Bangladesh Crisis: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಪ್ರತಿಪಕ್ಷ ಬಿಎನ್‌ಪಿ ಒತ್ತಾಯ

|

Updated on: Aug 20, 2024 | 7:00 PM

ಖಲೀದಾ ಜಿಯಾ ನೇತೃತ್ವದ ಬಿಎನ್​ಪಿ ಶೇಖ್ ಹಸೀನಾ ಅವರ ಅವಾಮಿ ಲೀಗ್‌ ಅವರ "ಫ್ಯಾಸಿಸ್ಟ್ ಆಡಳಿತ"ದ ವಿರುದ್ಧ ಹರಿಹಾಯ್ದಿದ್ದು, ಬಾಂಗ್ಲಾದೇಶದ ಸ್ವಾತಂತ್ರ್ಯವನ್ನು ಹಾಳುಮಾಡಿದೆ ಎಂದು ಹೇಳಿದೆ. 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಶೇಖ್ ಹಸೀನಾ ಎದುರಿಸುತ್ತಿದ್ದಾರೆ.

Bangladesh Crisis: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಪ್ರತಿಪಕ್ಷ ಬಿಎನ್‌ಪಿ ಒತ್ತಾಯ
ಶೇಖ್ ಹಸೀನಾ
Follow us on

ಢಾಕಾ: ತನ್ನ ದೇಶದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನವದೆಹಲಿಯಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಕರೆ ನೀಡಿದೆ. ಶೇಖ್ ಹಸೀನಾ ಬಾಂಗ್ಲಾದೇಶದಲ್ಲಿ 2013ರಲ್ಲಿ ಸಾಮೂಹಿಕ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ.

“ನೀವು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ದೇಶದ ಜನರು ಅವರ ವಿಚಾರಣೆಗೆ ಕಾದಿದ್ದಾರೆ. ಆಕೆ ಆ ವಿಚಾರಣೆಯನ್ನು ಎದುರಿಸಲಿ” ಎಂದು BNP ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಹೇಳಿದ್ದಾರೆ. ಶೇಖ್ ಹಸೀನಾಗೆ ಆಶ್ರಯ ನೀಡುವ ಮೂಲಕ ಭಾರತವು ಪ್ರಜಾಪ್ರಭುತ್ವದ ಬಗ್ಗೆ ತನ್ನ ಬದ್ಧತೆಯನ್ನು ತೋರುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: Sheikh Hasina: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು; ಬಾಂಗ್ಲಾದೇಶದಿಂದ ಪಲಾಯನವಾದ ಬಳಿಕ ಮೊದಲ ಬಾರಿ ಮೌನ ಮುರಿದ ಶೇಖ್ ಹಸೀನಾ

ಭಾರತದಲ್ಲಿಯೇ ಉಳಿದುಕೊಂಡು ಬಾಂಗ್ಲಾದೇಶದಲ್ಲಿ ಸಂಭವಿಸಿದ ಕ್ರಾಂತಿಯನ್ನು ತಡೆಯಲು ಶೇಖ್ ಹಸೀನಾ ನಾನಾ ಕುತಂತ್ರಗಳನ್ನು ಆರಂಭಿಸಿದ್ದಾರೆ ಎಂದು ಮಿರ್ಜಾ ಫಕ್ರುಲ್ ಆರೋಪಿಸಿದ್ದಾರೆ. ಜುಲೈ ಮಧ್ಯದಲ್ಲಿ ಸರ್ಕಾರಿ ಉದ್ಯೋಗಗಳ ವಿವಾದಾತ್ಮಕ ಕೋಟಾ ಪದ್ಧತಿಯ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಪ್ರಾರಂಭವಾದಾಗಿನಿಂದ ಬಾಂಗ್ಲಾದೇಶದಲ್ಲಿ 600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದು ಹಿಂಸಾತ್ಮಕ ಸರ್ಕಾರಿ ವಿರೋಧಿ ಆಂದೋಲನಕ್ಕೆ ವೇಗವನ್ನು ನೀಡಿತು.

ಇದನ್ನೂ ಓದಿ: ಪ್ರತಿಭಟನಾಕಾರರು 1 ವಾರದೊಳಗೆ ಅಕ್ರಮ ಬಂದೂಕುಗಳನ್ನು ಒಪ್ಪಿಸಬೇಕು; ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೂಚನೆ

ಕಳೆದ ವಾರ, ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯು ತನ್ನ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಸಾಮೂಹಿಕ ಚಳವಳಿಯ ಸಂದರ್ಭದಲ್ಲಿ ಜುಲೈ 15ರಿಂದ ಆಗಸ್ಟ್ 5ರವರೆಗೆ ನಡೆದ ನರಮೇಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಇತರ 9 ಜನರ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತು. ಶೇಖ್ ಹಸೀನಾ ನೇತೃತ್ವದ ಆಡಳಿತದ ಪತನದ ನಂತರ ಮಧ್ಯಂತರ ಸರ್ಕಾರವನ್ನು ರಚಿಸಲಾಯಿತು. ಈಗ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:58 pm, Tue, 20 August 24