AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್‌ನಿಂದ ಬಾಂಗ್ಲಾದೇಶಿಯರನ್ನು ರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ ಶೇಖ್ ಹಸೀನಾ

ಭಾರತವು ತನ್ನ ಸ್ಥಳಾಂತರಿಸುವ ಕಾರ್ಯಾಚರಣೆ 'ಆಪರೇಷನ್ ಗಂಗಾ' ಅಡಿಯಲ್ಲಿ ನಡೆಸುತ್ತಿರುವ ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನಿಂದ ಇದುವರೆಗೆ ಒಂಬತ್ತು ಬಾಂಗ್ಲಾದೇಶೀಯರನ್ನು ಮತ್ತು ಹಲವಾರು ನೇಪಾಳಿ ಮತ್ತು ಟುನೀಶಿಯನ್ ವಿದ್ಯಾರ್ಥಿಗಳನ್ನು ರಕ್ಷಿಸಿದೆ.

ಉಕ್ರೇನ್‌ನಿಂದ ಬಾಂಗ್ಲಾದೇಶಿಯರನ್ನು ರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ ಶೇಖ್ ಹಸೀನಾ
ಶೇಖ್ ಹಸೀನಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Mar 09, 2022 | 2:29 PM

Share

ದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ (Ukraine) ಸ್ಥಳಾಂತರಿಸಲಾಗುತ್ತಿರುವ ಭಾರತೀಯ ಪ್ರಜೆಗಳ ಜೊತೆಗೆ ‘ಆಪರೇಷನ್ ಗಂಗಾ‘ (Operation Ganga)ಅಡಿಯಲ್ಲಿ ತನ್ನ ದೇಶದ ಪ್ರಜೆಗಳನ್ನು ರಕ್ಷಿಸಿದ್ದಕ್ಕಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಬುಧವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಭಾರತವು ತನ್ನ ಸ್ಥಳಾಂತರಿಸುವ ಕಾರ್ಯಾಚರಣೆ ‘ಆಪರೇಷನ್ ಗಂಗಾ’ ಅಡಿಯಲ್ಲಿ ನಡೆಸುತ್ತಿರುವ ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನಿಂದ ಇದುವರೆಗೆ ಒಂಬತ್ತು ಬಾಂಗ್ಲಾದೇಶೀಯರನ್ನು ಮತ್ತು ಹಲವಾರು ನೇಪಾಳಿ ಮತ್ತು ಟುನೀಶಿಯನ್ ವಿದ್ಯಾರ್ಥಿಗಳನ್ನು ರಕ್ಷಿಸಿದೆ. ಒಬ್ಬ ಪಾಕಿಸ್ತಾನಿ ಪ್ರಜೆಯನ್ನು ಸಹ ಭಾರತೀಯ ಅಧಿಕಾರಿಗಳು ರಕ್ಷಿಸಿದ್ದಾರೆ. ಈಗ ಮತ್ತಷ್ಟು ಜನರನ್ನು ಸ್ಥಳಾಂತರಿಸಲು ಪಶ್ಚಿಮ ಉಕ್ರೇನ್‌ಗೆ ಭಾರತದ ತಂಡ ತೆರಳಿದೆ.  ಭಾರತವು ಫೆಬ್ರವರಿ ಅಂತ್ಯದಿಂದ ಉಕ್ರೇನ್‌ನಿಂದ ತನ್ನ ಪ್ರಜೆಗಳನ್ನು, ಮುಖ್ಯವಾಗಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದೆ. ಆದರೆ ದೇಶದ ಪೂರ್ವ ಭಾಗಗಳಲ್ಲಿ, ವಿಶೇಷವಾಗಿ ಈಶಾನ್ಯ ನಗರವಾದ ಸುಮಿಯಲ್ಲಿ ಸುಮಾರು 700 ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದರು. ಪುನರಾವರ್ತಿತ ಪ್ರಯತ್ನಗಳ ಹೊರತಾಗಿಯೂ ಅಲ್ಲಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಸಾಧ್ಯವಾಗದೇ ಇದ್ದು, ಮಂಗಳವಾರ ಸಂಜೆ ಈ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.

ಆದಾಗ್ಯೂ, ಹಲವಾರು ಸುತ್ತಿನ ರಷ್ಯಾ-ಉಕ್ರೇನ್ ಮಾತುಕತೆಗಳು, ಸೋಮವಾರ ವಿಫಲವಾದ ಸುಮಿಯಿಂದ ಸ್ಥಳಾಂತರಿಸುವ ಪ್ರಯತ್ನ ಮತ್ತು ರಷ್ಯಾ ಮತ್ತು ಉಕ್ರೇನ್ ನಾಯಕರಿಗೆ ಪ್ರಧಾನಿ ಮೋದಿಯವರಿಂದ ಕರೆ ಮಾಡಿದ ನಂತರ, ರಷ್ಯಾ ಮಂಗಳವಾರ ಅಂತಿಮವಾಗಿ ಕದನ ವಿರಾಮ ಘೋಷಿಸಿ 12 ರಿಂದ “ಮಾನವೀಯ ಕಾರ್ಯಾಚರಣೆ” ನಡೆಸಲು ಪ್ರಾರಂಭಿಸಿತು. ಭಾರತದಲ್ಲಿನ ರಷ್ಯಾದ ರಾಯಭಾರ ಕಚೇರಿಯು ಒದಗಿಸಲು ಸಿದ್ಧವಾಗಿರುವ “ಮಾನವೀಯ ಕಾರಿಡಾರ್” ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಸುಮಿಯಲ್ಲಿ ಸಿಲುಕಿರುವ ಎಲ್ಲಾ 694 ಭಾರತೀಯರು ಉಕ್ರೇನ್ ತೊರೆಯಲು ಸಾಧ್ಯವಾಯಿತು ಎಂದು ಕೇಂದ್ರ ಹೇಳಿದೆ.

ಫೆಬ್ರವರಿ 22 ರಿಂದ ಸುಮಾರು 18,000 ಭಾರತೀಯರನ್ನು ವಿಶೇಷ ವಿಮಾನಗಳ ಮೂಲಕ ಉಕ್ರೇನ್‌ನಿಂದ ಮರಳಿ ಕರೆತರಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಸುಸೇವಾದಿಂದ ವಿಶೇಷ ನಾಗರಿಕ ವಿಮಾನಗಳ ಮೂಲಕ ಒಟ್ಟು 410 ಭಾರತೀಯರನ್ನು ಮರಳಿ ಕರೆತರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಆಪರೇಷನ್ ಗಂಗಾ (Operation Ganga) ಭಾಗವಾಗಿ 2467 ಪ್ರಯಾಣಿಕರನ್ನು ಮರಳಿ ಕರೆತರಲು ಭಾರತೀಯ ವಾಯುಪಡೆಯು 12 ವಿಮಾನ ಕಾರ್ಯಾಚರಣೆಗಳನ್ನು ನಡೆಸಿದೆ ಮತ್ತು 32 ಟನ್ ಪರಿಹಾರ ಸಾಮಗ್ರಿಗಳನ್ನು ಸಾಗಿಸಿದೆ ಎಂದು ಸಚಿವಾಲಯ ಹೇಳಿದೆ.  ನಾಗರಿಕ ವಿಮಾನಗಳಲ್ಲಿ ಬುಕಾರೆಸ್ಟ್‌ನಿಂದ 21 ವಿಮಾನಗಳ ಮೂಲಕ 4,575 ಪ್ರಯಾಣಿಕರನ್ನು, ಒಂಬತ್ತು ವಿಮಾನಗಳ ಮೂಲಕ 1,820 ಸುಸೇವಾದಿಂದ, 5,571ಮಂದಿಯನ್ನು ಬುಡಾಪೆಸ್ಟ್‌ನಿಂದ 28 ವಿಮಾನಗಳ ಮೂಲಕ, 909 ಪ್ರಯಾಣಿಕರನ್ನು ಕೊಸಿಸ್‌ನಿಂದ ಐದು ವಿಮಾನಗಳಲ್ಲಿ, 2,404 ಭಾರತೀಯರನ್ನು ರ್ಜೆಸ್ಜೋವ್‌ನಿಂದ 11 ವಿಮಾನಗಳಲ್ಲಿ ಮತ್ತು ಕೀವ್ ನಿಂದ 242 ವ್ಯಕ್ತಿಗಳನ್ನು ಕರೆತರಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಏತನ್ಮಧ್ಯೆ, ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಸುಮಿಯಿಂದ ಸುಮಾರು 600 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಇದನ್ನೂ ಓದಿ:ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್​​ನಲ್ಲಿ ಸೇರಿದ್ದಾರೆ 20 ಸಾವಿರ ವಿದೇಶಿ ಸ್ವಯಂ ಸೇವಕರು; ಭಾರತದವರೂ ಇದ್ದಾರೆ !

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ