AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೈಗೆ ಇಲ್ಲ ಬಲ, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ

75ರ ಹರೆಯದ ರಶ್ದಿ ಅವರ ಗಾಯಗಳು ತೀವ್ರವಾಗಿದೆ. ಅವರು "ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ" ಎಂದು ರಶ್ದಿಯವರ ಸಾಹಿತ್ಯಿಕ ಏಜೆಂಟ್ ಆಂಡ್ರ್ಯೂ ವೈಲ್ ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ...

ಒಂದು ಕೈಗೆ ಇಲ್ಲ ಬಲ, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ
ಸಲ್ಮಾನ್ ರಶ್ದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 23, 2022 | 9:18 PM

Share

ಆಗಸ್ಟ್ ತಿಂಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ನ ನ್ಯೂಯಾರ್ಕ್ ನಗರದಲ್ಲಿ ನಡೆದ ಸಾಹಿತ್ಯಿಕ ಸಮಾರಂಭದಲ್ಲಿ ಲೇಖಕ ಸಲ್ಮಾನ್ ರಶ್ದಿ (Salman Rushdie) ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ದುಷ್ಕರ್ಮಿಯೊಬ್ಬ ವೇದಿಕೆ ಮೇಲಿದ್ದ ರಶ್ದಿ ಕುತ್ತಿಗೆ ಮತ್ತು ತಲೆ ಮತ್ತು ದೇಹದ ಇತರ ಭಾಗಗಳಿಗೆ ಹಲವು ಬಾರಿ ಇರಿದಿದ್ದ. ಗಂಭೀರ ಗಾಯಗೊಂಡ ರಶ್ದಿ ಚೇತರಿಸಿಕೊಂಡಿದ್ದರೂ ಅವರು ಕಣ್ಣಿನ ದೃಷ್ಟಿ ಮತ್ತು ಕೈಯಲ್ಲಿನ ಬಲ ಕಳೆದುಕೊಂಡಿದ್ದಾರೆ ಎಂದು ಅವರ ಏಜೆಂಟ್ ಹೇಳಿದ್ದಾರೆ. ತನ್ನ ಕಾದಂಬರಿ ದಿ ಸೈಟಾನಿಕ್ ವರ್ಸಸ್‌ಗಾಗಿ ಮರಣದಂಡನೆಯನ್ನು ಎದುರಿಸಿದ ಭಾರತೀಯ ಸಂಜಾತ ಬ್ರಿಟಿಷ್ ಬರಹಗಾರ ರಶ್ದಿಗೆ ದುರ್ಷರ್ಮಿ ಸುಮಾರು 12 ಬಾರಿ ಇರಿದಿದ್ದಾನೆ. ಆದರೆ ಎಷ್ಟು ಗಾಯಗಳಾಗಿತ್ತು ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.

75ರ ಹರೆಯದ ರಶ್ದಿ ಅವರ ಗಾಯಗಳು ತೀವ್ರವಾಗಿದೆ. ಅವರು “ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ” ಎಂದು ರಶ್ದಿಯವರ ಸಾಹಿತ್ಯಿಕ ಏಜೆಂಟ್ ಆಂಡ್ರ್ಯೂ ವೈಲ್ ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ ಹೇಳಿದ್ದಾರೆ. ರಶ್ಮಿ ಕುತ್ತಿಗೆಯಲ್ಲಿ ಮೂರು ಗಂಭೀರ ಗಾಯಗಳಿದ್ದವು ಎಂದು ವೈಲಿ ಹೇಳಿದರು.

ಕೈಯಲ್ಲಿ ನರಗಳು ಕತ್ತರಿಸಿದ ಕಾರಣ ಒಂದು ಕೈ ನಿಷ್ಕ್ರಿಯವಾಗಿದೆ. ಅವರ ಎದೆ ಮತ್ತು ತಲೆಯಲ್ಲಿ ಸುಮಾರು 15 ಗಾಯಗಳಿವೆ. ಆದ್ದರಿಂದ, ಇದು ಮಾರಣಾಂತಿಕ ದಾಳಿ ಎಂದ ವೈಲಿ, ರಶ್ದಿ ಆಸ್ಪತ್ರೆಯಲ್ಲಿಯೇ ಉಳಿದಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಲಿಲ್ಲ. ಹದಿ ಮತರ್ ಎಂಬ 24 ವರ್ಷದ ಯುವಕನನ್ನು ದಾಳಿಕೋರ ಎಂದು ಗುರುತಿಸಲಾಗಿದೆ. ದಾಳಿಯ ನಂತರ, ಇರಾನ್ ದಾಳಿಕೋರನೊಂದಿಗೆ ನಮಗೆ ಯಾವುದೇ ಸಂಬಂಧ ಇಲ್ಲ ಎಂದಿತ್ತು.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!