Bangla Murder: ಬಾಂಗ್ಲಾದಲ್ಲೂ ಶ್ರದ್ಧಾ ವಾಕರ್ ಮಾದರಿಯ ಮತ್ತೊಂದು ಕೊಲೆ, ಶ್ರದ್ಧಾ ಕೊಲೆ ಆರೋಪಿ ಕೂಡ ಬಾಂಗ್ಲಾದವನೇ

ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ವಿಚಾರಗಳನ್ನು ತೆರೆದಿಡುತ್ತಾ ಹೋಗುತ್ತಿದೆ. ಇದೀಗ ಆರೋಪಿ ವಿಚಾರಣೆ ವೇಳೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬಂದಿವೆ.

Bangla Murder: ಬಾಂಗ್ಲಾದಲ್ಲೂ ಶ್ರದ್ಧಾ ವಾಕರ್ ಮಾದರಿಯ ಮತ್ತೊಂದು ಕೊಲೆ, ಶ್ರದ್ಧಾ ಕೊಲೆ ಆರೋಪಿ ಕೂಡ ಬಾಂಗ್ಲಾದವನೇ
Abu BakarImage Credit source: First Spot
Follow us
| Updated By: ನಯನಾ ರಾಜೀವ್

Updated on:Nov 18, 2022 | 11:12 AM

ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ವಿಚಾರಗಳನ್ನು ತೆರೆದಿಡುತ್ತಾ ಹೋಗುತ್ತಿದೆ. ಇದೀಗ ಆರೋಪಿ ವಿಚಾರಣೆ ವೇಳೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬಂದಿವೆ. ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಬಾಂಗ್ಲಾದೇಶದವನು ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಇದರ ಬೆನ್ನಲ್ಲೇ ಶ್ರದ್ಧಾ ಹತ್ಯೆ ಮಾದರಿಯ ಮತ್ತೊಂದು ಕೊಲೆ ಬೆಳಕಿಗೆ ಬಂದಿದೆ.

ಬಾಂಗ್ಲಾದೇಶದಲ್ಲಿ ಮುಸ್ಲಿಂ ಯುವಕ ಅಬೂಬಕರ್ ಎಂಬಾತ ಹಿಂದೂ ಯುವತಿಯ ಶಿರಚ್ಛೇದ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ನವೆಂಬರ್ 7 ರಂದು ಬಾಂಗ್ಲಾದೇಶದ ಸೋನದಂಗಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಅಬೂಬಕರ್ ಕವಿತಾ ರಾಣಿ ಎಂಬಾಕೆಯನ್ನು ಹತ್ಯೆ ಮಾಡಿದ್ದ, ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.

ಮತ್ತಷ್ಟು ಓದಿ: Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್

ವಾಯ್ಸ್​ ಆಫ್ ಬಾಂಗ್ಲಾದೇಶ್ ಹಾಕಿರುವ ಪೋಸ್ಟ್​ ಪ್ರಕಾರ, ಅಬೂಬಕರ್​ಗೆ ಈಗಾಗಲೇ ಮದುವೆಯಾಗಿದೆ ಎನ್ನುವ ವಿಷಯ ತಿಳಿದ ಬಳಿಕ ಕವಿತಾ ರಾಣಿ ಹಾಗೂ ಆತನ ಮಧ್ಯೆ ಜಗಳ ಶುರುವಾಗಿತ್ತು. ಆ ಜಗಳ ಕೊನೆಗೆ ಕವಿತಾ ಹತ್ಯೆಯಲ್ಲಿ ಅಂತ್ಯಗೊಂಡಿತ್ತು ಆತ ಆಕೆಯ ಶಿರಚ್ಛೇದ ಮಾಡಿ, ಆಕೆಯ ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ, ಕವರ್​ನಲ್ಲಿ ತುಂಬಿ ಚರಂಡಿಗೆ ಎಸೆದಿದ್ದ.

ಇದು ದೆಹಲಿಯ ಶ್ರದ್ಧಾ ವಾಕರ್ ಹತ್ಯೆಗಿಂತ ತುಂಬಾ ಭಿನ್ನವಾಗಿಲ್ಲ ಅಫ್ತಾಬ್ ಪೂನಾವಾಲಾ ಎಂಬಾತ ಶ್ರದ್ಧಾ ವಾಕರ್ ಎಂಬಾಕೆಯ ಜತೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸಿದಾಗ ಅವರ ಮಧ್ಯೆ ಕಲಹ ಉಂಟಾಗಿತ್ತು. ಆ ಸಮಯದಲ್ಲಿ ಕತ್ತು ಹಿಸುಕಿ ಆಕೆಯನ್ನು ಕೊಲೆ ಮಾಡಿ ಬಳಿಕ 35 ತುಂಡುಗಳಾಗಿ ದೇಹವನ್ನು ಕತ್ತರಿಸಿ ನಗರದ ವಿವಿಧೆಡೆ ದೇಹದ ಭಾಗಗಳನ್ನು ಎಸೆದಿದ್ದ. ಹಾಗೆಯೇ ದೇಹವನ್ನು ಕತ್ತರಿಸಲು ಎಂತಹ ಚಾಕುವನ್ನು ಬಳಕೆ ಮಾಡುತ್ತಾರೆ ಎಂಬುದರ ಬಗ್ಗೆಯೂ ಆತ ಇಂಟರ್​ನೆಟ್​ನಲ್ಲಿ ಸರ್ಚ್​ ಮಾಡಿ ಖರೀದಿಸಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Fri, 18 November 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್