AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ: ಶಸ್ತ್ರ ಸಜ್ಜಿತ ದಾಳಿಕೋರರಿಂದ ಬಸ್ ಪ್ರಯಾಣಿಕರ ಅಪಹರಣ, 9 ಜನರ ಹತ್ಯೆ

ಪಾಕಿಸ್ತಾನದ ಬಲೂಚಿಸ್ತಾನ(Balochistan)ದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ. ಶುಕ್ರವಾರ ಬಸ್ಸಿನಲ್ಲಿದ್ದ 9 ಪಂಜಾಬ್​ನ ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.

ಪಾಕಿಸ್ತಾನ: ಶಸ್ತ್ರ ಸಜ್ಜಿತ ದಾಳಿಕೋರರಿಂದ ಬಸ್ ಪ್ರಯಾಣಿಕರ ಅಪಹರಣ, 9 ಜನರ ಹತ್ಯೆ
ಬಲೂಚಿಸ್ತಾನ
ನಯನಾ ರಾಜೀವ್
|

Updated on: Jul 11, 2025 | 11:39 AM

Share

ಬಲೂಚಿಸ್ತಾನ, ಜುಲೈ 11: ಪಾಕಿಸ್ತಾನದ ಬಲೂಚಿಸ್ತಾನ(Balochistan)ದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.  ದುಷ್ಕರ್ಮಿಗಳು ಬಸ್ಸಿನಲ್ಲಿದ್ದ  ಪಂಜಾಬ್​ನ 9 ಪ್ರಯಾಣಿಕರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.

ಪ್ರಯಾಣಿಕರ ಗುರುತಿನ ಚೀಟಿ ಪರಿಶೀಲಿಸಿ ಹತ್ಯೆ ಶಸ್ತ್ರಸಜ್ಜಿತ ದಂಗೆಕೋರರು ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದರು ಮತ್ತು ಅವರಲ್ಲಿ ಒಂಬತ್ತು ಜನರನ್ನು ಕ್ವೆಟ್ಟಾದಿಂದ ಲಾಹೋರ್‌ಗೆ ಹೋಗುತ್ತಿದ್ದ ಬಸ್‌ನಿಂದ ಇಳಿಸಿ, ಗುಂಡಿಕ್ಕಿ ಕೊಂದಿದ್ದಾರೆ. ಒಂಬತ್ತು ಮಂದಿಯೂ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಿಗೆ ಸೇರಿದವರಾಗಿದ್ದು, ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗಾಗಿ ನಾವು ಒಂಬತ್ತು ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಅವರು ಹೇಳಿದರು.

ಬಲೂಚಿಸ್ತಾನದ ವಿವಿಧ ಹೆದ್ದಾರಿಗಳಲ್ಲಿ ಚಲಿಸುವ ಪಂಜಾಬ್ ಪ್ರಾಂತ್ಯದ ಜನರು ಮತ್ತು ಪ್ರಯಾಣಿಕ ಬಸ್‌ಗಳನ್ನು ಗುರಿಯಾಗಿಸಿಕೊಂಡು ದಂಗೆಕೋರರು ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ.

ಯಾವುದೇ ಗುಂಪು ಹೊಣೆ ಹೊತ್ತಿಲ್ಲ ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ, ಆದರೆ ಹಿಂದೆ, ಬಲೂಚ್ ಭಯೋತ್ಪಾದಕ ಗುಂಪುಗಳು ಪಂಜಾಬ್ ಜನರ ವಿರುದ್ಧ ಇಂತಹ ದಾಳಿಗಳನ್ನು ನಡೆಸಿದೆ.

ಮತ್ತಷ್ಟು ಓದಿ: ಪಾಕಿಸ್ತಾನವನ್ನು ಸರ್ವನಾಶ ಮಾಡುತ್ತೇವೆ: ಬಲೂಚ್ ಬಂಡುಕೋರರ ಶಪಥ

ಕ್ವೆಟ್ಟಾ, ಲೊರಾಲೈ ಮತ್ತು ಮಸ್ತುಂಗ್‌ನಲ್ಲಿ ದಂಗೆಕೋರರು ಇತರ ಮೂರು ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದಾರೆ. ಆದರೆ ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್, ಭದ್ರತಾ ಪಡೆಗಳು ಈ ದಾಳಿಗಳನ್ನು ಹಿಮ್ಮೆಟ್ಟಿಸಿದವು ಎಂದು ಹೇಳಿದ್ದಾರೆ.

ದಂಗೆಕೋರರು ರಾತ್ರಿಯ ಸಮಯದಲ್ಲಿ ಪ್ರಾಂತ್ಯದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಮತ್ತು ಚೆಕ್ ಪೋಸ್ಟ್‌ಗಳು, ಸರ್ಕಾರಿ ಸ್ಥಾಪನೆಗಳು, ಪೊಲೀಸ್ ಠಾಣೆಗಳು, ಬ್ಯಾಂಕುಗಳು ಮತ್ತು ಟವ್ ಮೇಲೆ ದಾಳಿ ಮಾಡಿದ್ದಾರೆ. ಇರಾನ್ ಮತ್ತು ಅಫ್ಘಾನಿಸ್ತಾನದ ಗಡಿಯಲ್ಲಿರುವ ಬಲೂಚಿಸ್ತಾನದಲ್ಲಿ ದೀರ್ಘಕಾಲದಿಂದ ಧಂಗೆಗಳು ನಡೆಯುತ್ತಿವೆ.

ಮಾರ್ಚ್‌ನಲ್ಲಿ, ಗ್ವಾದರ್ ಬಂದರಿನ ಬಳಿಯ ಕಲ್ಮತ್ ಪ್ರದೇಶದಲ್ಲಿ ಲಾಂಗ್ ಬಾಡಿ ಟ್ರೇಲರ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಐದು ಜನರನ್ನು ಗುಂಡಿಕ್ಕಿ ಕೊಲ್ಲಲಾಯಿತು, ಫೆಬ್ರವರಿಯಲ್ಲಿ, ದಂಗೆಕೋರರು ಪಂಜಾಬ್ ಪ್ರಾಂತ್ಯಕ್ಕೆ ಸೇರಿದ ಏಳು ಪ್ರಯಾಣಿಕರನ್ನು ಇಳಿಸಿ ಬರ್ಖಾನ್ ಪ್ರದೇಶದಲ್ಲಿ ಸ್ಥಳದಲ್ಲೇ ಕೊಂದಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!