AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವನ್ನು ಕಾರಿನಲ್ಲೇ ಮಲಗಿಸಿ ಮರೆತು ಹೋಗಿದ್ದ ತಂದೆ, 7 ಗಂಟೆಯ ಬಳಿಕ ವಾಪಸಾಗುವಷ್ಟರಲ್ಲಿ ಮಗುವಿನ ಪ್ರಾಣಪಕ್ಷಿ ಹಾರಿಹೋಗಿತ್ತು

ತಂದೆಯೊಬ್ಬ ಮಗುವನ್ನು ಕಾರಿನಲ್ಲಿ ಮಲಗಿಸಿ ಮರೆತು ಹೊರಗೆ ಹೋಗಿ ಏಳು ಗಂಟೆಗಳ ಬಳಿಕ ಬಂದು ನೋಡುವಾಗ ಆಗಲೇ ಮಗುವಿನ ಪ್ರಾಣಪಕ್ಷಿ ಹಾರಿಹೋಗಿತ್ತು. ಪೋರ್ಚುಗಲ್​ನಲ್ಲಿ ಈ ಘಟನೆ ನಡೆದಿದೆ, ವ್ಯಕ್ತಿಯೊಬ್ಬ ಮಗುವನ್ನು ಕಾರಿನಲ್ಲೇ ಮಲಗಿಸಿ ಮರೆತು ಹೊರ ಹೋಗಿದ್ದಾನೆ, ಬಿಸಿಲಿನಲ್ಲಿ ಕಾರು ನಿಂತಿದ್ದ ಕಾರಣ ಉಸಿರು ಗಟ್ಟಿ, ಜತೆಗೆ ಶಾಖದಿಂದಾಗಿ ಮಗು ಕೊನೆಯುಸಿರೆಳೆದಿದೆ.

ಮಗುವನ್ನು ಕಾರಿನಲ್ಲೇ ಮಲಗಿಸಿ ಮರೆತು ಹೋಗಿದ್ದ ತಂದೆ, 7 ಗಂಟೆಯ ಬಳಿಕ ವಾಪಸಾಗುವಷ್ಟರಲ್ಲಿ ಮಗುವಿನ ಪ್ರಾಣಪಕ್ಷಿ ಹಾರಿಹೋಗಿತ್ತು
ಮಗು
ನಯನಾ ರಾಜೀವ್
|

Updated on: Sep 14, 2023 | 12:25 PM

Share

ತಂದೆಯೊಬ್ಬ ಮಗುವನ್ನು ಕಾರಿನಲ್ಲಿ ಮಲಗಿಸಿ ಮರೆತು ಹೊರಗೆ ಹೋಗಿ ಏಳು ಗಂಟೆಗಳ ಬಳಿಕ ಬಂದು ನೋಡುವಾಗ ಆಗಲೇ ಮಗುವಿನ ಪ್ರಾಣಪಕ್ಷಿ ಹಾರಿಹೋಗಿತ್ತು. ಪೋರ್ಚುಗಲ್​ನಲ್ಲಿ ಈ ಘಟನೆ ನಡೆದಿದೆ, ವ್ಯಕ್ತಿಯೊಬ್ಬ ಮಗುವನ್ನು ಕಾರಿನಲ್ಲೇ ಮಲಗಿಸಿ ಮರೆತು ಹೊರ ಹೋಗಿದ್ದಾನೆ, ಬಿಸಿಲಿನಲ್ಲಿ ಕಾರು ನಿಂತಿದ್ದ ಕಾರಣ ಉಸಿರು ಗಟ್ಟಿ, ಜತೆಗೆ ಶಾಖದಿಂದಾಗಿ ಮಗು ಕೊನೆಯುಸಿರೆಳೆದಿದೆ.

ಮಗುವಿನ ತಂದೆ, ವಿಜ್ಞಾನ ಮತ್ತು ತಂತ್ರಜ್ಞಾನ NOVA ವಿಶ್ವವಿದ್ಯಾಲಯದ ಉಪನ್ಯಾಸಕರಾಗಿದ್ದು, ಸೆಪ್ಟೆಂಬರ್ 12 ರಂದು ಬೆಳಗ್ಗೆ 8 ಗಂಟೆಗೆ ಕ್ಯಾಂಪಸ್ ಕ್ರೆಚ್‌ನ 100 ಮೀಟರ್ ಒಳಗೆ ಕಾರನ್ನು ನಿಲ್ಲಿಸಿದ್ದರು. ಅವರು ಕೆಲಸಕ್ಕೆ ಹೋಗುವ ಮೊದಲು ತಮ್ಮ ಮಗಳನ್ನು ನರ್ಸರಿಗೆ ಬಿಡಬೇಕಿತ್ತು.

ಆದರೆ, ಅವರು ಎಂದಿನಂತೆ ತಮ್ಮ ಮಗಳನ್ನು ಕರೆದುಕೊಂಡು ಹೋಗದೆ, ನೇರವಾಗಿ ತಮ್ಮ ಕಚೇರಿಗೆ ಹೋದರು ಎಂದು ಪೋರ್ಚುಗೀಸ್ ದಿನಪತ್ರಿಕೆ ವರದಿ ಮಾಡಿದೆ.

ಏಳು ಗಂಟೆಗಳ ನಂತರ, ಉಪನ್ಯಾಸಕರು ತಮ್ಮ ಕಾರಿಗೆ ಹಿಂತಿರುಗಿದರು ಮತ್ತು ಹಿಂಬದಿ ಸೀಟಿನಲ್ಲಿ ತಮ್ಮ ಮಗಳು ಪ್ರಜ್ಞಾಹೀನವಾಗಿರುವುದನ್ನು ಕಂಡು ಆಘಾತಕ್ಕೊಳಗಾದರು.

ಮತ್ತಷ್ಟು ಓದಿ: ಅಮೆರಿಕದಲ್ಲಿ ದಾವಣಗೆರೆ ಮೂಲದ ದಂಪತಿ, ಮಗು ಸಾವು: ಮೃತದೇಹ ತರಿಸಿಕೊಡುವಂತೆ ಸರ್ಕಾರಕ್ಕೆ ತಾಯಿ ಮನವಿ

ಮಗುವನ್ನು ಉಳಿಸಲು ಸಾಕಷ್ಟು ಪ್ರಯತ್ನ ಪಟ್ಟರು, ಆದರೂ ಮಗುವಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ತಕ್ಷಣವೇ ಆಂಬ್ಯುಲೆನ್ಸ್​ ಕರೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕೊನೆಗೆ ಮಗು ಮೃತಪಟ್ಟಿರುವುದಾಗಿ ಆಸ್ಪತ್ರೆ ಘೋಷಿಸಿತು. ಮಂಗಳವಾರದ ಪ್ರದೇಶದಲ್ಲಿ ತಾಪಮಾನವು ಸುಮಾರು 26 C ಆಗಿತ್ತು.

ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮಾಹಿತಿ ಇನ್ನೂ ಹೊರಬರಬೇಕಿದೆ. ತನಿಖಾಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಮಗುವಿನ ತಂದೆ ಕಾರಿನಲ್ಲೇ ಮಗುವನ್ನು ಮರೆತು ಕಾಲೇಜಿಗೆ ಹೋಗಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ