Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಏಪ್ರಿಲ್ 1ರಿಂದ ಏಳು ದಿನಗಳ ಲಾಕ್​ಡೌನ್ ಘೋಷಣೆ

ಲಾಕ್​ಡೌನ್ ಅವಧಿಯಲ್ಲಿ ಪ್ರತಿಯೊಂದು ಕಚೇರಿ, ಮತ್ತು ನ್ಯಾಯಾಲಯಗಳೂ ಸ್ಥಗಿತಗೊಳ್ಳಲಿವೆ. ಆದರೆ, ಕಾರ್ಖಾನೆಗಳು ಪಾಳಿ ಪ್ರಕಾರದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಬಾಂಗ್ಲಾದೇಶ ಸರ್ಕಾರ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಏಪ್ರಿಲ್ 1ರಿಂದ ಏಳು ದಿನಗಳ ಲಾಕ್​ಡೌನ್ ಘೋಷಣೆ
ಲಾಕ್​ಡೌನ್ (ಸಂಗ್ರಹ ಚಿತ್ರ)
Follow us
guruganesh bhat
| Updated By: ganapathi bhat

Updated on: Apr 03, 2021 | 3:24 PM

ಢಾಕಾ: ಕೊರೊನಾ ಸೋಂಕು ಹೆಚ್ಚಳದಿಂದಾಗಿ ಬಾಂಗ್ಲಾದೇಶದಲ್ಲಿ ಏಪ್ರಿಲ್ 5ರಿಂದ ಒಂದು ವಾರಗಳ ಕಾಲ ಲಾಕ್​ಡೌನ್ ಹೇರಲಾಗಿದೆ. ಲಾಕ್​ಡೌನ್ ಅವಧಿಯಲ್ಲಿ ಪ್ರತಿಯೊಂದು ಕಚೇರಿ, ಮತ್ತು ನ್ಯಾಯಾಲಯಗಳೂ ಸ್ಥಗಿತಗೊಳ್ಳಲಿವೆ. ಆದರೆ, ಕಾರ್ಖಾನೆಗಳು ಪಾಳಿ ಪ್ರಕಾರದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಬಾಂಗ್ಲಾದೇಶ ಸರ್ಕಾರ ತಿಳಿಸಿದೆ. ಬಾಂಗ್ಲಾದೇಶದಲ್ಲಿ ಕೊರೊನಾ ಸೋಂಕಿನ ತೀವ್ರತೆ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 6,830 ಕೊವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 6,24,594ಕ್ಕೆ ಏರಿಕೆಯಾಗಿದೆ.

ಭಾರತ ಉತ್ಪಾದಿಸುವ ಕೊರೊನಾ ಲಸಿಕೆಯನ್ನು ಬಾಂಗ್ಲಾದೇಶಕ್ಕೂ ಒದಗಿಸುತ್ತೇವೆ ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾರಿಗೆ ಪ್ರಧಾನಿ ನರೇಂದ್ರ ಮೋದಿ  ಆಶ್ವಾಸನೆ ನೀಡಿದ್ದರು ಎಂದು ಇತ್ತೀಚಿಗೆ ಬಾಂಗ್ಲಾದ ವಿದೇಶಾಂಗ ಸಚಿವ  ಎಕೆ ಅಬ್ದುಲ್ ಮೊನೆನ್ ತಿಳಿಸಿದ್ದರು. ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಆಚರಣೆಯ ನಿಮಿತ್ತ ಈಗಾಗಲೇ 2 ಮಿಲಿಯನ್ ಡೋಸ್ ಕೊರೊನಾ ಲಸಿಕೆಯನ್ನು ಉಡುಗೊರೆಯಾಗಿ ಬಾಂಗ್ಲಾದೇಶಕ್ಕೆ ನೀಡಿದ್ದು, ಇನ್ನೂ 1.2 ಮಿಲಿಯನ್ ಡೋಸ್ ಲಸಿಕೆಯನ್ನು ಭಾರತ ಬಾಂಗ್ಲಾದೇಶಕ್ಕೆ  ನೀಡಲಿದೆ ಎಂದು ಹೇಳಲಾಗಿತ್ತು. ಬಾಂಗ್ಲಾದೇಶದ 50ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ ಈ ಆಶ್ವಾಸನೆ ನೀಡಿದ್ದರು. ಆದರೆ, ಕೆಲವೇ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಕೊವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ಇದೀಗ ಲಾಕ್​ಡೌನ್ ಘೋಷಣೆ ಮಾಡಲಾಗಿದೆ.

ಬಾಂಗ್ಲಾದೇಶದ ಪಕ್ಕದ ಪಶ್ಚಿಮ ಬಂಗಾಳದಲ್ಲಿ ಚುನಾವಣೆ; ಕೊವಿಡ್ ಆತಂಕ

ಬಾಂಗ್ಲಾದೇಶದ ಪಕ್ಕದಲ್ಲೇ ಇರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ಈಗಾಗಲೇ ಎಡರು ಹಂತದ ಚುನಾವಣೆಗಳು ನಡೆದಿದ್ದು, ಇನ್ನೂ ಆರು ಹಂತದ ಚುನಾವಣೆಗಳು ನಡೆಯುವುದು ಬಾಕಿಯಿದೆ. ಮುಂದಿನ ಚುನಾವಣೆಗಳು ಕ್ರಮವಾಗಿ ಏಪ್ರಿಲ್ 6, 10, 17, 22, 26, 29ರಂದು ನಡೆಯಲಿವೆ. ಈಗಾಗಲೇ ಎಲ್ಲಾ ರಾಜಕೀಯ ವಪಕ್ಷಗಳೂ ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿವೆ. ಪಕ್ಕದ ಬಾಂಗ್ಲಾದೇಶದಲ್ಲೇ ಕೊವಿಡ್ ಹೆಚ್ಚಳವಾಗಿ ಲಾಕ್​ಡೌನ್ ಹೇರಿರುವುದು ಇದೀಗ ಕಳವಳಕ್ಕೆ ಕಾರಣವಾಗಿದೆ.

ಭಾರತದಲ್ಲೂ ಹೆಚ್ಚುತ್ತಿದೆ ಕೊರೊನಾ

ಇನ್ನು ಭಾರತದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 89,129 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 6,58,909 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲೊಂದೇ 714 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾಕ್ಕೆ 1,64,110 ಜನರು ಬಲಿಯಾದಂತಾಗಿದೆ. ಕೊರೊನಾ ಚಿಕಿತ್ಸೆ ಪಡೆದು 1,15,69,241 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯೂ ತೀವ್ರಗತಿಯಲ್ಲಿ ನಡೆಯುತ್ತಿದ್ದು 7,30,54,295 ಜನರಿಗೆ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಇದನ್ನೂ ಓದಿ: ಕೊರೊನಾ ತಡೆಗೆ ಹೊಸ ಮಾರ್ಗಸೂಚಿ: ಬಾರ್​, ರೆಸ್ಟೋರೆಂಟ್, ಜಿಮ್, ಸ್ವಿಮ್​ಗೆ ನಿರ್ಬಂಧ

TV9 Digital Live| ಕೊವಿಡ್​ ನಿಯಂತ್ರಣ ಮಾಡಲು ಸರ್ಕಾರ ತಂದ ಹೊಸ ಮಾರ್ಗಸೂಚಿ ಸಹಕಾರಿಯಾಗಬಹುದೇ?

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ