AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಮ್​ ಜಾಂಗ್​ ಉನ್​ ಆರೋಗ್ಯಕ್ಕೇನಾಯಿತು? ಮತ್ತೊಂದಿಷ್ಟು ಅನುಮಾನ ಹುಟ್ಟಿಸಿದ ಸರ್ವಾಧಿಕಾರಿಯ ತಲೆ

Kim Jong Un: ಕಳೆದ ವರ್ಷ ಕಿಮ್ ಜಾಂಗ್​ ಉನ್​ ಕೆಲವು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. ಅವರ ಜೀವವೇ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಸುದ್ದಿ ಹರಡಿತ್ತು. ಅದಾದ ಮೇಲೆ ಏಕಾಏಕಿ ಒಂದು ದಿನ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಕಿಮ್​ ಜಾಂಗ್​ ಉನ್​ ಆರೋಗ್ಯಕ್ಕೇನಾಯಿತು? ಮತ್ತೊಂದಿಷ್ಟು ಅನುಮಾನ ಹುಟ್ಟಿಸಿದ ಸರ್ವಾಧಿಕಾರಿಯ ತಲೆ
ಕಿಮ್​ ಜಾಂಗ್​ ಉನ್​
TV9 Web
| Edited By: |

Updated on: Aug 03, 2021 | 5:40 PM

Share

ಅದೇನೋ ಗೊತ್ತಿಲ್ಲ, ಉತ್ತರ ಕೊರಿಯಾ (North Korea)  ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ (Kim Jong Un)​ ಅವರ ಆರೋಗ್ಯದ ವಿಚಾರ ಪದೇಪದೆ ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಕಿಮ್ ಜಾಂಗ್​ ಉನ್​ ತುಂಬ ಸಪೂರ ಆಗಿದ್ದಾರೆ ಎಂಬ ವಿಷಯ ಬಹುದೊಡ್ಡ ಸುದ್ದಿಯಾಗಿತ್ತು. ಕಿಮ್ ಜಾಂಗ್​ ಉನ್​ ತುಂಬ ತೂಕ ಕಳೆದುಕೊಂಡಿದ್ದಾರೆ. ಅವರಿಗೇನೋ ಆರೋಗ್ಯ ಸಮಸ್ಯೆ ಇರಬಹುದು ಎಂದೇ ಅಂತಾರಾಷ್ಟ್ರೀಯ ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದರು. ಈ ಬಗ್ಗೆ ದಕ್ಷಿಣ ಕೊರಿಯಾ ಗುಪ್ತಚರ ಇಲಾಖೆ ಕೂಡ ಗಮನ ಇಟ್ಟಿತ್ತು. ಕೆಲವೇ ದಿನಗಳ ಹಿಂದೆ ಕಿಮ್​ ಜಾಂಗ್​ ಉನ್​ ಸಪೂರ ದೇಹ ಸುದ್ದಿ ಮಾಡಿದ್ದಂತೆ..ಈಗ ಅವರ ತಲೆ ಸುದ್ದಿ ಮಾಡುತ್ತಿದೆ.

ಇತ್ತೀಚೆಗೆ ಕಿಮ್​ ಜಾಂಗ್​ ಉನ್​ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ, ಅವರ ತಲೆಯ ಹಿಂಭಾಗದಲ್ಲಿ ಇದ್ದ ಒಂದು ಚಿಕ್ಕ ಬ್ಯಾಂಡೇಜ್​ ಈಗ ಗಮನಸೆಳೆದಿದೆ. ಸರ್ವಾಧಿಕಾರಿಯ ತಲೆಯ ಹಿಂದೆ ಬ್ಯಾಂಡೇಜ್​ ಹಾಕುವಂಥದ್ದೇನಾಯಿತು? ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ. ಹಾಗೇ, ಮತ್ತೆ ಅವರ ಆರೋಗ್ಯದ ಬಗ್ಗೆ ಒಂದಷ್ಟು ಊಹಾಪೋಹಗಳು ಶುರುವಾಗಿವೆ.

ಜುಲೈ 24-27ರವರೆಗೆ ನಡೆದ ಕೊರಿಯನ್​ ಜನರ ಸೇನಾ ಸಮಾರಂಭದಲ್ಲಿ ಕಿಮ್​ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದ ಫೋಟೋಗಳನ್ನು ಸ್ಥಳೀಯ ಮಾಧ್ಯಮಗಳು ಪ್ರಕಟಿಸಿವೆ. ಅದರಲ್ಲಿ ಕಿಮ್​ ಜಾಂಗ್​ ಉನ್​ ತಲೆಯ ಹಿಂಭಾಗ ಪುಟ್ಟ ಬ್ಯಾಂಡೇಜ್​ ಇರುವುದು ಕಾಣಿಸುತ್ತಿದೆ. ಕಳೆದ ವರ್ಷ ಕಿಮ್ ಜಾಂಗ್​ ಉನ್​ ಕೆಲವು ತಿಂಗಳುಗಳ ಕಾಲ ನಾಪತ್ತೆಯಾಗಿದ್ದರು. ಅವರ ಜೀವವೇ ಹೋಗಿದೆ ಎನ್ನುವಷ್ಟರ ಮಟ್ಟಿಗೆ ಸುದ್ದಿ ಹರಡಿತ್ತು. ಅದಾದ ಮೇಲೆ ಏಕಾಏಕಿ ಒಂದು ದಿನ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಸ್ವಲ್ಪದಿನ ಎಲ್ಲವೂ ಸರಿಯಾಗಿತ್ತು..ಆದರೆ ಮತ್ತೆ ಕಿಮ್​ ಜಾಂಗ್​ ಉನ್​ ತೂಕ ಕಳೆದುಕೊಂಡಿದ್ದು ಎಲ್ಲರ ಗಮನಸೆಳೆದಿತ್ತು. ಇಷ್ಟಾದರೂ ಅವರು ದೇಶದ ಆರ್ಥಿಕ ಚೇತರಿಕೆಗೆ, ಆಹಾರ ಕೊರತೆ ನೀಗಿಸಲು ಅವರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಒಂದಲ್ಲ ಒಂದು ಕಾರಣಕ್ಕೆ ಮತ್ತೆಮತ್ತೆ ಅವರ ಆರೋಗ್ಯದ ಬಗ್ಗೆ ಅನುಮಾನಗಳು ಏಳುತ್ತಲೇ ಇವೆ.

ಇದನ್ನೂ ಓದಿ: ಮೈಸೂರು ಮೃಗಾಲಯದಿಂದ ನೂತನ ಪ್ರಯೋಗ; ಆನೆಗಳಿಗಾಗಿ ಈಜುಕೊಳ ನಿರ್ಮಾಣ!

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್