AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!

ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 31, 2021 | 5:25 PM

Share

ಆಸ್ಟ್ರೇಲಿಯಾದ ಪರ್ತ್​ನಲ್ಲಿ ಹೊಸದಾಗಿ ಒಂದು ಕೊರೊನಾ ಕೇಸ್​ ಪತ್ತೆ ಆಗಿದೆ. ಇದರಿಂದ ಆತಂಕಗೊಂಡಿರುವ ಅಲ್ಲಿನ ಸ್ಥಳೀಯ ಆಡಳಿತ ಐದು ದಿನ ಲಾಕ್​ಡೌನ್​ ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ್ದಾರೆ.

ಪರ್ತ್​ನಲ್ಲಿರುವ ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ. ಭಾನುವಾರದಿಂದಲೇ ಲಾಕ್​ಡೌನ್​ ನಿಯಮ ಜಾರಿಗೆ ಬಂದಿದೆ. ಹೀಗಾಗಿ, ಮುಂಜಾನೆ ವ್ಯಾಯಾಮ, ಆರೋಗ್ಯ ಸೇವೆ, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾತ್ರ ಜನರು ಹೊರಗೆ ಬರಹುದಾಗಿದೆ. ಇನ್ನು, ಪರ್ತ್​​ನ ಶಾಲೆಗಳಿಗೆ ಐದು ದಿನ ಬರದಂತೆ ಮಕ್ಕಳಿಗೆ ಸೂಚಿಸಲಾಗಿದ್ದು, ಆನ್​ಲೈನ್​ ಮೂಲಕ ತರಗತಿ ನಡೆಯಲಿದೆ.

ಕೊರೊನಾ ವೈರಸ್​ ಹರಡದಂತೆ ನೋಡಿಕೊಳ್ಳಲು ಪರ್ತ್​​ನಲ್ಲಿ ಈ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ನಿಟ್ಟಿನಲ್ಲೂ ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ.

ಆಸ್ಟ್ರೇಲಿಯಾದ ಜನಸಂಖ್ಯೆ ಕೇವಲ 2.5 ಕೋಟಿ. ಈ ಪೈಕಿ 28,800 ಜನರಿಗೆ ಕೊರೊನಾ ದೃಢವಾಗಿದೆ. 909 ಜನರು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕಳೆದ ಬಾರಿ ಅಕ್ಟೋಬರ್​ನಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್​ ಮುಂದೂಡಲಾಗಿತ್ತು.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

Published On - 5:24 pm, Sun, 31 January 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್