ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ […]

ಅಂಫಾನ್ ಹೋಯ್ತು, ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ! ಏನಿದರ ಹಕೀಕತ್ತು?
ಸಾಧು ಶ್ರೀನಾಥ್​ Edited By:

Updated on: May 23, 2020 | 10:40 AM

ದೆಹಲಿ: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಅಂಫಾನ್ ಚಂಡಮಾರುತ ಅಪ್ಪಳಿಸಿತ್ತು. ಈ ಸೈಕ್ಲೋನ್ ಅಬ್ಬರಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳು ತತ್ತರಿಸಿ ಹೋಗಿವೆ. ಇದೀಗ ಉತ್ತರ ಭಾರತದ ಕರಾವಳಿ ಪ್ರದೇಶಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಬರುವ ಸೈಕ್ಲೋನ್​ಗೆ ನಿಸರ್ಗ ಎಂದು ಬಾಂಗ್ಲಾದೇಶ ಹೆಸರು ನೀಡಿದೆ. ಭಾರತದ ಹವಾಮಾನ ಇಲಾಖೆಯೂ ಸಹ ಹಲವು ಹೆಸರುಗಳನ್ನು ಸೂಚಿಸಿತ್ತು. ಗಾಟಿ, ತೇಜ್, ಮುರಸು, ನೀರ್ ಸೇರಿದಂತೆ ಹಲವು ಹೆಸರುಗಳನ್ನು ನೀಡಿತ್ತು. ಮುಂದಿನ ಚಂಡಮಾರುತಕ್ಕೆ ಭಾರತ, ಬಾಂಗ್ಲಾದೇಶ, ಇರಾನ್, ಮಾಲ್ಡೀವ್ಸ್​, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ ಒಟ್ಟು 13 ದೇಶಗಳಿಂದ 169 ಹೆಸರುಗಳನ್ನು ಕೊಡಲಾಗಿತ್ತು.

ಜಾಗತಿಕವಾಗಿ ಆರು ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳು ಮತ್ತು ಐದು ಪ್ರಾದೇಶಿಕ ಉಷ್ಣವಲಯದ ಚಂಡಮಾರುತ ಎಚ್ಚರಿಕೆ ಕೇಂದ್ರಗಳು ಸೈಕ್ಲೋನ್​ಗೆ ಹೆಸರು ನೀಡುತ್ತವೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯೂ ಒಂದಾಗಿದೆ.

Published On - 8:15 am, Sat, 23 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us