AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗ್ದಾದ್: ಜನರನ್ನು ಕೂಗಿ ಕರೆದು ಆತ್ಮಾಹುತಿ ಬಾಂಬ್​ ದಾಳಿ ಮಾಡಿದ; ಅವಳಿ ಸ್ಫೋಟಕ್ಕೆ 32 ಮಂದಿ ಬಲಿ

ಮಾರುಕಟ್ಟೆ ಬಳಿ ಬಂದ ವ್ಯಕ್ತಿಯೋರ್ವ ದೊಡ್ಡದಾಗಿ ಕೂಗಿ ಜನರನ್ನು ತನ್ನತ್ತ ಆಕರ್ಷಿಸಿದ್ದ. ನಂತರ ತಾನು ಕಟ್ಟಿಕೊಂಡಿದ್ದ ಬಾಂಬ್​​ ಸ್ಫೋಟ ಮಾಡಿಕೊಂಡಿದ್ದಾನೆ.

ಬಾಗ್ದಾದ್: ಜನರನ್ನು ಕೂಗಿ ಕರೆದು ಆತ್ಮಾಹುತಿ ಬಾಂಬ್​ ದಾಳಿ ಮಾಡಿದ; ಅವಳಿ ಸ್ಫೋಟಕ್ಕೆ 32 ಮಂದಿ ಬಲಿ
ಬಾಗ್ಧಾದ್​ನಲ್ಲಿ ನಡೆದ ಬಾಂಬ್​ ಸ್ಫೋಟದ ನಂತರದ ದೃಶ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Jan 21, 2021 | 8:21 PM

Share

ಬಾಗ್ಧಾದ್: ಇರಾಕ್​ ರಾಜಧಾನಿ ಬಾಗ್ಧಾದ್​ನಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್​ ದಾಳಿಗೆ 32 ಜನರು ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಕೇಂದ್ರ ಬಾಗ್ದಾದ್​​ನ ಬಾಬ್ ಅಲ್​​ ಶಾರ್ಕಿ ವಾಣಿಜ್ಯ ಪ್ರದೇಶದ ಬಳಿ ಈ ದಾಳಿ ನಡೆದಿದೆ. ಇದು ಜನ ಸಂದಣಿ ಪ್ರದೇಶವಾಗಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಿದೆ. ತಕ್ಷಣಕ್ಕೆ ಯಾರೊಬ್ಬರೂ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ. ಇದು ಇಸ್ಲಾಮಿಕ್ ಸ್ಟೇಟ್​ ಗ್ರೂಪ್​ನ ಕೃತ್ಯ ಎಂದು ಇರಾಕ್​ ಸೇನೆ ಆರೋಪಿಸಿದೆ.

ಇರಾಕ್​ ಆರೋಗ್ಯ ಸಚಿವ ಹಸನ್​ ಮೊಹ್ಮದ್​ ಅಲ್​ ತಮ್ಮಿ ಸಾವು-ನೋವಿನ ಬಗ್ಗೆ ವಿವರಣೆ ನೀಡಿದ್ದಾರೆ. ದಾಳಿ ವೇಳೆ ಒಟ್ಟು 32 ಜನರು ಮೃತಪಟ್ಟಿದ್ದು, 110 ಜನರು ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.

ಮಾರುಕಟ್ಟೆ ಬಳಿ ಬಂದ ವ್ಯಕ್ತಿಯೋರ್ವ ದೊಡ್ಡದಾಗಿ ಕೂಗಿ ಜನರನ್ನು ತನ್ನತ್ತ ಆಕರ್ಷಿಸಿದ್ದ. ನಂತರ ತಾನು ಕಟ್ಟಿಕೊಂಡಿದ್ದ ಬಾಂಬ್​​ ಸ್ಫೋಟ ಮಾಡಿಕೊಂಡಿದ್ದಾನೆ. ಈತ ಮೃತಪಡುತ್ತಿದ್ದಂತೆ, ಅಲ್ಲಿಯೇ ಸಮೀಪದಲ್ಲಿ ತನ್ನನ್ನು ತಾನು ಸ್ಫೋಟ ಮಾಡಿಕೊಂಡಿದ್ದಾನೆ. 2018ರಲ್ಲಿ ಇದೇ ಭಾಗದಲ್ಲಿ ಆತ್ಮಾಹುತಿ ದಾಳಿ ನಡೆದಿತ್ತು. ಇದಾದ ಮೂರು ವರ್ಷಗಳ ನಂತರ ಮತ್ತೊಮ್ಮೆ ಬಾಗ್ಧಾದ್​ಅನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ.

ಇನ್ನು, ಸ್ಫೋಟ ನಡೆದ ಜಾಗ ಸಂಪೂರ್ಣ ನಾಶವಾಗಿದೆ. ಎಲ್ಲ ಕಡೆಗಳಲ್ಲಿ ರಕ್ತದೋಕುಳಿ ಹರಿದಿದೆ. ಅಂಗಡಿಗಳಲ್ಲಿ ತೂಗು ಹಾಕಿದ್ದ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ನಂತರ ಈ ಭಾಗದಲ್ಲಿ ಕಾಲ್ತುಳಿತ ಉಂಟಾಗಿದೆ.

ಅಕ್ರಮವಾಗಿ ಸಂಗ್ರಹಿಸಿದ ಪಟಾಕಿ: ಶಾರ್ಟ್ ಸರ್ಕ್ಯೂಟ್​ನಿಂದ ಸ್ಫೋಟ

Published On - 7:31 pm, Thu, 21 January 21

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ