AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ ಮೃತಟ್ಟಿದ್ದರು. ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಕೂಡ ಇಂದು ನಿಧನರಾಗಿದ್ದಾರೆ. ಈ ದಾಳಿಯ ನಂತರ ಅವರು ಕೋಮಾದಲ್ಲಿದ್ದರು. 1989ರಿಂದ ಇರಾನ್‌ನ ಸರ್ವೋಚ್ಚ ನಾಯಕರಾಗಿದ್ದ 86 ವರ್ಷದ ಖಮೇನಿ ಈ ದಾಳಿಯಲ್ಲಿ ಸಾವನ್ನಪ್ಪಿದ್ದರು. ಅವರ ಮಗಳು, ಮೊಮ್ಮಗ, ಸೊಸೆ ಮತ್ತು ಅಳಿಯ ಕೂಡ ಇಸ್ರೇಲ್-ಅಮೆರಿಕದ ದಾಳಿಗೆ ಬಲಿಯಾಗಿದ್ದರು. 

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ
Mansoureh Khojasteh
ಸುಷ್ಮಾ ಚಕ್ರೆ
|

Updated on: Mar 02, 2026 | 9:41 PM

Share

ಟೆಹ್ರಾನ್, ಮಾರ್ಚ್ 2: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು.

ಇರಾನ್‌ನ ಮಶಾದ್‌ನಲ್ಲಿ ಜನಿಸಿದ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (ಐಆರ್‌ಐಬಿ) ಮಾಜಿ ಉಪ ನಿರ್ದೇಶಕ ಹಸನ್ ಖೋಜಸ್ತೆ ಬಘರ್ಜಾದೆಹ್ ಅವರ ಸಹೋದರಿಯಾಗಿದ್ದ 79 ವರ್ಷದ ಮನ್ಸೌರೆಹ್ ಖೋಜಸ್ತೆಹ್ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದಾಗ ಟೆಹ್ರಾನ್‌ನಲ್ಲಿರುವ ತಮ್ಮ ಮನೆಯಲ್ಲಿ ಖಮೇನಿ ಅವರೊಂದಿಗೆ ಇದ್ದರು. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಖಮೇನಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಮನ್ಸೌರೆಹ್ ಖೋಜಸ್ತೆಹ್ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ!

ಖಮೇನಿ ಮತ್ತು ಮನ್ಸೌರೆಹ್ ಖೋಜಸ್ತೆಹ್ 1964ರಲ್ಲಿ ವಿವಾಹವಾದರು. ಅವರಿಗೆ 6 ಮಕ್ಕಳು. ಅವರಲ್ಲಿ 4 ಗಂಡು ಮಕ್ಕಳು (ಮೊಸ್ತಫಾ, ಮೊಜ್ತಬಾ, ಮಸೌದ್ ಮತ್ತು ಮೇಸಮ್) ಮತ್ತು ಇಬ್ಬರು ಹೆಣ್ಣುಮಕ್ಕಳು (ಹೋಡಾ ಮತ್ತು ಬೋಶ್ರಾ). ಖಮೇನಿಯ ಸಾವು ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿಯನ್ನು ತೀವ್ರವಾಗಿ ಉಲ್ಬಣಗೊಳಿಸಿದೆ. ಇರಾನ್ ತನ್ನ ಸರ್ವೋಚ್ಚ ನಾಯಕನ ಸಾವಿಗೆ ಸೇಡು ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದೆ.

ಇರಾನ್ ಗಲ್ಫ್ ರಾಷ್ಟ್ರಗಳ ಅನೇಕ ಯುಎಸ್ ವಾಯುನೆಲೆಗಳನ್ನು ಸಹ ಗುರಿಯಾಗಿಸಿಕೊಂಡಿದೆ. ಇರಾನ್ ಇಸ್ರೇಲ್ ಅನ್ನು ಸಹ ಗುರಿಯಾಗಿಸಿಕೊಂಡಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ಸಹ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ