AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ ಮೃತಟ್ಟಿದ್ದರು. ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಕೂಡ ಇಂದು ನಿಧನರಾಗಿದ್ದಾರೆ. ಈ ದಾಳಿಯ ನಂತರ ಅವರು ಕೋಮಾದಲ್ಲಿದ್ದರು. 1989ರಿಂದ ಇರಾನ್‌ನ ಸರ್ವೋಚ್ಚ ನಾಯಕರಾಗಿದ್ದ 86 ವರ್ಷದ ಖಮೇನಿ ಈ ದಾಳಿಯಲ್ಲಿ ಸಾವನ್ನಪ್ಪಿದ್ದರು. ಅವರ ಮಗಳು, ಮೊಮ್ಮಗ, ಸೊಸೆ ಮತ್ತು ಅಳಿಯ ಕೂಡ ಇಸ್ರೇಲ್-ಅಮೆರಿಕದ ದಾಳಿಗೆ ಬಲಿಯಾಗಿದ್ದರು. 

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ
Mansoureh Khojasteh
ಸುಷ್ಮಾ ಚಕ್ರೆ
|

Updated on: Mar 02, 2026 | 9:41 PM

Share

ಟೆಹ್ರಾನ್, ಮಾರ್ಚ್ 2: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು.

ಇರಾನ್‌ನ ಮಶಾದ್‌ನಲ್ಲಿ ಜನಿಸಿದ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (ಐಆರ್‌ಐಬಿ) ಮಾಜಿ ಉಪ ನಿರ್ದೇಶಕ ಹಸನ್ ಖೋಜಸ್ತೆ ಬಘರ್ಜಾದೆಹ್ ಅವರ ಸಹೋದರಿಯಾಗಿದ್ದ 79 ವರ್ಷದ ಮನ್ಸೌರೆಹ್ ಖೋಜಸ್ತೆಹ್ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದಾಗ ಟೆಹ್ರಾನ್‌ನಲ್ಲಿರುವ ತಮ್ಮ ಮನೆಯಲ್ಲಿ ಖಮೇನಿ ಅವರೊಂದಿಗೆ ಇದ್ದರು. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಖಮೇನಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಮನ್ಸೌರೆಹ್ ಖೋಜಸ್ತೆಹ್ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!

ಖಮೇನಿ ಮತ್ತು ಮನ್ಸೌರೆಹ್ ಖೋಜಸ್ತೆಹ್ 1964ರಲ್ಲಿ ವಿವಾಹವಾದರು. ಅವರಿಗೆ 6 ಮಕ್ಕಳು. ಅವರಲ್ಲಿ 4 ಗಂಡು ಮಕ್ಕಳು (ಮೊಸ್ತಫಾ, ಮೊಜ್ತಬಾ, ಮಸೌದ್ ಮತ್ತು ಮೇಸಮ್) ಮತ್ತು ಇಬ್ಬರು ಹೆಣ್ಣುಮಕ್ಕಳು (ಹೋಡಾ ಮತ್ತು ಬೋಶ್ರಾ). ಖಮೇನಿಯ ಸಾವು ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿಯನ್ನು ತೀವ್ರವಾಗಿ ಉಲ್ಬಣಗೊಳಿಸಿದೆ. ಇರಾನ್ ತನ್ನ ಸರ್ವೋಚ್ಚ ನಾಯಕನ ಸಾವಿಗೆ ಸೇಡು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ.

ಇರಾನ್ ಗಲ್ಫ್ ರಾಷ್ಟ್ರಗಳ ಅನೇಕ ಯುಎಸ್ ವಾಯುನೆಲೆಗಳನ್ನು ಸಹ ಗುರಿಯಾಗಿಸಿಕೊಂಡಿದೆ. ಇರಾನ್ ಇಸ್ರೇಲ್ ಅನ್ನು ಸಹ ಗುರಿಯಾಗಿಸಿಕೊಂಡಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ಸಹ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?