AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಶಸ್ತ್ರ ಸಜ್ಜಿತ ದಾಳಿಕೋರರಿಂದ ಬಸ್ ಪ್ರಯಾಣಿಕರ ಅಪಹರಣ, 9 ಜನರ ಹತ್ಯೆ

ಪಾಕಿಸ್ತಾನದ ಬಲೂಚಿಸ್ತಾನ(Balochistan)ದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ. ಶುಕ್ರವಾರ ಬಸ್ಸಿನಲ್ಲಿದ್ದ 9 ಪಂಜಾಬ್​ನ ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.

ಪಾಕಿಸ್ತಾನ: ಶಸ್ತ್ರ ಸಜ್ಜಿತ ದಾಳಿಕೋರರಿಂದ ಬಸ್ ಪ್ರಯಾಣಿಕರ ಅಪಹರಣ, 9 ಜನರ ಹತ್ಯೆ
ಬಲೂಚಿಸ್ತಾನ
ನಯನಾ ರಾಜೀವ್
|

Updated on: Jul 11, 2025 | 11:39 AM

Share

ಬಲೂಚಿಸ್ತಾನ, ಜುಲೈ 11: ಪಾಕಿಸ್ತಾನದ ಬಲೂಚಿಸ್ತಾನ(Balochistan)ದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.

ಪ್ರಯಾಣಿಕರ ಗುರುತಿನ ಚೀಟಿ ಪರಿಶೀಲಿಸಿ ಹತ್ಯೆ ಶಸ್ತ್ರಸಜ್ಜಿತ ದಂಗೆಕೋರರು ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದರು ಮತ್ತು ಅವರಲ್ಲಿ ಒಂಬತ್ತು ಜನರನ್ನು ಕ್ವೆಟ್ಟಾದಿಂದ ಲಾಹೋರ್‌ಗೆ ಹೋಗುತ್ತಿದ್ದ ಬಸ್‌ನಿಂದ ಇಳಿಸಿ, ಗುಂಡಿಕ್ಕಿ ಕೊಂದಿದ್ದಾರೆ. ಒಂಬತ್ತು ಮಂದಿಯೂ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಿಗೆ ಸೇರಿದವರಾಗಿದ್ದು, ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗಾಗಿ ನಾವು ಒಂಬತ್ತು ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಅವರು ಹೇಳಿದರು.

ಬಲೂಚಿಸ್ತಾನದ ವಿವಿಧ ಹೆದ್ದಾರಿಗಳಲ್ಲಿ ಚಲಿಸುವ ಪಂಜಾಬ್ ಪ್ರಾಂತ್ಯದ ಜನರು ಮತ್ತು ಪ್ರಯಾಣಿಕ ಬಸ್‌ಗಳನ್ನು ಗುರಿಯಾಗಿಸಿಕೊಂಡು ದಂಗೆಕೋರರು ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ.

ಯಾವುದೇ ಗುಂಪು ಹೊಣೆ ಹೊತ್ತಿಲ್ಲ ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಹಿಂದೆ, ಬಲೂಚ್ ಭಯೋತ್ಪಾದಕ ಗುಂಪುಗಳು ಪಂಜಾಬ್ ಜನರ ವಿರುದ್ಧ ಇಂತಹ ದಾಳಿಗಳನ್ನು ನಡೆಸಿದೆ.

ಮತ್ತಷ್ಟು ಓದಿ: ಪಾಕಿಸ್ತಾನವನ್ನು ಸರ್ವನಾಶ ಮಾಡುತ್ತೇವೆ: ಬಲೂಚ್ ಬಂಡುಕೋರರ ಶಪಥ

ಕ್ವೆಟ್ಟಾ, ಲೊರಾಲೈ ಮತ್ತು ಮಸ್ತುಂಗ್‌ನಲ್ಲಿ ದಂಗೆಕೋರರು ಇತರ ಮೂರು ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದಾರೆ. ಆದರೆ ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್, ಭದ್ರತಾ ಪಡೆಗಳು ಈ ದಾಳಿಗಳನ್ನು ಹಿಮ್ಮೆಟ್ಟಿಸಿದವು ಎಂದು ಹೇಳಿದ್ದಾರೆ.

ದಂಗೆಕೋರರು ರಾತ್ರಿಯ ಸಮಯದಲ್ಲಿ ಪ್ರಾಂತ್ಯದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಮತ್ತು ಚೆಕ್ ಪೋಸ್ಟ್‌ಗಳು, ಸರ್ಕಾರಿ ಸ್ಥಾಪನೆಗಳು, ಪೊಲೀಸ್ ಠಾಣೆಗಳು, ಬ್ಯಾಂಕುಗಳು ಮತ್ತು ಟವ್ ಮೇಲೆ ದಾಳಿ ಮಾಡಿದ್ದಾರೆ. ಇರಾನ್ ಮತ್ತು ಅಫ್ಘಾನಿಸ್ತಾನದ ಗಡಿಯಲ್ಲಿರುವ ಬಲೂಚಿಸ್ತಾನದಲ್ಲಿ ದೀರ್ಘಕಾಲದಿಂದ ಧಂಗೆಗಳು ನಡೆಯುತ್ತಿವೆ.

ಮಾರ್ಚ್‌ನಲ್ಲಿ, ಗ್ವಾದರ್ ಬಂದರಿನ ಬಳಿಯ ಕಲ್ಮತ್ ಪ್ರದೇಶದಲ್ಲಿ ಲಾಂಗ್ ಬಾಡಿ ಟ್ರೇಲರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಐದು ಜನರನ್ನು ಗುಂಡಿಕ್ಕಿ ಕೊಲ್ಲಲಾಯಿತು, ಫೆಬ್ರವರಿಯಲ್ಲಿ, ದಂಗೆಕೋರರು ಪಂಜಾಬ್ ಪ್ರಾಂತ್ಯಕ್ಕೆ ಸೇರಿದ ಏಳು ಪ್ರಯಾಣಿಕರನ್ನು ಇಳಿಸಿ ಬರ್ಖಾನ್ ಪ್ರದೇಶದಲ್ಲಿ ಸ್ಥಳದಲ್ಲೇ ಕೊಂದಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು