AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baltimore Bridge Collapse: ಬಾಲ್ಟಿಮೋರ್​ನ ಅತಿ ಉದ್ದದ ಸೇತುವೆ ಕುಸಿತ

ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.

Baltimore Bridge Collapse: ಬಾಲ್ಟಿಮೋರ್​ನ ಅತಿ ಉದ್ದದ ಸೇತುವೆ ಕುಸಿತ
ಸೇತುವೆ ಕುಸಿತ
ನಯನಾ ರಾಜೀವ್
|

Updated on:Mar 26, 2024 | 2:27 PM

Share

ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.

ಸೇತುವೆ ಕುಸಿದಾಗ ಸುಮಾರು ಏಳು ಮಂದಿ ಕಟ್ಟಡ ಕಾರ್ಮಿಕರು ಮತ್ತು ಮೂರ್ನಾಲ್ಕು ನಾಗರಿಕ ವಾಹನಗಳು ಸೇತುವೆ ಮೇಲೆ ಇದ್ದವು ಎಂದು ಹೇಳಲಾಗಿದೆ. ಘಟನೆಯ ನಂತರ ಸೇತುವೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಅಧಿಕಾರಿಗಳು ಎರಡೂ ದಿಕ್ಕುಗಳಲ್ಲಿ ಎಲ್ಲಾ ಲೇನ್‌ಗಳನ್ನು ಮುಚ್ಚಿದ್ದಾರೆ.

ಸೇತುವೆ

ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸಾವುನೋವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 47 ವರ್ಷಗಳಷ್ಟು ಹಳೆಯದಾದ ಸೇತುವೆ ಇದಾಗಿದೆ.

ವರದಿಗಳ ಪ್ರಕಾರ ಸೇತುವೆಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಹಡಗು ಕಂಟೈನರ್ ಹಡಗು. ‘ಡಾಲಿ’ ಹೆಸರಿನ ಈ ಹಡಗು ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಹೋಗುತ್ತಿತ್ತು. ರಾತ್ರಿ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಇದರ ನಂತರ ಹಡಗು ನೀರಿನಲ್ಲಿ ಮುಳುಗಿತು ಮತ್ತು ಸೇತುವೆಯೂ ಮುರಿದು ನದಿಗೆ ಬಿದ್ದಿತು.

ಈ ಸೇತುವೆಯನ್ನು ಬಾಲ್ಟಿಮೋರ್ ಬಂದರಿನಲ್ಲಿ ಪಟಾಪ್ಸ್ಕೋ ನದಿಯ ಮೇಲೆ ನಿರ್ಮಿಸಲಾಗಿದೆ. ಸುಮಾರು 3 ಕಿಲೋಮೀಟರ್ ಉದ್ದದ ಈ ಸೇತುವೆಯ ನಿರ್ಮಾಣವು 1972 ರಲ್ಲಿ ಪ್ರಾರಂಭವಾಯಿತು ಮತ್ತು ಸೇತುವೆಯನ್ನು 1977 ರಲ್ಲಿ ಸಂಚಾರಕ್ಕೆ ತೆರೆಯಲಾಯಿತು. ಪ್ರತಿ ವರ್ಷ ಸರಾಸರಿ 1.1 ಕೋಟಿ ವಾಹನಗಳು ಈ ಸೇತುವೆಯ ಮೂಲಕ ಹಾದು ಹೋಗುತ್ತವೆ. ಈ ಸೇತುವೆಯನ್ನು ಕೀ ಸೇತುವೆ ಎಂದೂ ಕರೆಯಲಾಗುತ್ತಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:46 pm, Tue, 26 March 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು