AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ. ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ. ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, […]

ಅಯೋಧ್ಯೆಯಲ್ಲಿ ಭೂಮಿ ಪೂಜೆ, ಅಮೆರಿಕದಲ್ಲಿ ಮಂತ್ರ ಘೋಷಣೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 01, 2020 | 4:47 PM

Share

ಆಗಸ್ಟ್ 5, 2020 ಅಸಂಖ್ಯಾತ ಶ್ರೀರಾಮಚಂದ್ರನ ಭಕ್ತರ ಪಾಲಿಗೆ ಅವಿಸ್ಮರಣೀಯ ದಿನ. ಯಾಕಂದ್ರೆ ಅಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಬಹುದಿನಗಳ ರಾಮಭಕ್ತರ ಕನಸು ನನಸಾಗಿಸುವ ನಿಟ್ಟಿನಲ್ಲಿ ಮೊದಲ ಮಹತ್ವಪೂರ್ಣ ಕೆಲಸವನ್ನು ನೆರವೇರಿಸಲಿದ್ದಾರೆ.

ಹೌದು ಆಗಸ್ಟ್ 5ರಂದು ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿಲಿದ್ದಾರೆ.ಈ ಸಂದರ್ಭದಲ್ಲಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಕೋಟಿ ಕೋಟಿ ರಾಮಭಕ್ತರು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಸಂಭ್ರಮಿಸಲಿದ್ದಾರೆ.

ಅಮೆರಿಕ, ಯುರೋಪ್‌, ಲ್ಯಾಟಿನ್ ಅಮೆರಿಕ, ಕೆರಿಬಿಯನ್‌ ದ್ವಿಪಗಳು ಮತ್ತು ಕೆನಡಾ ಸೇರಿದಂತೆ ಅಲ್ಲಿನ ಹಿಂದೂ ದೇವಾಲಯಗಳ ಸಂಘಟನೆಗಳು ಅಂದು ರಾಮನಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಭಾರತದಲ್ಲಿ ನಡೆಯುವ ಕಾರ್ಯಕ್ರಮದ ಲೈವ್‌ ಪ್ರಸಾರದ ಸಂದರ್ಭದಲ್ಲಿ ಅಲ್ಲಿನ ದೇವಸ್ಥಾನಗಳ ಮುಖ್ಯಸ್ಥರು ಮತ್ತು ಪೂಜಾರಿಗಳ ಸಂಘಟನೆಗಳು ಲೈವ್‌ ನಡೆಯುವಾಗ ಆನ್‌ಲೈನ್‌ನಲ್ಲಿಯೇ ವಿಶೇಷ ಪ್ರಸಾರ, ಪೂಜೆ ಮತ್ತು ಮಂತ್ರಗಳ ಪಠನ ಮಾಡಲಿದ್ದಾರೆ.

ಹೀಗೆ ಮಾಡುವ ಮೂಲಕ ರಾಮ ಮಂದಿರ ನಿರ್ಮಾಣದಿಂದ ವಿಶ್ವಾದ್ಯಂತ ಇರುವ ರಾಮ ಭಕ್ತರಿಗೆ ಆಗುತ್ತಿರುವ ಆನಂದವನ್ನು ಅವರು ವ್ಯಕ್ತಪಡಿಸುತ್ತಿದ್ದಾರೆ. ಅಮೆರಿಕದಲ್ಲಿರುವ ವಿಶ್ವ ಹಿಂದೂ ಪರಿಷತ್‌ ಸಂಘಟನೆ ಅಮೆರಿಕದ ಪ್ರಮುಖ ಸ್ಥಳಗಳಲ್ಲಿ ಅಯೋಧ್ಯೆಯಲ್ಲಿನ ಭೂಮಿ ಪೂಜೆಯ ನೇರ ಪ್ರಸಾರಕ್ಕೆ ಮತ್ತು ವಿಶೇಷ ಪೂಜೆಗೆ ವ್ಯವಸ್ಥೆ ಮಾಡುತ್ತಿದೆ.

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ