Temple Vandalised: ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ, ವಿಗ್ರಹಗಳ ಧ್ವಂಸ

ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Temple Vandalised: ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದಾಳಿ, ವಿಗ್ರಹಗಳ ಧ್ವಂಸ
ದೇವರು
Image Credit source: India Today

Updated on: Dec 21, 2024 | 10:37 AM

ಶೇಖ್ ಹಸೀನಾ ದೇಶ ತೊರೆದ ನಂತರ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮುಂದುವರೆದಿವೆ. ಬಾಂಗ್ಲಾದೇಶದಲ್ಲಿ ದಂಗೆ ನಡೆದಾಗಿನಿಂದ ಅಲ್ಲಿ ಪರಿಸ್ಥಿತಿ ಶಾಂತಿಯುತವಾಗಿಲ್ಲ.  ಬಾಂಗ್ಲಾದೇಶದಲ್ಲಿ ಮೂರು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ದಿನಗಳಲ್ಲಿ ದುಷ್ಕರ್ಮಿಗಳು ಬಾಂಗ್ಲಾದೇಶದ ಮೈಮೆನ್‌ಸಿಂಗ್ ಮತ್ತು ದಿನಾಜ್‌ಪುರ ಜಿಲ್ಲೆಗಳಲ್ಲಿ ಮೂರು ಹಿಂದೂ ದೇವಾಲಯಗಳಲ್ಲಿ ಎಂಟು ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ಹೆಚ್ಚಿದೆ. ಗುರುವಾರ ಮೈಮೆನ್​ಸಿಂಗ್​ನ ಹಲುಘಾಟ್​ ಹಾಗೂ ಶುಕ್ರವಾರದಂದು ಶಕುವಾಯ್​ನ ಯೂನಿಯನ್​ನಲ್ಲಿರುವ ಬೋಂಡರ್​ ಪಾರಾ ದೇವಾಲಯದಲ್ಲಿ ಎರಡು ವಿಗ್ರಹಗಳಿಗೆ ಹಾನಿಯಾಗಿದೆ. ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮೈಮೆನ್‌ಸಿಂಗ್‌ನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೋಲಸಕಂಡ ಗ್ರಾಮದ ಅಲಾಲ್ ಉದ್ದೀನ್ (27) ಎಂಬಾತನನ್ನು ಪೋಲಸಕಂಡ ಕಾಳಿ ದೇವಸ್ಥಾನದಲ್ಲಿ ವಿಗ್ರಹವನ್ನು ಒಡೆದ ಆರೋಪದ ಮೇಲೆ ಗುರುವಾರ ಬಂಧಿಸಲಾಗಿದೆ.

ಮತ್ತಷ್ಟು ಓದಿ: Fact Check: ಬಾಂಗ್ಲಾದೇಶದಲ್ಲಿ ಮುಸ್ಲಿಮರು ಧ್ವಂಸ ಮಾಡಿದ್ದು ಹಿಂದೂ ದೇವಸ್ಥಾನವನ್ನಲ್ಲ: ನಿಜಾಂಶ ಇಲ್ಲಿದೆ

ಮಂಗಳವಾರ ದಿನಜ್‌ಪುರದ ಬಿರ್‌ಗಂಜ್ ಜಿಲ್ಲೆಯ ಜರ್ಬರಿ ಶಶನ್ ಕಾಳಿ ದೇವಸ್ಥಾನದಲ್ಲಿ ಐದು ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದೆ. ಹೆಚ್ಚುತ್ತಿರುವ ಹಿಂಸಾಚಾರವು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಿದೆ.

ಹಸೀನಾ ಅವರನ್ನು ಅಧಿಕಾರದಿಂದ ಕೆಳಗಿಳಿಸಿದಾಗಿನಿಂದ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ 88 ಕೋಮುಗಲಭೆ ಪ್ರಕರಣಗಳು ನಡೆದಿವೆ. ಈ ಘಟನೆಗಳು ದೇಶದೊಳಗೆ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ಹೆಚ್ಚುತ್ತಿರುವ ಅಭದ್ರತೆಯನ್ನು ಪ್ರತಿಬಿಂಬಿಸುತ್ತವೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us