ಉಕ್ರೇನ್‌ನಿಂದ ಬಾಂಗ್ಲಾದೇಶಿಯರನ್ನು ರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ ಶೇಖ್ ಹಸೀನಾ

ಭಾರತವು ತನ್ನ ಸ್ಥಳಾಂತರಿಸುವ ಕಾರ್ಯಾಚರಣೆ 'ಆಪರೇಷನ್ ಗಂಗಾ' ಅಡಿಯಲ್ಲಿ ನಡೆಸುತ್ತಿರುವ ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನಿಂದ ಇದುವರೆಗೆ ಒಂಬತ್ತು ಬಾಂಗ್ಲಾದೇಶೀಯರನ್ನು ಮತ್ತು ಹಲವಾರು ನೇಪಾಳಿ ಮತ್ತು ಟುನೀಶಿಯನ್ ವಿದ್ಯಾರ್ಥಿಗಳನ್ನು ರಕ್ಷಿಸಿದೆ.

ಉಕ್ರೇನ್‌ನಿಂದ ಬಾಂಗ್ಲಾದೇಶಿಯರನ್ನು ರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ ಶೇಖ್ ಹಸೀನಾ
ಶೇಖ್ ಹಸೀನಾ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Mar 09, 2022 | 2:29 PM

ದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ (Ukraine) ಸ್ಥಳಾಂತರಿಸಲಾಗುತ್ತಿರುವ ಭಾರತೀಯ ಪ್ರಜೆಗಳ ಜೊತೆಗೆ ‘ಆಪರೇಷನ್ ಗಂಗಾ‘ (Operation Ganga)ಅಡಿಯಲ್ಲಿ ತನ್ನ ದೇಶದ ಪ್ರಜೆಗಳನ್ನು ರಕ್ಷಿಸಿದ್ದಕ್ಕಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಭಾರತವು ತನ್ನ ಸ್ಥಳಾಂತರಿಸುವ ಕಾರ್ಯಾಚರಣೆ ‘ಆಪರೇಷನ್ ಗಂಗಾ’ ಅಡಿಯಲ್ಲಿ ನಡೆಸುತ್ತಿರುವ ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನಿಂದ ಇದುವರೆಗೆ ಒಂಬತ್ತು ಬಾಂಗ್ಲಾದೇಶೀಯರನ್ನು ಮತ್ತು ಹಲವಾರು ನೇಪಾಳಿ ಮತ್ತು ಟುನೀಶಿಯನ್ ವಿದ್ಯಾರ್ಥಿಗಳನ್ನು ರಕ್ಷಿಸಿದೆ. ಒಬ್ಬ ಪಾಕಿಸ್ತಾನಿ ಪ್ರಜೆಯನ್ನು ಸಹ ಭಾರತೀಯ ಅಧಿಕಾರಿಗಳು ರಕ್ಷಿಸಿದ್ದಾರೆ. ಈಗ ಮತ್ತಷ್ಟು ಜನರನ್ನು ಸ್ಥಳಾಂತರಿಸಲು ಪಶ್ಚಿಮ ಉಕ್ರೇನ್‌ಗೆ ಭಾರತದ ತಂಡ ತೆರಳಿದೆ.  ಭಾರತವು ಫೆಬ್ರವರಿ ಅಂತ್ಯದಿಂದ ಉಕ್ರೇನ್‌ನಿಂದ ತನ್ನ ಪ್ರಜೆಗಳನ್ನು, ಮುಖ್ಯವಾಗಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದೆ. ಆದರೆ ದೇಶದ ಪೂರ್ವ ಭಾಗಗಳಲ್ಲಿ, ವಿಶೇಷವಾಗಿ ಈಶಾನ್ಯ ನಗರವಾದ ಸುಮಿಯಲ್ಲಿ ಸುಮಾರು 700 ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದರು. ಪುನರಾವರ್ತಿತ ಪ್ರಯತ್ನಗಳ ಹೊರತಾಗಿಯೂ ಅಲ್ಲಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಸಾಧ್ಯವಾಗದೇ ಇದ್ದು, ಮಂಗಳವಾರ ಸಂಜೆ ಈ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.

ಆದಾಗ್ಯೂ, ಹಲವಾರು ಸುತ್ತಿನ ರಷ್ಯಾ-ಉಕ್ರೇನ್ ಮಾತುಕತೆಗಳು, ಸೋಮವಾರ ವಿಫಲವಾದ ಸುಮಿಯಿಂದ ಸ್ಥಳಾಂತರಿಸುವ ಪ್ರಯತ್ನ ಮತ್ತು ರಷ್ಯಾ ಮತ್ತು ಉಕ್ರೇನ್ ನಾಯಕರಿಗೆ ಪ್ರಧಾನಿ ಮೋದಿಯವರಿಂದ ಕರೆ ಮಾಡಿದ ನಂತರ, ರಷ್ಯಾ ಮಂಗಳವಾರ ಅಂತಿಮವಾಗಿ ಕದನ ವಿರಾಮ ಘೋಷಿಸಿ 12 ರಿಂದ “ಮಾನವೀಯ ಕಾರ್ಯಾಚರಣೆ” ನಡೆಸಲು ಪ್ರಾರಂಭಿಸಿತು. ಭಾರತದಲ್ಲಿನ ರಷ್ಯಾದ ರಾಯಭಾರ ಕಚೇರಿಯು ಒದಗಿಸಲು ಸಿದ್ಧವಾಗಿರುವ “ಮಾನವೀಯ ಕಾರಿಡಾರ್” ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಸುಮಿಯಲ್ಲಿ ಸಿಲುಕಿರುವ ಎಲ್ಲಾ 694 ಭಾರತೀಯರು ಉಕ್ರೇನ್ ತೊರೆಯಲು ಸಾಧ್ಯವಾಯಿತು ಎಂದು ಕೇಂದ್ರ ಹೇಳಿದೆ.

ಫೆಬ್ರವರಿ 22 ರಿಂದ ಸುಮಾರು 18,000 ಭಾರತೀಯರನ್ನು ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನಿಂದ ಮರಳಿ ಕರೆತರಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಸುಸೇವಾದಿಂದ ವಿಶೇಷ ನಾಗರಿಕ ವಿಮಾನಗಳ ಮೂಲಕ ಒಟ್ಟು 410 ಭಾರತೀಯರನ್ನು ಮರಳಿ ಕರೆತರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆಪರೇಷನ್ ಗಂಗಾ (Operation Ganga) ಭಾಗವಾಗಿ 2467 ಪ್ರಯಾಣಿಕರನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯು 12 ವಿಮಾನ ಕಾರ್ಯಾಚರಣೆಗಳನ್ನು ನಡೆಸಿದೆ ಮತ್ತು 32 ಟನ್ ಪರಿಹಾರ ಸಾಮಗ್ರಿಗಳನ್ನು ಸಾಗಿಸಿದೆ ಎಂದು ಸಚಿವಾಲಯ ಹೇಳಿದೆ.  ನಾಗರಿಕ ವಿಮಾನಗಳಲ್ಲಿ ಬುಕಾರೆಸ್ಟ್‌ನಿಂದ 21 ವಿಮಾನಗಳ ಮೂಲಕ 4,575 ಪ್ರಯಾಣಿಕರನ್ನು, ಒಂಬತ್ತು ವಿಮಾನಗಳ ಮೂಲಕ 1,820 ಸುಸೇವಾದಿಂದ, 5,571ಮಂದಿಯನ್ನು ಬುಡಾಪೆಸ್ಟ್‌ನಿಂದ 28 ವಿಮಾನಗಳ ಮೂಲಕ, 909 ಪ್ರಯಾಣಿಕರನ್ನು ಕೊಸಿಸ್‌ನಿಂದ ಐದು ವಿಮಾನಗಳಲ್ಲಿ, 2,404 ಭಾರತೀಯರನ್ನು ರ್ಜೆಸ್ಜೋವ್‌ನಿಂದ 11 ವಿಮಾನಗಳಲ್ಲಿ ಮತ್ತು ಕೀವ್ ನಿಂದ 242 ವ್ಯಕ್ತಿಗಳನ್ನು ಕರೆತರಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಏತನ್ಮಧ್ಯೆ, ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಸುಮಿಯಿಂದ ಸುಮಾರು 600 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಇದನ್ನೂ ಓದಿ:ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್​​ನಲ್ಲಿ ಸೇರಿದ್ದಾರೆ 20 ಸಾವಿರ ವಿದೇಶಿ ಸ್ವಯಂ ಸೇವಕರು; ಭಾರತದವರೂ ಇದ್ದಾರೆ !

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ