AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!

ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ.

ಹೊಸದಾಗಿ ಒಂದು ಕೊರೊನಾ ಕೇಸ್​ ದೃಢವಾಗಿದ್ದಕ್ಕೆ ಐದು ದಿನ ಲಾಕ್​ಡೌನ್​!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 31, 2021 | 5:25 PM

Share

ಆಸ್ಟ್ರೇಲಿಯಾದ ಪರ್ತ್​ನಲ್ಲಿ ಹೊಸದಾಗಿ ಒಂದು ಕೊರೊನಾ ಕೇಸ್​ ಪತ್ತೆ ಆಗಿದೆ. ಇದರಿಂದ ಆತಂಕಗೊಂಡಿರುವ ಅಲ್ಲಿನ ಸ್ಥಳೀಯ ಆಡಳಿತ ಐದು ದಿನ ಲಾಕ್​ಡೌನ್​ ಘೋಷಣೆ ಮಾಡಿದೆ. ಅಷ್ಟೇ ಅಲ್ಲ, ನಿಯಮ ಮೀರಿದವರಿಗೆ ಕಠಿಣ ಶಿಕ್ಷೆಯ ಎಚ್ಚರಿಕೆ ನೀಡಿದ್ದಾರೆ.

ಪರ್ತ್​ನಲ್ಲಿರುವ ಕ್ವಾರಂಟೈನ್​ ಕೇಂದ್ರದ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಸ್ಥಳೀಯ ಆಡಳಿತ ಲಾಕ್​ಡೌನ್​ ಮೊರೆ ಹೋಗಿದೆ. ಭಾನುವಾರದಿಂದಲೇ ಲಾಕ್​ಡೌನ್​ ನಿಯಮ ಜಾರಿಗೆ ಬಂದಿದೆ. ಹೀಗಾಗಿ, ಮುಂಜಾನೆ ವ್ಯಾಯಾಮ, ಆರೋಗ್ಯ ಸೇವೆ, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾತ್ರ ಜನರು ಹೊರಗೆ ಬರಹುದಾಗಿದೆ. ಇನ್ನು, ಪರ್ತ್​​ನ ಶಾಲೆಗಳಿಗೆ ಐದು ದಿನ ಬರದಂತೆ ಮಕ್ಕಳಿಗೆ ಸೂಚಿಸಲಾಗಿದ್ದು, ಆನ್​ಲೈನ್​ ಮೂಲಕ ತರಗತಿ ನಡೆಯಲಿದೆ.

ಕೊರೊನಾ ವೈರಸ್​ ಹರಡದಂತೆ ನೋಡಿಕೊಳ್ಳಲು ಪರ್ತ್​​ನಲ್ಲಿ ಈ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭದ್ರತಾ ಸಿಬ್ಬಂದಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ನಿಟ್ಟಿನಲ್ಲೂ ಅಧಿಕಾರಿಗಳು ಗಮನ ಹರಿಸುತ್ತಿದ್ದಾರೆ.

ಆಸ್ಟ್ರೇಲಿಯಾದ ಜನಸಂಖ್ಯೆ ಕೇವಲ 2.5 ಕೋಟಿ. ಈ ಪೈಕಿ 28,800 ಜನರಿಗೆ ಕೊರೊನಾ ದೃಢವಾಗಿದೆ. 909 ಜನರು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಆಸ್ಟ್ರೇಲಿಯಾ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕಳೆದ ಬಾರಿ ಅಕ್ಟೋಬರ್​ನಲ್ಲಿ ನಡೆಯಬೇಕಿದ್ದ ಟಿ-20 ವಿಶ್ವಕಪ್​ ಮುಂದೂಡಲಾಗಿತ್ತು.

ಬರಲಿದೆ ಮತ್ತೊಂದು ಕೊರೊನಾ ಲಸಿಕೆ.. ಭಾರತದ ಸೆರಮ್​ ಸಂಸ್ಥೆಯಿಂದಲೇ ಉತ್ಪಾದನೆ: 200 ಕೋಟಿ ಡೋಸ್​ ಲಸಿಕೆ ಬಿಡುಗಡೆಗೆ ಸಿದ್ಧತೆ

Published On - 5:24 pm, Sun, 31 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?