AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Crisis: ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿ ಶೇಖ್ ಹಸೀನಾ ಸೀರೆ, ಚಿಕನ್, ಸೋಫಾ, ಸೂಟ್​ಕೇಸ್ ಲೂಟಿ ಮಾಡಿದ ಜನರು

ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಶೇಖ್ ಹಸೀನಾ ಅವರು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಆಕೆ ತನ್ನ ಸಹೋದರಿಯೊಂದಿಗೆ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಈ ವೇಳೆ ಶೇಖ್ ಹಸೀನಾ ಅವರ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ವಸ್ತುಗಳನ್ನೆಲ್ಲ ಲೂಟಿ ಮಾಡಿದ್ದಾರೆ. ಬೆಡ್ ರೂಂನಲ್ಲಿ ಮಲಗಿ ವಿಡಿಯೋ ಮಾಡಿಕೊಂಡಿದ್ದಾರೆ.

Bangladesh Crisis: ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿ ಶೇಖ್ ಹಸೀನಾ ಸೀರೆ, ಚಿಕನ್, ಸೋಫಾ, ಸೂಟ್​ಕೇಸ್ ಲೂಟಿ ಮಾಡಿದ ಜನರು
ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ಜನರ ಮುತ್ತಿಗೆ
ಸುಷ್ಮಾ ಚಕ್ರೆ
|

Updated on:Aug 05, 2024 | 8:22 PM

Share

ಢಾಕಾ: ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶ ಬಿಟ್ಟು ಪರಾರಿಯಾಗುತ್ತಿದ್ದಂತೆ ಢಾಕಾದಲ್ಲಿರುವ ಪಿಎಂ ಪ್ಯಾಲೇಸ್‌ಗೆ ನುಗ್ಗಿದ ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಸೀರೆ, ಒಳಉಡುಪನ್ನೂ ಕದ್ದು, ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದರ ಜೊತೆಗೆ ಸೋಫಾ, ಅಡುಗೆಮನೆಯಿಂದ ಹಸಿ ಮೀನು, ಕೋಳಿ, ಬಾತುಕೋಳಿ ಕದ್ದು, ಅಲ್ಲಿದ್ದ ಊಟ ಮಾಡಿ, ಶೇಖ್ ಹಸೀನಾ ಅವರ ಬೆಡ್​ರೂಂನಲ್ಲಿ ಮಲಗಿ ಮಜಾ ಮಾಡಿದ್ದಾರೆ.

ಶೇಖ್ ಹಸೀನಾ ರಾಜೀನಾಮೆ ನೀಡುವ ಮುನ್ನ ಬಾಂಗ್ಲಾದೇಶದ ಬಂಗಬಂಧು ಸ್ಮಾರಕ ವಸ್ತುಸಂಗ್ರಹಾಲಯ ಎಂದೂ ಕರೆಯಲ್ಪಡುವ ಬಂಗಬಂಧು ಭವನ್ ಸೇರಿದಂತೆ ಢಾಕಾದ ಹಲವಾರು ಪ್ರಮುಖ ಸ್ಥಳಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಜನರು ಶೇಖ್ ಹಸೀನಾ ಅವರ ಕುಟುಂಬದ ಪೂರ್ವಜರ ಮನೆಯಾಗಿ ಪರಿವರ್ತನೆಗೊಂಡ ವಸ್ತುಸಂಗ್ರಹಾಲಯವನ್ನು ಧ್ವಂಸಗೊಳಿಸಿದೆ. ಅಲ್ಲಿ ಆಕೆಯ ತಂದೆಯ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಹಾಗೆಯೇ ದೇಶದ ಮುಖ್ಯ ನ್ಯಾಯಾಧೀಶರ ಮನೆ ಮತ್ತು ರಾಜಧಾನಿಯಾದ ಢಾಕಾದಲ್ಲಿರುವ ಶೇಖ್ ಹಸೀನಾ ಅವರ ಬಂಗಲೆಯ ಮೇಲೂ ದಾಳಿ ನಡೆಸಿ, ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: Sheikh Hasina: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಪ್ರತಿಭಟನೆ; ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ, ಭಾರತಕ್ಕೆ ಪಲಾಯನ

ಶೇಖ್ ಹಸೀನಾ ರಾಜೀನಾಮೆಯನ್ನು ಸೋಮವಾರ ಢಾಕಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಸಂಭ್ರಮಿಸಿದರು. ಬಾಂಗ್ಲಾ ರಾಜಧಾನಿ ಢಾಕಾದಲ್ಲಿರುವ ಶೇಖ್ ಹಸೀನಾ ಅವರ ನಿವಾಸ ‘ಗಾನಭಬನ್’ಗೆ ಬೀದಿಗಳಲ್ಲಿ ಹರ್ಷೋದ್ಗಾರದ ದೃಶ್ಯಗಳ ನಡುವೆ ಸಾವಿರಾರು ಜನರು ಮುತ್ತಿಗೆ ಹಾಕಿದರು. ಶೇಖ್ ಹಸೀನಾ ಅವರ ನಿವಾಸವಾದ ಗಣಭವನ್‌ನಿಂದ ಕೋಳಿ, ಮೀನು, ತರಕಾರಿಗಳು ಮತ್ತು ಪೀಠೋಪಕರಣಗಳನ್ನು ಜನರು ತೆಗೆದುಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ: Bangladesh Violence: ಮಧ್ಯಂತರ ಸರ್ಕಾರ ರಚನೆ’; ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಘೋಷಣೆ

ಶೇಖ್ ಹಸೀನಾ ಅವರ ಸೀರೆಯನ್ನು ಕದ್ದ ವ್ಯಕ್ತಿಯೊಬ್ಬ ಅದರ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾನೆ. ಅವರ ಬಂಗಲೆಯ ಫ್ರಿಜ್​ನಲ್ಲಿದ್ದ ಹಣ್ಣು, ಸ್ವೀಟ್​ಗಳನ್ನೆಲ್ಲ ತೆಗೆದು ತಿಂದ ಜನರು, ಅಡುಗೆಮನೆಯಲ್ಲಿದ್ದ ಚಿಕನ್, ಮೀನು ಮುಂತಾದ ಎಲ್ಲ ಪದಾರ್ಥಗಳನ್ನೂ ದೋಚಿದ್ದಾರೆ. ಶೇಖ್ ಹಸೀನಾ ಅವರ ಬಂಗಲೆಯೊಳಗಿದ್ದ ಐಷಾರಾಮಿ ಸೋಫಾ ಸೆಟ್​ಗಳನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Mon, 5 August 24

Follow Us
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!