AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!

ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 31, 2021 | 5:25 PM

Share

ಆಸ್ಟ್ರೇಲಿಯಾದ ಪರ್ತ್​ನಲ್ಲಿ ಹೊಸದಾಗಿ ಒಂದು ಕೊರೊನಾ ಕೇಸ್​ ಪತ್ತೆ ಆಗಿದೆ. ಇದರಿಂದ ಆತಂಕಗೊಂಡಿರುವ ಅಲ್ಲಿನ ಸ್ಥಳೀಯ ಆಡಳಿತ ಐದು ದಿನ ಲಾಕ್​ಡೌನ್​ ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ್ದಾರೆ.

ಪರ್ತ್​ನಲ್ಲಿರುವ ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ. ಭಾನುವಾರದಿಂದಲೇ ಲಾಕ್​ಡೌನ್​ ನಿಯಮ ಜಾರಿಗೆ ಬಂದಿದೆ. ಹೀಗಾಗಿ, ಮುಂಜಾನೆ ವ್ಯಾಯಾಮ, ಆರೋಗ್ಯ ಸೇವೆ, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾತ್ರ ಜನರು ಹೊರಗೆ ಬರಹುದಾಗಿದೆ. ಇನ್ನು, ಪರ್ತ್​​ನ ಶಾಲೆಗಳಿಗೆ ಐದು ದಿನ ಬರದಂತೆ ಮಕ್ಕಳಿಗೆ ಸೂಚಿಸಲಾಗಿದ್ದು, ಆನ್​ಲೈನ್​ ಮೂಲಕ ತರಗತಿ ನಡೆಯಲಿದೆ.

ಕೊರೊನಾ ವೈರಸ್​ ಹರಡದಂತೆ ನೋಡಿಕೊಳ್ಳಲು ಪರ್ತ್​​ನಲ್ಲಿ ಈ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ನಿಟ್ಟಿನಲ್ಲೂ ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ.

ಆಸ್ಟ್ರೇಲಿಯಾದ ಜನಸಂಖ್ಯೆ ಕೇವಲ 2.5 ಕೋಟಿ. ಈ ಪೈಕಿ 28,800 ಜನರಿಗೆ ಕೊರೊನಾ ದೃಢವಾಗಿದೆ. 909 ಜನರು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕಳೆದ ಬಾರಿ ಅಕ್ಟೋಬರ್​ನಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್​ ಮುಂದೂಡಲಾಗಿತ್ತು.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

Published On - 5:24 pm, Sun, 31 January 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!