AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕಾಕ್ ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ, 27 ಮಂದಿ ಸಾವು, ಬಾತ್​ ರೂಂ ಸೇರಿಯೂ ಬದುಕುಳಿಯಲಿಲ್ಲ ಜೀವಗಳು

ಯಾವುದೇ ಒಳಾಂಗಣ ಪಬ್ ಅಥವಾ ಕ್ಲಬ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳು ಮತ್ತು ಅಗ್ನಿಶಾಮಕ ಉಪಕರಣಗಳು ಕಡ್ಡಾಯವಾಗಿ ಇರಬೇಕು ಎಂಬ ನಿಯಮವಿದ್ದರೂ, ಇವುಗಳನ್ನು ಗಾಳಿಗೆ ತೂರುತ್ತಿರುವುದರಿಂದಲೇ ಇಂತಹ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಬ್ಯಾಂಕಾಕ್ ನೈಟ್​ಕ್ಲಬ್​ನಲ್ಲಿ ಅಗ್ನಿ ಅವಘಡ, 27 ಮಂದಿ ಸಾವು, ಬಾತ್​ ರೂಂ ಸೇರಿಯೂ ಬದುಕುಳಿಯಲಿಲ್ಲ ಜೀವಗಳು
ಕ್ಲಬ್
ನಯನಾ ರಾಜೀವ್
|

Updated on:Jul 13, 2026 | 7:19 AM

Share

ಬ್ಯಾಂಕಾಕ್, ಜುಲೈ 13:ಥೈಲೆಂಡ್ ರಾಜಧಾನಿ ಬ್ಯಾಂಕಾಕ್​ನಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ದುರಂತವೊಂದು ಸಂಭವಿಸಿದೆ. ಅಲ್ಲಿನ ಅತ್ಯಂತ ಜನಪ್ರಿಯ ಪಬ್​ವೊಂದರಲ್ಲಿ ಮಧ್ಯರಾತ್ರಿ ಆಕಸ್ಮಿಕವಾಗಿ ಕಾಣಿಸಿಕೊಂಡ ಭಾರಿ ಬೆಂಕಿ(Fire) ಮತ್ತು ವಿಷಕಾರಿ ಹೊಗೆಯೊಳಗೆ ಸಿಲುಕಿ ಕನಿಷ್ಠ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ಹರಿದಾಡುತ್ತಿವೆ. ನೈಟ್‌ಕ್ಲಬ್‌ನ ಮುಖ್ಯ ಬಾಗಿಲಿನಿಂದ ರಕ್ಕಸ ಜ್ವಾಲೆಗಳು ಮತ್ತು ದಟ್ಟವಾದ ಕಪ್ಪು ಹೊಗೆ ಆಕಾಶ ಮುಟ್ಟುತ್ತಿರುವುದು ಹಾಗೂ ಪ್ರಾಣ ಉಳಿಸಿಕೊಳ್ಳಲು ಯುವಕ-ಯುವತಿಯರು ದಿಕ್ಕಾಪಾಲಾಗಿ ಓಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾತ್​ರೂಮ್​ನಲ್ಲೇ ಕೊನೆಯುಸಿರೆಳೆದ ದುರ್ದೈವಿಗಳು

ಬ್ಯಾಂಕಾಕ್‌ನ ಚತುಚಕ್ ಜಿಲ್ಲೆಯ ಉತ್ತರ ಭಾಗದಲ್ಲಿರುವ ‘ನಾ ಲಾಡ್‌ಪ್ರಾವ್’ ಪಬ್‌ನಲ್ಲಿ ಈ ಕರಾಳ ಘಟನೆ ನಡೆದಿದೆ. ಮಧ್ಯರಾತ್ರಿ ಪಬ್ ಸಡಗರದಿಂದ ಕೂಡಿದ್ದಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕತ್ತಲ ಕೋಣೆಯಂತಿದ್ದ ಪಬ್‌ನೊಳಗೆ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ.

ಉಸಿರುಗಟ್ಟಿಸುವ ದಟ್ಟ ಹೊಗೆಯಿಂದ ಪಾರಾಗಲು ದಾರಿ ತಿಳಿಯದ ಗ್ರಾಹಕರು, ಪ್ರಾಣ ಉಳಿಸಿಕೊಳ್ಳಲು ಪಬ್‌ನ ಹಿಂಭಾಗದಲ್ಲಿದ್ದ ಶೌಚಾಲಯ ಮತ್ತು ಸ್ನಾನಗೃಹಗಳ ಒಳಗೆ ನುಗ್ಗಿ ಬಾಗಿಲು ಹಾಕಿಕೊಂಡಿದ್ದಾರೆ. ಆದರೆ, ದುರಂತವೆಂದರೆ ಆ ಕಿರಿದಾದ ಜಾಗಕ್ಕೂ ವಿಷಕಾರಿ ಹೊಗೆ ತಲುಪಿದ್ದರಿಂದ, ಬಹುತೇಕ ಬಲಿಪಶುಗಳು ಅಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಥಾಯ್ ಪ್ರಧಾನಿ ಅನುಟಿನ್ ಚಾರ್ನ್‌ವಿರಕುಲ್ ಅತ್ಯಂತ ಭಾವುಕರಾಗಿ ತಿಳಿಸಿದ್ದಾರೆ.

ಕೇವಲ ಅರ್ಧ ಗಂಟೆಯಲ್ಲಿ ಸರ್ವನಾಶ

ಮಧ್ಯರಾತ್ರಿ ಸುಮಾರು 12 ಗಂಟೆಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದವು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೇವಲ 30 ನಿಮಿಷಗಳಲ್ಲೇ ಬೆಂಕಿಯನ್ನು ನಿಯಂತ್ರಣಕ್ಕೆ ತಂದರಾದರೂ, ಅಷ್ಟರಲ್ಲೇ ಇಡೀ ಪಬ್ ಸುಟ್ಟು ಕರಕಲಾಗಿತ್ತು.

ಮತ್ತಷ್ಟು ಓದಿ: ಲಕ್ನೋ ಕೋಚಿಂಗ್ ಸೆಂಟರ್​​ನಲ್ಲಿ ಭೀಕರ ಬೆಂಕಿ ದುರಂತ; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು

ಪಬ್‌ನಲ್ಲಿ ಲೈವ್ ಮ್ಯೂಸಿಕ್ ಪ್ರದರ್ಶನ ನೀಡುತ್ತಿದ್ದ ಗಾಯಕನೊಬ್ಬ ಪೊಲೀಸರಿಗೆ ನೀಡಿರುವ ಹೇಳಿಕೆಯ ಪ್ರಕಾರ, ವೇದಿಕೆಯ ಪಕ್ಕದಲ್ಲಿದ್ದ ಮೇನ್ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಸಣ್ಣದಾಗಿ ಹೊಗೆ ಬರುತ್ತಿರುವುದು ಕಂಡುಬಂದಿದೆ. ಮರುಕ್ಷಣದಲ್ಲೇ ಇಡೀ ಪಬ್‌ನ ವಿದ್ಯುತ್ ಸಂಪರ್ಕ ಕಡಿತಗೊಂಡು ದೊಡ್ಡ ಸ್ಫೋಟದ ಶಬ್ದ ಕೇಳಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಇಡೀ ಜಾಗ ಕಪ್ಪು ಹೊಗೆಯಿಂದ ತುಂಬಿಹೋಗಿತ್ತು ಎಂದು ಆತ ಭೀತಿಯಿಂದ ಹೇಳಿದ್ದಾನೆ.

ಹಳೆಯ ಕರಾಳ ನೆನಪುಗಳನ್ನು ಮರುಕಳಿಸಿದ ದುರಂತ

ಥೈಲ್ಯಾಂಡ್‌ನ ನೈಟ್‌ಕ್ಲಬ್‌ಗಳಲ್ಲಿ ಇಂತಹ ಭೀಕರ ಅಗ್ನಿ ದುರಂತಗಳು ಸಂಭವಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸುರಕ್ಷತಾ ನಿಯಮಗಳ ನಿರ್ಲಕ್ಷ್ಯದಿಂದಾಗಿ ನೂರಾರು ಜೀವಗಳು ಬಲಿಯಾಗಿವೆ.

2022ರ ಮ್ಯೂಸಿಕ್ ಪಬ್ ದುರಂತ: ಥೈಲ್ಯಾಂಡ್‌ನ ಪೂರ್ವ ಭಾಗದ ಮ್ಯೂಸಿಕ್ ಪಬ್ ಒಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ 14 ಯುವಕರು ಮೃತಪಟ್ಟಿದ್ದರು.

2009ರ ಸಂತಿಕಾ ನೈಟ್‌ಕ್ಲಬ್ : ಜಾಗತಿಕವಾಗಿ ಸದ್ದು ಮಾಡಿದ್ದ ಈ ದುರಂತ ಜನವರಿ 1, 2009 ರ ಹೊಸ ವರ್ಷದ ಪಾರ್ಟಿ ವೇಳೆ ನಡೆದಿತ್ತು. ಕ್ಲಬ್ ಒಳಗಡೆ ಇನ್ಡೋರ್ ಪಟಾಕಿ ಹಾರಿಸಿದ ಕಾರಣ ಇಡೀ ಕಟ್ಟಡಕ್ಕೆ ಬೆಂಕಿ ಬಿದ್ದು 66 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಯಾವುದೇ ಒಳಾಂಗಣ ಪಬ್ ಅಥವಾ ಕ್ಲಬ್‌ಗಳಲ್ಲಿ ತುರ್ತು ನಿರ್ಗಮನ ದ್ವಾರಗಳು ಮತ್ತು ಅಗ್ನಿಶಾಮಕ ಉಪಕರಣಗಳು ಕಡ್ಡಾಯವಾಗಿ ಇರಬೇಕು ಎಂಬ ನಿಯಮವಿದ್ದರೂ, ಇವುಗಳನ್ನು ಗಾಳಿಗೆ ತೂರುತ್ತಿರುವುದರಿಂದಲೇ ಇಂತಹ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:14 am, Mon, 13 July 26

Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್