AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೈಗೆ ಇಲ್ಲ ಬಲ, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ

75ರ ಹರೆಯದ ರಶ್ದಿ ಅವರ ಗಾಯಗಳು ತೀವ್ರವಾಗಿದೆ. ಅವರು "ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ" ಎಂದು ರಶ್ದಿಯವರ ಸಾಹಿತ್ಯಿಕ ಏಜೆಂಟ್ ಆಂಡ್ರ್ಯೂ ವೈಲ್ ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ...

ಒಂದು ಕೈಗೆ ಇಲ್ಲ ಬಲ, ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ
ಸಲ್ಮಾನ್ ರಶ್ದಿ
TV9 Web
| Edited By: |

Updated on: Oct 23, 2022 | 9:18 PM

Share

ಆಗಸ್ಟ್ ತಿಂಗಳಲ್ಲಿ ಯುನೈಟೆಡ್ ಸ್ಟೇಟ್ಸ್‌ನ ನ್ಯೂಯಾರ್ಕ್ ನಗರದಲ್ಲಿ ನಡೆದ ಸಾಹಿತ್ಯಿಕ ಸಮಾರಂಭದಲ್ಲಿ ಲೇಖಕ ಸಲ್ಮಾನ್ ರಶ್ದಿ (Salman Rushdie) ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ದುಷ್ಕರ್ಮಿಯೊಬ್ಬ ವೇದಿಕೆ ಮೇಲಿದ್ದ ರಶ್ದಿ ಕುತ್ತಿಗೆ ಮತ್ತು ತಲೆ ಮತ್ತು ದೇಹದ ಇತರ ಭಾಗಗಳಿಗೆ ಹಲವು ಬಾರಿ ಇರಿದಿದ್ದ. ಗಂಭೀರ ಗಾಯಗೊಂಡ ರಶ್ದಿ ಚೇತರಿಸಿಕೊಂಡಿದ್ದರೂ ಅವರು ಕಣ್ಣಿನ ದೃಷ್ಟಿ ಮತ್ತು ಕೈಯಲ್ಲಿನ ಬಲ ಕಳೆದುಕೊಂಡಿದ್ದಾರೆ ಎಂದು ಅವರ ಏಜೆಂಟ್ ಹೇಳಿದ್ದಾರೆ. ತನ್ನ ಕಾದಂಬರಿ ದಿ ಸೈಟಾನಿಕ್ ವರ್ಸಸ್‌ಗಾಗಿ ಮರಣದಂಡನೆಯನ್ನು ಎದುರಿಸಿದ ಭಾರತೀಯ ಸಂಜಾತ ಬ್ರಿಟಿಷ್ ಬರಹಗಾರ ರಶ್ದಿಗೆ ದುರ್ಷರ್ಮಿ ಸುಮಾರು 12 ಬಾರಿ ಇರಿದಿದ್ದಾನೆ. ಆದರೆ ಎಷ್ಟು ಗಾಯಗಳಾಗಿತ್ತು ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.

75ರ ಹರೆಯದ ರಶ್ದಿ ಅವರ ಗಾಯಗಳು ತೀವ್ರವಾಗಿದೆ. ಅವರು “ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ” ಎಂದು ರಶ್ದಿಯವರ ಸಾಹಿತ್ಯಿಕ ಏಜೆಂಟ್ ಆಂಡ್ರ್ಯೂ ವೈಲ್ ಸ್ಪ್ಯಾನಿಷ್ ಪತ್ರಿಕೆ ಎಲ್ ಪೈಸ್‌ಗೆ ಹೇಳಿದ್ದಾರೆ. ರಶ್ಮಿ ಕುತ್ತಿಗೆಯಲ್ಲಿ ಮೂರು ಗಂಭೀರ ಗಾಯಗಳಿದ್ದವು ಎಂದು ವೈಲಿ ಹೇಳಿದರು.

ಕೈಯಲ್ಲಿ ನರಗಳು ಕತ್ತರಿಸಿದ ಕಾರಣ ಒಂದು ಕೈ ನಿಷ್ಕ್ರಿಯವಾಗಿದೆ. ಅವರ ಎದೆ ಮತ್ತು ತಲೆಯಲ್ಲಿ ಸುಮಾರು 15 ಗಾಯಗಳಿವೆ. ಆದ್ದರಿಂದ, ಇದು ಮಾರಣಾಂತಿಕ ದಾಳಿ ಎಂದ ವೈಲಿ, ರಶ್ದಿ ಆಸ್ಪತ್ರೆಯಲ್ಲಿಯೇ ಉಳಿದಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಲಿಲ್ಲ. ಹದಿ ಮತರ್ ಎಂಬ 24 ವರ್ಷದ ಯುವಕನನ್ನು ದಾಳಿಕೋರ ಎಂದು ಗುರುತಿಸಲಾಗಿದೆ. ದಾಳಿಯ ನಂತರ, ಇರಾನ್ ದಾಳಿಕೋರನೊಂದಿಗೆ ನಮಗೆ ಯಾವುದೇ ಸಂಬಂಧ ಇಲ್ಲ ಎಂದಿತ್ತು.

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ