AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಖ್​ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ

ಬಾಂಗ್ಲಾದೇಶದ ಹಂಗಾಮಿ ಸರ್ಕಾರವು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ಗಳನ್ನು ರದ್ದುಪಡಿಸಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಶೇಖ್​ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ
ಶೇಖ್ ಹಸೀನಾ
ನಯನಾ ರಾಜೀವ್
|

Updated on:Aug 22, 2024 | 12:24 PM

Share

ಬಾಂಗ್ಲಾದೇಶದ ಸರ್ಕಾರವು ಮಾಜಿ ಪ್ರಧಾನಿ ಶೇಖ್ ಹಸೀನಾ ಹಾಗೂ ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಆಯ್ದ ದೇಶಗಳಿಗೆ ವೀಸಾ-ಮುಕ್ತ ಪ್ರಯಾಣದಂತಹ ವಿವಿಧ ಸವಲತ್ತುಗಳನ್ನು ನೀಡುತ್ತಿದ್ದ ಈ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಹಸೀನಾ ಅವರ ಆಡಳಿತದಲ್ಲಿ ಸಂಸದರಿಗೆ ನೀಡಲಾಗಿತ್ತು.

ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಶೇಖ್​ ಹಸೀನಾ ಆಗಸ್ಟ್​ 5ರಿಂದ ಭಾರತದಲ್ಲಿ ನೆಲೆಸಿದ್ದು, ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅವರ ಸುರಕ್ಷತೆಗೆ ಬೆದರಿಕೆಗಳ ಮಧ್ಯೆ ಆಶ್ರಯ ಪಡೆಯುತ್ತಿದ್ದಾರೆ.

ಶೇಖ್ ಹಸೀನಾ ವಿರುದ್ಧ ಇಲ್ಲಿಯವರೆಗೆ 44 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪಾಸ್ ಪೋರ್ಟ್ ರದ್ದುಪಡಿಸಲು ಕಾರಣ ನೀಡಲಾಗಿದೆ. ಇದರೊಂದಿಗೆ ಇನ್ನೂ ಕೆಲವು ಪ್ರಕರಣಗಳು ದಾಖಲಾಗಬಹುದು.

ಯುಕೆ ಅಥವಾ ಯಾವುದೇ ದೇಶವು ಹಸೀನಾರ ವಿನಂತಿಯನ್ನು ಅನುಮೋದಿಸಿದ ಕಾರಣ ಅವರು ಭಾರತದಲ್ಲೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸಂಸತ್ತಿನಲ್ಲಿ ಹಸೀನಾ ಪ್ರಸ್ತುತ ಭಾರತದಲ್ಲಿದ್ದಾರೆ ಮತ್ತು ಸಹಾಯದ ಅಗತ್ಯವಿದೆ ಎಂದು ಖಚಿತಪಡಿಸಿದ್ದಾರೆ.

ಮತ್ತಷ್ಟು ಓದಿ: ಬಾಂಗ್ಲಾ ಪ್ರವಾಹಕ್ಕೂ ಭಾರತದ ಅಣೆಕಟ್ಟಿನಿಂದ ನೀರು ಬಿಟ್ಟಿದ್ದಕ್ಕೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ

ಢಾಕಾದಲ್ಲಿ ಇತ್ತೀಚೆಗೆ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಪ್ರಧಾನ ಕಾರ್ಯದರ್ಶಿ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಅವರು ಹಸೀನಾಳನ್ನು ಹಸ್ತಾಂತರಿಸುವಂತೆ ಕರೆ ನೀಡಿದರು, ಅವರು ತನ್ನ ತಾಯ್ನಾಡಿನಲ್ಲಿ ವಿಚಾರಣೆಯನ್ನು ಎದುರಿಸಬೇಕು ಎಂದು ಒತ್ತಾಯಿಸಿದರು.

ನೀವು ಅವರನ್ನು ಬಾಂಗ್ಲಾದೇಶ ಸರ್ಕಾರಕ್ಕೆ ಕಾನೂನು ರೀತಿಯಲ್ಲಿ ಹಸ್ತಾಂತರಿಸಬೇಕು ಎಂಬುದು ನಮ್ಮ ಮನವಿ, ಅವರು ವಿಚಾರಣೆ ಎದುರಿಸಲಿ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Thu, 22 August 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ