AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ

Covid19 Vaccine: ಇದರ ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ.

Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ
ಕೊವ್ಯಾಕ್ಸಿನ್ ಲಸಿಕೆ
TV9 Web
| Edited By: |

Updated on:Nov 01, 2021 | 6:26 PM

Share

ದೆಹಲಿ: ಆಸ್ಟ್ರೇಲಿಯಾದ ಥೆರಪೆಟಿಕ್ ಗೂಡ್ಸ್ ಅಡ್ಮಿನಿಸ್ಟ್ರೇಷನ್ (ಟಿಜಿಎ) ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ ಹೆಸರಿನ ಕೊವಿಡ್ 19 ವಿರುದ್ಧದ ಲಸಿಕೆಯನ್ನು ಅಂಗೀಕರಿಸಿದೆ. ಈ ಲಸಿಕೆಯು ಆಸ್ಟ್ರೇಲಿಯಾದಲ್ಲಿ ರಿಜಿಸ್ಟರ್ ಆಗಿಲ್ಲ. ಆದರೆ ಗಣನೀಯ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಗುರುತಿಸಿ ಈ ನಿರ್ಧಾರ ಕೈಗೊಂಡಿದೆ.

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಜೊತೆಗೆ ಚೀನಾದ BBIBP- CorV ಕೂಡ ಆಸ್ಟ್ರೇಲಿಯಾದ ಪಟ್ಟಿ ಸೇರಿಕೊಂಡಿದೆ. ಟಿಜಿಎಯು ಇತ್ತೀಚೆಗಿನ ವಾರದಲ್ಲಿ ಕಂಡುಕೊಂಡ ಮಾಹಿತಿಯನ್ನು ಮತ್ತು ಅಂಕಿ ಅಂಶಗಳನ್ನು ಹೇಳಿದೆ. ಅದರಂತೆ, ಮೇಲೆ ಉಲ್ಲೇಖಿಸಿರುವ ಲಸಿಕೆಗಳು ಕೊರೊನಾ ಹರಡುವಿಕೆಯನ್ನು ತಡೆಗಟ್ಟುತ್ತವೆ ಎಂದು ತಿಳಿಸಿದೆ.

ಇದರ ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ. ಆಸ್ಟ್ರೇಲಿಯಾದಲ್ಲಿ ಏಷ್ಯಾದ ಈ ಉಭಯ ದೇಶಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು, ಕೆಲಸಗಾರರು ಬಹಳಷ್ಟು ಸಂಖ್ಯೆಯಲ್ಲಿ ಇದ್ದಾರೆ.

ಕೊವ್ಯಾಕ್ಸಿನ್ ಭಾರತದ ಮೊದಲ ಸ್ವದೇಶಿ ಕೊವಿಡ್ 19 ಲಸಿಕೆ ಆಗಿದೆ. ಇದನ್ನು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದೆ. ಐಸಿಎಮ್​ಆರ್ ಮತ್ತು ಎನ್​ಐವಿ ಜೊತೆಗೂಡಿ ಈ ಲಸಿಕೆ ಸಿದ್ಧಪಡಿಸಲಾಗಿದೆ. ಮಾರಿಷಸ್, ಓಮನ್, ಫಿಲಿಫೈನ್ಸ್, ನೇಪಾಳ, ಮೆಕ್ಸಿಕೊ, ಇರಾನ್, ಶ್ರೀಲಂಕಾ, ಗ್ರೀಸ್, ಎಸ್ಟೋನಿಯಾ ಮತ್ತು ಜಿಂಬಾಬ್ವೆ ಈ ಲಸಿಕೆಗೆ ಅನುಮೋದನೆ ಸೂಚಿಸಿವೆ.

ಇದನ್ನೂ ಓದಿ: ಝೈಡಸ್ ಕ್ಯಾಡಿಲಾ ಕೊವಿಡ್ ಲಸಿಕೆ ಬೆಲೆಯನ್ನು ₹265ಗೆ ಇಳಿಸಲು ಒಪ್ಪಿಗೆ, ಶೀಘ್ರದಲ್ಲೇ ಅಂತಿಮ ನಿರ್ಧಾರ: ವರದಿ

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

Published On - 6:02 pm, Mon, 1 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್