AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ಕಾನ್ ಉಗ್ರ ಸಂಘಟನೆಯೆಂದು ಘೋಷಿಸಿದ ಬಾಂಗ್ಲಾದೇಶ!

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಅಲ್ಲಿ ಜೈ ಶ್ರೀರಾಮ್ ಎಂದು ಹೇಳುವ ವ್ಯಕ್ತಿಯನ್ನು ಭಯೋತ್ಪಾದಕನಂತೆ ಬಿಂಬಿಸಲಾಗುತ್ತಿದೆ. ಬಾಂಗ್ಲಾದೇಶ ಇಸ್ಕಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಮೂಲಕ ಹಿಂದೂಗಳ ಮೇಲಿನ ಟಾರ್ಗೆಟ್​ ಅನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಇಸ್ಕಾನ್ ಉಗ್ರ ಸಂಘಟನೆಯೆಂದು ಘೋಷಿಸಿದ ಬಾಂಗ್ಲಾದೇಶ!
ಮುಹಮ್ಮದ್ ಯೂನಸ್
ಸುಷ್ಮಾ ಚಕ್ರೆ
|

Updated on:Nov 14, 2024 | 7:55 PM

Share

ಡಾಕಾ: ಬಾಂಗ್ಲಾದೇಶದ ಪ್ರಸ್ತುತ ಸರ್ಕಾರದ ವಿರುದ್ಧ ಅಂತಾರಾಷ್ಟ್ರೀಯ ಒತ್ತಡವೂ ಹೆಚ್ಚುತ್ತಿದೆ. ಯುಎಸ್ ಚುನಾವಣೆಗೂ ಮುನ್ನ ಡೊನಾಲ್ಡ್ ಟ್ರಂಪ್ ಬಾಂಗ್ಲಾದೇಶಿ ಹಿಂದೂಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದು ಪಾಶ್ಚಿಮಾತ್ಯ ದೇಶಗಳು ಯೂನಸ್ ಸರ್ಕಾರದ ನೀತಿಗಳಿಂದ ಸಂತೋಷವಾಗಿಲ್ಲ ಎಂದು ಸೂಚಿಸುತ್ತದೆ. ಇದೀಗ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ದ್ವೇಷವು ಹೊಸ ತಿರುವು ಪಡೆದುಕೊಂಡಿದೆ. ಇದೀಗ ಬಾಂಗ್ಲಾದೇಶದ ಪೊಲೀಸರು ಹಿಂದೂ ಧಾರ್ಮಿಕ ಸಂಘಟನೆಯಾದ ಇಸ್ಕಾನ್ (ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ ನೆಸ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಯಲ್ಲಿ ಇಸ್ಕಾನ್ ಸದಸ್ಯರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹಿಂದೆ ಇಸ್ಕಾನ್‌ನ ಹಿರಿಯ ಬೋಧಕ ಚಿನ್ಮಯ್ ಕೃಷ್ಣ ದಾಸ್ ವಿರುದ್ಧವೂ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈ ಘಟನೆಯು ಬಾಂಗ್ಲಾದೇಶದ ಹಿಂದೂ ಸಂಘಟನೆಗಳು ಮತ್ತು ಅವರ ಅನುಯಾಯಿಗಳಲ್ಲಿ ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ: ಪೇಮೆಂಟ್ ಆಗಿಲ್ಲವೆಂದು ಬಾಂಗ್ಲಾದೇಶಕ್ಕೆ ಪವರ್ ಕಟ್ ಮಾಡಲು ಅದಾನಿ ಯೋಜನೆ

ಬಾಂಗ್ಲಾದೇಶದ ಮೂಲಭೂತವಾದಿ ಗುಂಪುಗಳು ಬಹಳ ಹಿಂದಿನಿಂದಲೂ ಹಿಂದೂಗಳನ್ನು ಗುರಿಯಾಗಿಸಿಕೊಂಡು ಬರುತ್ತಿವೆ. ಆದರೆ, ಈಗ ಹಿಂದೂ ಸಂಘಟನೆಗಳು ನೇರವಾಗಿ ಸರ್ಕಾರ ಮತ್ತು ಪೊಲೀಸರಿಂದ ಗುರಿಯಾಗುತ್ತಿವೆ. ಇಸ್ಕಾನ್​ನಂತಹ ಭಕ್ತಿ ಸಂಸ್ಥೆಗಳ ಮೇಲೆ ಏಕೆ ಗಂಭೀರ ಆರೋಪಗಳನ್ನು ಮಾಡಲಾಗುತ್ತಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ? ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಆಧರಿಸಿ, ಬಾಂಗ್ಲಾದೇಶ ಪೊಲೀಸ್ ಮತ್ತು ಸೇನೆಯ ಗುಪ್ತಚರ ವಿಭಾಗವು ಇಸ್ಕಾನ್‌ನ ಚಟುವಟಿಕೆಗಳು ಹಿಂಸಾಚಾರವನ್ನು ಉತ್ತೇಜಿಸುತ್ತಿದೆ ಎಂದು ಹೇಳಿಕೊಂಡಿದೆ. ‘ಜೈ ಶ್ರೀ ರಾಮ್’ ಎಂದು ಹೇಳುವವರಿಗೆ ಈಗ ಭಯೋತ್ಪಾದಕರ ಹಣೆಪಟ್ಟಿ ಕಟ್ಟಲಾಗುತ್ತಿದೆ. ಇದು ಬಾಂಗ್ಲಾದೇಶ ಸರ್ಕಾರದ ಸರ್ವಾಧಿಕಾರಿ ಚಿಂತನೆಯನ್ನು ಬಯಲು ಮಾಡಿದೆ ಎಂಬ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ವೇಳೆ ದಾಳಿ; ಕಳವಳ ವ್ಯಕ್ತಪಡಿಸಿದ ಭಾರತ

ಇಸ್ಕಾನ್ ಅನುಯಾಯಿಗಳು ಜನರಿಗೆ ಆಹಾರ, ಔಷಧ ಮತ್ತು ಪರಿಹಾರ ಸಾಮಗ್ರಿಗಳನ್ನು ಒದಗಿಸುತ್ತಾರೆ. ಇದರ ಹೊರತಾಗಿಯೂ, ಇಸ್ಕಾನ್ ಅನ್ನು ಹಿಂಸೆ ಮತ್ತು ಭಯೋತ್ಪಾದನೆಯೊಂದಿಗೆ ಜೋಡಿಸುವುದು ಬಾಂಗ್ಲಾದೇಶ ಸರ್ಕಾರದ ಉದ್ದೇಶಗಳ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಆದರೆ, ಬಾಂಗ್ಲಾ ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಾಂಗ್ಲಾದೇಶದ ಪ್ರಸ್ತುತ ಸರ್ಕಾರದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚುತ್ತಿದೆ. ಯುಎಸ್ ಚುನಾವಣೆಗೆ ಮುನ್ನ ಡೊನಾಲ್ಡ್ ಟ್ರಂಪ್ ಬಾಂಗ್ಲಾದೇಶಿ ಹಿಂದೂಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇದು ಪಾಶ್ಚಿಮಾತ್ಯ ದೇಶಗಳು ಯೂನಸ್ ಸರ್ಕಾರದ ನೀತಿಗಳಿಂದ ಸಂತೋಷವಾಗಿಲ್ಲ ಎಂದು ಸೂಚಿಸುತ್ತದೆ. ಇದಲ್ಲದೆ, ಅವಾಮಿ ಲೀಗ್ ಮೊಹಮ್ಮದ್ ಯೂನಸ್ ಸರ್ಕಾರದ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಲ್ಲಿ (ಐಸಿಸಿ) ದೂರು ದಾಖಲಿಸಿದೆ. ಈ ದೂರನ್ನು ಸ್ವೀಕರಿಸಿದರೆ, ಯೂನಸ್ ವಿರುದ್ಧ ಅಂತಾರಾಷ್ಟ್ರೀಯ ತನಿಖೆ ಪ್ರಾರಂಭವಾಗಬಹುದು. ಅದು ಅವರ ಸ್ಥಾನಕ್ಕೆ ಸಂಕಷ್ಟ ತಂದೊಡ್ಡುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Thu, 14 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ