ಬಾಂಗ್ಲಾದೇಶ: ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ, 100 ಮಂದಿ ಸಾವು

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದ್ದು, ಅದು ಹಿಂಸಾಚಾರಕ್ಕೆ ತಿರುಗಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶ: ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ, 100 ಮಂದಿ ಸಾವು
ಪ್ರತಿಭಟನೆ
Image Credit source: Business Today

Updated on: Aug 05, 2024 | 8:27 AM

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ  ನಡೆದ ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ.
ಇಸ್ಕಾನ್ ಮತ್ತು ಕಾಳಿ ದೇವಾಲಯಗಳು ಸೇರಿದಂತೆ ಹಿಂದೂ ದೇವಾಲಯ ಹಾಗೂ ಮನೆಗಳನ್ನು ಗುರಿಯಾಗಿಸಲಾಗಿದೆ. ಇದರಿಂದಾಗಿ ಭಕ್ತರು ಪರದಾಡಬೇಕಾಯಿತು. ಹಿಂಸಾಚಾರದಲ್ಲಿ ಒಬ್ಬ ಹಿಂದೂ ಕೂಡ ಸಾವನ್ನಪ್ಪಿದ್ದಾನೆ.

ಭಾರತೀಯರು ಮನೆಯಿಂದ ಆಚೆ ಬಾರದಂತೆ ಸೂಚನೆ ನೀಡಲಾಗಿದೆ. ಹಿಂಸಾಚಾರದ ಪರಿಣಾಮವಾಗಿ ಅಧಿಕಾರಿಗಳು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದರು ಮತ್ತು ಅನಿರ್ದಿಷ್ಟ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲಾಗಿದೆ.
ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ವ್ಯವಸ್ಥೆ ವಿಚಾರವಾಗಿ ಗದ್ದಲ ಎದ್ದಿರುವ ಹಿನ್ನೆಲೆಯಲ್ಲಿ ಶೇಖ್ ಹಸೀನಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ವಿವಾದಾತ್ಮಕ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹೋರಾಡಿದ ಮಾಜಿ ಸೈನಿಕರ ಸಂಬಂಧಿಕರಿಗೆ ಈ ಕೋಟಾ ವ್ಯವಸ್ಥೆಯಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಶೇ.30ರಷ್ಟು ಮೀಸಲಾತಿಯನ್ನು ನೀಡಲಾಯಿತು.

ಮತ್ತಷ್ಟು ಓದಿ: ಬಾಂಗ್ಲಾದೇಶದಲ್ಲಿ ಹೂಡಿಕೆ ಮಾಡಲು ಭಾರತೀಯ ಉದ್ಯಮಗಳಿಗೆ ಶೇಖ್ ಹಸೀನಾ ಆಹ್ವಾನ

ದೇಶಾದ್ಯಂತ ವಿಧ್ವಂಸಕ ಕೃತ್ಯಗಳಲ್ಲಿ ತೊಡಗುವವರು ವಿದ್ಯಾರ್ಥಿಗಳಲ್ಲ ಆದರೆ ಭಯೋತ್ಪಾದಕರು ಎಂದು ಪ್ರಧಾನಿ ಹಸೀನಾ ಹೇಳಿದ್ದಾರೆ. ಇದೀಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳಲ್ಲ, ರಾಷ್ಟ್ರವನ್ನು ಅಸ್ಥಿರಗೊಳಿಸಲು ಹೊರಟಿರುವ ಭಯೋತ್ಪಾದಕರು. ಅವರನ್ನು ದೃಡವಾಗಿ ನಿಗ್ರಹಿಸುವಂತೆ ದೇಶವಾಸಿಗಳಿಗೂ ಮನವಿ ಮಾಡಿದ್ದಾರೆ.

ಭಾರತವು ವಿದ್ಯಾರ್ಥಿಗಳು ಸೇರಿದಂತೆ ತನ್ನ ಪ್ರಜೆಗಳಿಗೆ ಸಲಹೆಯನ್ನು ನೀಡಿದೆ, ಅಲ್ಲಿನ ಭಾರತೀಯ ಹೈಕಮಿಷನ್‌ನೊಂದಿಗೆ ಸಂಪರ್ಕದಲ್ಲಿರಲು ಮತ್ತು ಜಾಗರೂಕರಾಗಿರಲು ಕೇಳಿಕೊಳ್ಳಲಾಗಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:26 am, Mon, 5 August 24