AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangla Murder: ಬಾಂಗ್ಲಾದಲ್ಲೂ ಶ್ರದ್ಧಾ ವಾಕರ್ ಮಾದರಿಯ ಮತ್ತೊಂದು ಕೊಲೆ, ಶ್ರದ್ಧಾ ಕೊಲೆ ಆರೋಪಿ ಕೂಡ ಬಾಂಗ್ಲಾದವನೇ

ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ವಿಚಾರಗಳನ್ನು ತೆರೆದಿಡುತ್ತಾ ಹೋಗುತ್ತಿದೆ. ಇದೀಗ ಆರೋಪಿ ವಿಚಾರಣೆ ವೇಳೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬಂದಿವೆ.

Bangla Murder: ಬಾಂಗ್ಲಾದಲ್ಲೂ ಶ್ರದ್ಧಾ ವಾಕರ್ ಮಾದರಿಯ ಮತ್ತೊಂದು ಕೊಲೆ, ಶ್ರದ್ಧಾ ಕೊಲೆ ಆರೋಪಿ ಕೂಡ ಬಾಂಗ್ಲಾದವನೇ
Abu BakarImage Credit source: First Spot
TV9 Web
| Edited By: |

Updated on:Nov 18, 2022 | 11:12 AM

Share

ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ವಿಚಾರಗಳನ್ನು ತೆರೆದಿಡುತ್ತಾ ಹೋಗುತ್ತಿದೆ. ಇದೀಗ ಆರೋಪಿ ವಿಚಾರಣೆ ವೇಳೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬಂದಿವೆ. ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಬಾಂಗ್ಲಾದೇಶದವನು ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗೆಯೇ ಇದರ ಬೆನ್ನಲ್ಲೇ ಶ್ರದ್ಧಾ ಹತ್ಯೆ ಮಾದರಿಯ ಮತ್ತೊಂದು ಕೊಲೆ ಬೆಳಕಿಗೆ ಬಂದಿದೆ.

ಬಾಂಗ್ಲಾದೇಶದಲ್ಲಿ ಮುಸ್ಲಿಂ ಯುವಕ ಅಬೂಬಕರ್ ಎಂಬಾತ ಹಿಂದೂ ಯುವತಿಯ ಶಿರಚ್ಛೇದ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ನವೆಂಬರ್ 7 ರಂದು ಬಾಂಗ್ಲಾದೇಶದ ಸೋನದಂಗಾ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಅಬೂಬಕರ್ ಕವಿತಾ ರಾಣಿ ಎಂಬಾಕೆಯನ್ನು ಹತ್ಯೆ ಮಾಡಿದ್ದ, ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.

ಮತ್ತಷ್ಟು ಓದಿ: Shraddha Walker Murder Case: ಶಿಕ್ಷಿತ ಹೆಣ್ಣು ಮಕ್ಕಳು ಈ ಘಟನೆಯಿಂದ ಪಾಠ ಕಲಿಯಬೇಕಿದೆ: ಕೇಂದ್ರ ಸಚಿವ ಕೌಶಲ್

ವಾಯ್ಸ್​ ಆಫ್ ಬಾಂಗ್ಲಾದೇಶ್ ಹಾಕಿರುವ ಪೋಸ್ಟ್​ ಪ್ರಕಾರ, ಅಬೂಬಕರ್​ಗೆ ಈಗಾಗಲೇ ಮದುವೆಯಾಗಿದೆ ಎನ್ನುವ ವಿಷಯ ತಿಳಿದ ಬಳಿಕ ಕವಿತಾ ರಾಣಿ ಹಾಗೂ ಆತನ ಮಧ್ಯೆ ಜಗಳ ಶುರುವಾಗಿತ್ತು. ಆ ಜಗಳ ಕೊನೆಗೆ ಕವಿತಾ ಹತ್ಯೆಯಲ್ಲಿ ಅಂತ್ಯಗೊಂಡಿತ್ತು ಆತ ಆಕೆಯ ಶಿರಚ್ಛೇದ ಮಾಡಿ, ಆಕೆಯ ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ, ಕವರ್​ನಲ್ಲಿ ತುಂಬಿ ಚರಂಡಿಗೆ ಎಸೆದಿದ್ದ.

ಇದು ದೆಹಲಿಯ ಶ್ರದ್ಧಾ ವಾಕರ್ ಹತ್ಯೆಗಿಂತ ತುಂಬಾ ಭಿನ್ನವಾಗಿಲ್ಲ ಅಫ್ತಾಬ್ ಪೂನಾವಾಲಾ ಎಂಬಾತ ಶ್ರದ್ಧಾ ವಾಕರ್ ಎಂಬಾಕೆಯ ಜತೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸಿದಾಗ ಅವರ ಮಧ್ಯೆ ಕಲಹ ಉಂಟಾಗಿತ್ತು. ಆ ಸಮಯದಲ್ಲಿ ಕತ್ತು ಹಿಸುಕಿ ಆಕೆಯನ್ನು ಕೊಲೆ ಮಾಡಿ ಬಳಿಕ 35 ತುಂಡುಗಳಾಗಿ ದೇಹವನ್ನು ಕತ್ತರಿಸಿ ನಗರದ ವಿವಿಧೆಡೆ ದೇಹದ ಭಾಗಗಳನ್ನು ಎಸೆದಿದ್ದ. ಹಾಗೆಯೇ ದೇಹವನ್ನು ಕತ್ತರಿಸಲು ಎಂತಹ ಚಾಕುವನ್ನು ಬಳಕೆ ಮಾಡುತ್ತಾರೆ ಎಂಬುದರ ಬಗ್ಗೆಯೂ ಆತ ಇಂಟರ್​ನೆಟ್​ನಲ್ಲಿ ಸರ್ಚ್​ ಮಾಡಿ ಖರೀದಿಸಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:11 am, Fri, 18 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ