AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ

Covid19 Vaccine: ಇದರ ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ.

Covaxin Vaccine: ಕೊವ್ಯಾಕ್ಸಿನ್ ಲಸಿಕೆಯನ್ನು ಅಂಗೀಕರಿಸಿದ ಆಸ್ಟ್ರೇಲಿಯಾ
ಕೊವ್ಯಾಕ್ಸಿನ್ ಲಸಿಕೆ
TV9 Web
| Edited By: |

Updated on:Nov 01, 2021 | 6:26 PM

Share

ದೆಹಲಿ: ಆಸ್ಟ್ರೇಲಿಯಾದ ಥೆರಪೆಟಿಕ್ ಗೂಡ್ಸ್ ಅಡ್ಮಿನಿಸ್ಟ್ರೇಷನ್ (ಟಿಜಿಎ) ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ ಹೆಸರಿನ ಕೊವಿಡ್ 19 ವಿರುದ್ಧದ ಲಸಿಕೆಯನ್ನು ಅಂಗೀಕರಿಸಿದೆ. ಈ ಲಸಿಕೆಯು ಆಸ್ಟ್ರೇಲಿಯಾದಲ್ಲಿ ರಿಜಿಸ್ಟರ್ ಆಗಿಲ್ಲ. ಆದರೆ ಗಣನೀಯ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಗುರುತಿಸಿ ಈ ನಿರ್ಧಾರ ಕೈಗೊಂಡಿದೆ.

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಜೊತೆಗೆ ಚೀನಾದ BBIBP- CorV ಕೂಡ ಆಸ್ಟ್ರೇಲಿಯಾದ ಪಟ್ಟಿ ಸೇರಿಕೊಂಡಿದೆ. ಟಿಜಿಎಯು ಇತ್ತೀಚೆಗಿನ ವಾರದಲ್ಲಿ ಕಂಡುಕೊಂಡ ಮಾಹಿತಿಯನ್ನು ಮತ್ತು ಅಂಕಿ ಅಂಶಗಳನ್ನು ಹೇಳಿದೆ. ಅದರಂತೆ, ಮೇಲೆ ಉಲ್ಲೇಖಿಸಿರುವ ಲಸಿಕೆಗಳು ಕೊರೊನಾ ಹರಡುವಿಕೆಯನ್ನು ತಡೆಗಟ್ಟುತ್ತವೆ ಎಂದು ತಿಳಿಸಿದೆ.

ಇದರ ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ. ಆಸ್ಟ್ರೇಲಿಯಾದಲ್ಲಿ ಏಷ್ಯಾದ ಈ ಉಭಯ ದೇಶಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು, ಕೆಲಸಗಾರರು ಬಹಳಷ್ಟು ಸಂಖ್ಯೆಯಲ್ಲಿ ಇದ್ದಾರೆ.

ಕೊವ್ಯಾಕ್ಸಿನ್ ಭಾರತದ ಮೊದಲ ಸ್ವದೇಶಿ ಕೊವಿಡ್ 19 ಲಸಿಕೆ ಆಗಿದೆ. ಇದನ್ನು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದೆ. ಐಸಿಎಮ್​ಆರ್ ಮತ್ತು ಎನ್​ಐವಿ ಜೊತೆಗೂಡಿ ಈ ಲಸಿಕೆ ಸಿದ್ಧಪಡಿಸಲಾಗಿದೆ. ಮಾರಿಷಸ್, ಓಮನ್, ಫಿಲಿಫೈನ್ಸ್, ನೇಪಾಳ, ಮೆಕ್ಸಿಕೊ, ಇರಾನ್, ಶ್ರೀಲಂಕಾ, ಗ್ರೀಸ್, ಎಸ್ಟೋನಿಯಾ ಮತ್ತು ಜಿಂಬಾಬ್ವೆ ಈ ಲಸಿಕೆಗೆ ಅನುಮೋದನೆ ಸೂಚಿಸಿವೆ.

ಇದನ್ನೂ ಓದಿ: ಝೈಡಸ್ ಕ್ಯಾಡಿಲಾ ಕೊವಿಡ್ ಲಸಿಕೆ ಬೆಲೆಯನ್ನು ₹265ಗೆ ಇಳಿಸಲು ಒಪ್ಪಿಗೆ, ಶೀಘ್ರದಲ್ಲೇ ಅಂತಿಮ ನಿರ್ಧಾರ: ವರದಿ

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

Published On - 6:02 pm, Mon, 1 November 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್