AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Violence: ಬಾಂಗ್ಲಾದೇಶದಲ್ಲಿ ತಮ್ಮ ಮೇಲಿನ ಹಿಂಸಾಚಾರ ಖಂಡಿಸಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ

ಆಗಸ್ಟ್ 5ರಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಸರ್ಕಾರವು ಪತನಗೊಂಡ ನಂತರ ಬಾಂಗ್ಲಾದೇಶದಲ್ಲಿ ನೂರಾರು ಹಿಂದೂಗಳ ಮೇಲೆ ದಾಳಿ ನಡೆದಿದೆ. ಅಲ್ಲಿನ ಹಿಂದೂಗಳ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

Bangladesh Violence: ಬಾಂಗ್ಲಾದೇಶದಲ್ಲಿ ತಮ್ಮ ಮೇಲಿನ ಹಿಂಸಾಚಾರ ಖಂಡಿಸಿ ಹಿಂದೂಗಳಿಂದ ಬೃಹತ್ ಪ್ರತಿಭಟನೆ
ಹಿಂದೂಗಳ ಪ್ರತಿಭಟನೆ
ಸುಷ್ಮಾ ಚಕ್ರೆ
|

Updated on: Aug 11, 2024 | 11:17 AM

Share

ಢಾಕಾ: ನದಿಗಳ ನಾಡು ಎಂದು ಕರೆಯಲಾಗುವ ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದಾದ ಬಳಿಕವೂ ತೀವ್ರ ಪ್ರತಿಭಟನೆಗಳು ಮುಂದುವರೆದಿವೆ. 1971ರ ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರು ಸೇರಿದಂತೆ ನಿರ್ದಿಷ್ಟ ಗುಂಪುಗಳಿಗೆ ನಾಗರಿಕ ಸೇವಾ ಉದ್ಯೋಗಗಳನ್ನು ಕಾಯ್ದಿರಿಸುವ ಕೋಟಾ ವ್ಯವಸ್ಥೆಯನ್ನು ಸುಧಾರಿಸುವ ಬೇಡಿಕೆಗಳಿಂದಾಗಿ ಜುಲೈ ಆರಂಭದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರಿಗೆ ಸರ್ಕಾರಿ ಉದ್ಯೋಗಗಳನ್ನು ಹಂಚುವ ಹೊಸ ನೀತಿಯನ್ನು ವಿದ್ಯಾರ್ಥಿಗಳು ವಿರೋಧಿಸಿದಾಗ ಅಶಾಂತಿ ಉಲ್ಬಣಗೊಂಡಿತು. ಇದು ಢಾಕಾದಲ್ಲಿನ ರಾಜ್ಯ ಟೆಲಿವಿಷನ್ ಪ್ರಧಾನ ಕಚೇರಿ ಮತ್ತು ಪೊಲೀಸ್ ಬೂತ್‌ಗಳ ಮೇಲೆ ದಾಳಿಗಳನ್ನು ಒಳಗೊಂಡ ಹಿಂಸಾಚಾರವನ್ನು ಹುಟ್ಟುಹಾಕಿತು.

ಇದೀಗ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ಲಕ್ಷಾಂತರ ಹಿಂದೂಗಳು ಶನಿವಾರ ಬೀದಿಗಿಳಿದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾ ಮತ್ತು ದೇಶದ ಎರಡನೇ ಅತಿದೊಡ್ಡ ನಗರವಾದ ಚಿತ್ತಗಾಂಗ್, ಬೃಹತ್ ರ್ಯಾಲಿಗಳಿಗೆ ಲಕ್ಷಾಂತರ ಜನರು ಸಾಕ್ಷಿಯಾದರು.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಗಡಿಯ ಪರಿಸ್ಥಿತಿ ಗಮನಿಸಲು ಭಾರತ ಸರ್ಕಾರದಿಂದ ಸಮಿತಿ ರಚನೆ; ಅಮಿತ್ ಶಾ ಘೋಷಣೆ

ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5ರಂದು ಶೇಖ್ ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸಾವಿರಾರು ಬಾಂಗ್ಲಾದೇಶಿ ಹಿಂದೂಗಳು ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಮಂಡಳಿಗಳ ರಚನೆ, ಅಲ್ಪಸಂಖ್ಯಾತರಿಗೆ ಶೇ. 10ರಷ್ಟು ಸಂಸದೀಯ ಸ್ಥಾನಗಳ ಹಂಚಿಕೆ ಮತ್ತು ಇತರರೊಂದಿಗೆ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕಾನೂನು ಜಾರಿಗೆ ಒತ್ತಾಯಿಸಿ ಹಿಂದೂ ಪ್ರತಿಭಟನಾಕಾರರ ರ್ಯಾಲಿಯು ಕೇಂದ್ರದ ಶಾಹಬಾಗ್‌ನಲ್ಲಿ 3 ಗಂಟೆಗಳ ಕಾಲ ಸಂಚಾರವನ್ನು ನಿರ್ಬಂಧಿಸಿತು.

ಇದನ್ನೂ ಓದಿ: Bangladesh Violence: ಬಾಂಗ್ಲಾದೇಶದಲ್ಲಿ ಹಿಂದೂಗಳು, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರಕ್ಕೆ ಆರ್‌ಎಸ್‌ಎಸ್ ಖಂಡನೆ

ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮುಸ್ಲಿಂ ಪ್ರತಿಭಟನಾಕಾರರು ಅಲ್ಪಸಂಖ್ಯಾತರ ಪರವಾಗಿ ಒಗ್ಗಟ್ಟನ್ನು ವ್ಯಕ್ತಪಡಿಸಿದರು. ಚಿತ್ತಗಾಂಗ್‌ನಲ್ಲಿ ಐತಿಹಾಸಿಕ ಚೆರಗಿ ಪಹಾರ್ ಚೌಕದಲ್ಲಿ ಬೃಹತ್ ಸಮಾವೇಶ ನಡೆಯಿತು. ಕೆಲವು ವರದಿಗಳ ಪ್ರಕಾರ, 7 ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಮುಹಮ್ಮದ್ ಯೂನಸ್ ಪ್ರತಿಕ್ರಿಯೆ:

ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಈ ಕೃತ್ಯವನ್ನು “ಹೇಯ ಕೃತ್ಯ” ಎಂದು ಟೀಕಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತರಾದ ಮುಹಮ್ಮದ್ ಯೂನಸ್ ಅವರು ಪ್ರತಿಭಟನೆಯ ಮುಂಚೂಣಿಯಲ್ಲಿರುವ ವಿದ್ಯಾರ್ಥಿಗಳನ್ನು, ಎಲ್ಲಾ ಹಿಂದೂ, ಕ್ರಿಶ್ಚಿಯನ್ ಮತ್ತು ಬೌದ್ಧ ಕುಟುಂಬಗಳನ್ನು ಹಾನಿಯಿಂದ ರಕ್ಷಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ