಿದೆ. ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಅದನ್ನು ಇಬ್ಬರು ಚಿತ್ರೀಕರಣ ಕೂಡ ಮಾಡಿದ್ದಾರೆ.

ಮನೆಯಿಂದ 50 ಮೀಟರ್ ದೂರದಲ್ಲಿ ಕಾರು ನಿಲ್ಲಿಸಿದ್ದ ವಿದ್ಯಾರ್ಥಿ, ಕಾರಿನಲ್ಲಿ ಹೋಗಿ ಕೂರುತ್ತಿದ್ದಂತೆ ಇದ್ದಕ್ಕಿದ್ದಂತೆ ಖಲಿಸ್ತಾನಿ ಬೆಂಬಲಿಗರು ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಕಾರಿನ ಬಾಗಿಲನ್ನು ತೆರೆದು ಮುಖಕ್ಕೆ ರಾಡ್​ನಿಂದ ಹೊಡೆದಿದ್ದರು.

ಮತ್ತಷ್ಟು ಓದಿ: Khalistan Terrorists: ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿ 21 ಖಲಿಸ್ತಾನಿಗಳ ಹೆಸರು ಪ್ರಕಟಿಸಿದ ಎನ್​ಐಎ

ನಂತರ ಕಾರಿನಿಂದ ಹೊರಗೆಳೆದು ಕಬ್ಬಿಣದ ರಾಡ್​ನಿಂದ ಥಳಿಸಿದ್ದಾರೆ ಎಂದು ವಿದ್ಯಾರ್ಥಿ ಹೇಳಿದ್ದಾನೆ. ಈ ಘಟನೆಯನ್ನು ನೋಡಿ ಕೆಲವರು ದಾರಿಹೋಕರು ಪೊಲೀಸರಿಗೆ ಕರೆ ಮಾಡಿದ್ದಾರೆ, ಘಟನಾ ಸ್ಥಳಕ್ಕೆ ಪೊಲೀಸರು ವೈದ್ಯರನ್ನು ಕರೆತಂದರು.

ತಲೆ, ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ವಿದ್ಯಾರ್ಥಿಯನ್ನು ವೆಸ್ಟ್​ಮೀಡ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೆನಡಾದಲ್ಲಿ ನಿರಂತರ ದಾಂಧಲೆ ಎಬ್ಬಿಸುತ್ತಿದ್ದ ಖಲಿಸ್ತಾನಿ ಬೆಂಬಲಿಗರಿಗೆ ಭಾರತೀಯ ಸಮುದಾಯ ಸರಿಯಾದ ಪಾಠ ಕಲಿಸಿತ್ತು.

ಟೊರಂಟೋದಲ್ಲಿ ಭಾರತದ ವಿರುದ್ಧ ಘೋಷಣೆ ಕೂಗುತ್ತಾ ಖಲಿಸ್ತಾನಿ ಧ್ವಜವನ್ನು ಹಿಡಿದುಕೊಂಡು ಗಲಾಟೆ ಮಾಡಿದ್ದರು, ಅದಕ್ಕೆ ಪ್ರತಿಯಾಗಿ ಭಾರತೀಯರು ಭಾರತದ ಧ್ವಜವನ್ನು ಪ್ರದರ್ಶಿಸಿ, ಜೈ ಕಾರ ಹಾಕುವ ಮೂಲಕ ತಕ್ಕ ಉತ್ತರ ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ