AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Crisis: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಪ್ರತಿಪಕ್ಷ ಬಿಎನ್‌ಪಿ ಒತ್ತಾಯ

ಖಲೀದಾ ಜಿಯಾ ನೇತೃತ್ವದ ಬಿಎನ್​ಪಿ ಶೇಖ್ ಹಸೀನಾ ಅವರ ಅವಾಮಿ ಲೀಗ್‌ ಅವರ "ಫ್ಯಾಸಿಸ್ಟ್ ಆಡಳಿತ"ದ ವಿರುದ್ಧ ಹರಿಹಾಯ್ದಿದ್ದು, ಬಾಂಗ್ಲಾದೇಶದ ಸ್ವಾತಂತ್ರ್ಯವನ್ನು ಹಾಳುಮಾಡಿದೆ ಎಂದು ಹೇಳಿದೆ. 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಶೇಖ್ ಹಸೀನಾ ಎದುರಿಸುತ್ತಿದ್ದಾರೆ.

Bangladesh Crisis: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಪ್ರತಿಪಕ್ಷ ಬಿಎನ್‌ಪಿ ಒತ್ತಾಯ
ಶೇಖ್ ಹಸೀನಾ
ಸುಷ್ಮಾ ಚಕ್ರೆ
|

Updated on:Aug 20, 2024 | 7:00 PM

Share

ಢಾಕಾ: ತನ್ನ ದೇಶದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನವದೆಹಲಿಯಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಕರೆ ನೀಡಿದೆ. ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.

“ನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ” ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ. ಶೇಖ್ ಹಸೀನಾಗೆ ಆಶ್ರಯ ನೀಡುವ ಮೂಲಕ ಭಾರತವು ಪ್ರಜಾಪ್ರಭುತ್ವದ ಬಗ್ಗೆ ತನ್ನ ಬದ್ಧತೆಯನ್ನು ತೋರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: Sheikh Hasina: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು; ಬಾಂಗ್ಲಾದೇಶದಿಂದ ಪಲಾಯನವಾದ ಬಳಿಕ ಮೊದಲ ಬಾರಿ ಮೌನ ಮುರಿದ ಶೇಖ್ ಹಸೀನಾ

ಭಾರತದಲ್ಲಿಯೇ ಉಳಿದುಕೊಂಡು ಬಾಂಗ್ಲಾದೇಶದಲ್ಲಿ ಸಂಭವಿಸಿದ ಕ್ರಾಂತಿಯನ್ನು ತಡೆಯಲು ಶೇಖ್ ಹಸೀನಾ ನಾನಾ ಕುತಂತ್ರಗಳನ್ನು ಆರಂಭಿಸಿದ್ದಾರೆ ಎಂದು ಮಿರ್ಜಾ ಫಕ್ರುಲ್ ಆರೋಪಿಸಿದ್ದಾರೆ. ಜುಲೈ ಮಧ್ಯದಲ್ಲಿ ಸರ್ಕಾರಿ ಉದ್ಯೋಗಗಳ ವಿವಾದಾತ್ಮಕ ಕೋಟಾ ಪದ್ಧತಿಯ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಬಾಂಗ್ಲಾದೇಶದಲ್ಲಿ 600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದು ಹಿಂಸಾತ್ಮಕ ಸರ್ಕಾರಿ ವಿರೋಧಿ ಆಂದೋಲನಕ್ಕೆ ವೇಗವನ್ನು ನೀಡಿತು.

ಇದನ್ನೂ ಓದಿ: ಪ್ರತಿಭಟನಾಕಾರರು 1 ವಾರದೊಳಗೆ ಅಕ್ರಮ ಬಂದೂಕುಗಳನ್ನು ಒಪ್ಪಿಸಬೇಕು; ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೂಚನೆ

ಕಳೆದ ವಾರ, ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ತನ್ನ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಸಾಮೂಹಿಕ ಚಳವಳಿಯ ಸಂದರ್ಭದಲ್ಲಿ ಜುಲೈ 15ರಿಂದ ಆಗಸ್ಟ್ 5ರವರೆಗೆ ನಡೆದ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಇತರ 9 ಜನರ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತು. ಶೇಖ್ ಹಸೀನಾ ನೇತೃತ್ವದ ಆಡಳಿತದ ಪತನದ ನಂತರ ಮಧ್ಯಂತರ ಸರ್ಕಾರವನ್ನು ರಚಿಸಲಾಯಿತು. ಈಗ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Tue, 20 August 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ