AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗ್ದಾದ್: ಜನರನ್ನು ಕೂಗಿ ಕರೆದು ಆತ್ಮಾಹುತಿ ಬಾಂಬ್​ ದಾಳಿ ಮಾಡಿದ; ಅವಳಿ ಸ್ಫೋಟಕ್ಕೆ 32 ಮಂದಿ ಬಲಿ

ಮಾರುಕಟ್ಟೆ ಬಳಿ ಬಂದ ವ್ಯಕ್ತಿಯೋರ್ವ ದೊಡ್ಡದಾಗಿ ಕೂಗಿ ಜನರನ್ನು ತನ್ನತ್ತ ಆಕರ್ಷಿಸಿದ್ದ. ನಂತರ ತಾನು ಕಟ್ಟಿಕೊಂಡಿದ್ದ ಬಾಂಬ್​​ ಸ್ಫೋಟ ಮಾಡಿಕೊಂಡಿದ್ದಾನೆ.

ಬಾಗ್ದಾದ್: ಜನರನ್ನು ಕೂಗಿ ಕರೆದು ಆತ್ಮಾಹುತಿ ಬಾಂಬ್​ ದಾಳಿ ಮಾಡಿದ; ಅವಳಿ ಸ್ಫೋಟಕ್ಕೆ 32 ಮಂದಿ ಬಲಿ
ಬಾಗ್ಧಾದ್​ನಲ್ಲಿ ನಡೆದ ಬಾಂಬ್​ ಸ್ಫೋಟದ ನಂತರದ ದೃಶ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Jan 21, 2021 | 8:21 PM

Share

ಬಾಗ್ಧಾದ್: ಇರಾಕ್​ ರಾಜಧಾನಿ ಬಾಗ್ಧಾದ್​ನಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್​ ದಾಳಿಗೆ 32 ಜನರು ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೇಂದ್ರ ಬಾಗ್ದಾದ್​​ನ ಬಾಬ್ ಅಲ್​​ ಶಾರ್ಕಿ ವಾಣಿಜ್ಯ ಪ್ರದೇಶದ ಬಳಿ ಈ ದಾಳಿ ನಡೆದಿದೆ. ಇದು ಜನ ಸಂದಣಿ ಪ್ರದೇಶವಾಗಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಿದೆ. ತಕ್ಷಣಕ್ಕೆ ಯಾರೊಬ್ಬರೂ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ. ಇದು ಇಸ್ಲಾಮಿಕ್ ಸ್ಟೇಟ್​ ಗ್ರೂಪ್​ನ ಕೃತ್ಯ ಎಂದು ಇರಾಕ್​ ಸೇನೆ ಆರೋಪಿಸಿದೆ.

ಇರಾಕ್​ ಆರೋಗ್ಯ ಸಚಿವ ಹಸನ್​ ಮೊಹ್ಮದ್​ ಅಲ್​ ತಮ್ಮಿ ಸಾವು-ನೋವಿನ ಬಗ್ಗೆ ವಿವರಣೆ ನೀಡಿದ್ದಾರೆ. ದಾಳಿ ವೇಳೆ ಒಟ್ಟು 32 ಜನರು ಮೃತಪಟ್ಟಿದ್ದು, 110 ಜನರು ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಮಾರುಕಟ್ಟೆ ಬಳಿ ಬಂದ ವ್ಯಕ್ತಿಯೋರ್ವ ದೊಡ್ಡದಾಗಿ ಕೂಗಿ ಜನರನ್ನು ತನ್ನತ್ತ ಆಕರ್ಷಿಸಿದ್ದ. ನಂತರ ತಾನು ಕಟ್ಟಿಕೊಂಡಿದ್ದ ಬಾಂಬ್​​ ಸ್ಫೋಟ ಮಾಡಿಕೊಂಡಿದ್ದಾನೆ. ಈತ ಮೃತಪಡುತ್ತಿದ್ದಂತೆ, ಅಲ್ಲಿಯೇ ಸಮೀಪದಲ್ಲಿ ತನ್ನನ್ನು ತಾನು ಸ್ಫೋಟ ಮಾಡಿಕೊಂಡಿದ್ದಾನೆ. 2018ರಲ್ಲಿ ಇದೇ ಭಾಗದಲ್ಲಿ ಆತ್ಮಾಹುತಿ ದಾಳಿ ನಡೆದಿತ್ತು. ಇದಾದ ಮೂರು ವರ್ಷಗಳ ನಂತರ ಮತ್ತೊಮ್ಮೆ ಬಾಗ್ಧಾದ್​ಅನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ.

ಇನ್ನು, ಸ್ಫೋಟ ನಡೆದ ಜಾಗ ಸಂಪೂರ್ಣ ನಾಶವಾಗಿದೆ. ಎಲ್ಲ ಕಡೆಗಳಲ್ಲಿ ರಕ್ತದೋಕುಳಿ ಹರಿದಿದೆ. ಅಂಗಡಿಗಳಲ್ಲಿ ತೂಗು ಹಾಕಿದ್ದ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ನಂತರ ಈ ಭಾಗದಲ್ಲಿ ಕಾಲ್ತುಳಿತ ಉಂಟಾಗಿದೆ.

ಅಕ್ರಮವಾಗಿ ಸಂಗ್ರಹಿಸಿದ ಪಟಾಕಿ: ಶಾರ್ಟ್ ಸರ್ಕ್ಯೂಟ್​ನಿಂದ ಸ್ಫೋಟ

Published On - 7:31 pm, Thu, 21 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ