AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ

ನಿಮ್ಮಂತಹ ಸ್ನೇಹಿತನನ್ನು ಹೊಂದಲು ಸಂತೋಷವಾಗಿದೆ. ದೇವರು ನಿಮ್ಮನ್ನು ಯಾವಾಗಲೂ ಆಶೀರ್ವದಿಸಲಿ. ಶೀಘ್ರದಲ್ಲೇ ನಿಮ್ಮ ಎಲ್ಲಾ ಕನಸುಗಳನ್ನು ನೀವು ಈಡೇರಿಸುತ್ತೀರಿ ಎಂದು ಭಾವಿಸುತ್ತೇವೆ. ನಾವು ಒಟ್ಟಿಗೆ ಸಾಕಷ್ಟು ಯೋಜನೆಯನ್ನು ಹೊಂದಿದ್ದೇವೆ ಎಂದು ನನಗೆ ತಿಳಿದಿದೆ. ಕ್ಷಮಿಸಿ, ನಮ್ಮ ಯೋಜನೆಗಳನ್ನು ಪೂರೈಸಲು ನನಗೆ ಸಾಧ್ಯವಾಗುತ್ತಿಲ್ಲ ಎಂದು ಪತ್ರಕರ್ತೆ ತಮ್ಮ ಫೇಸ್​​ಬುಕ್​​ನಲ್ಲಿ ಪೋಸ್ಟ್ ಮಾಡಿದ್ದರು.

ಢಾಕಾ ಸರೋವರದಲ್ಲಿ ಬಾಂಗ್ಲಾದೇಶ ಟಿವಿ ಪತ್ರಕರ್ತೆಯ ಮೃತದೇಹ ಪತ್ತೆ
ಸಾರಾ ರಹನುಮಾ
ರಶ್ಮಿ ಕಲ್ಲಕಟ್ಟ
|

Updated on:Aug 28, 2024 | 6:33 PM

Share

ಢಾಕಾ ಆಗಸ್ಟ್ 28: ಬಂಗಾಳಿ ಭಾಷೆಯ ಉಪಗ್ರಹ ಮತ್ತು ಕೇಬಲ್ ಟೆಲಿವಿಷನ್ ಚಾನೆಲ್, ಬಾಂಗ್ಲಾದೇಶದ (Bangladesh) ಗಾಜಿ ಟಿವಿಯಲ್ಲಿ (Gazi TV) ನ್ಯೂಸ್ ರೂಂ ಸಂಪಾದಕರಾಗಿದ್ದ ಸಾರಾ ರಹನುಮಾ (Sarah Rahanuma) ಅವರ ಮೃತದೇಹ ಢಾಕಾದ ಸರೋವರದಲ್ಲಿ ಪತ್ತೆಯಾಗಿದೆ. ಬುಧವಾರ ದೇಶದ ರಾಜಧಾನಿಯ ಹತಿರ್‌ಜೀಲ್ ಸರೋವರದಲ್ಲಿ ಆಕೆಯ ಶವ ತೇಲುತ್ತಿರುವುದು ಪತ್ತೆಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಢಾಕಾ ಮೆಡಿಕಲ್ ಕಾಲೇಜು ಆಸ್ಪತ್ರೆ (ಡಿಎಂಸಿಎಚ್) ಪೊಲೀಸ್ ಹೊರಠಾಣೆ ಉಸ್ತುವಾರಿ ಇನ್ಸ್‌ಪೆಕ್ಟರ್ ಬಚ್ಚು ಮಿಯಾ ಆಕೆಯ ಮೃತದೇಹವನ್ನು ಹೊರತೆಗೆದಿರುವುದಾಗಿ ಖಚಿತಪಡಿಸಿದ್ದಾರೆ.

ಸ್ಥಳೀಯರು ಮೃತದೇಹವನ್ನು ಸರೋವರದಿಂದ ಹೊರತೆಗೆದು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಡಿಎಂಸಿಎಚ್) ಕೊಂಡೊಯ್ದರು, ಅಲ್ಲಿ ವೈದ್ಯರು ಆಕೆ ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.

ಸಾವಿಗೂ ಮುನ್ನ ಸಾರಾ ಮಂಗಳವಾರ ರಾತ್ರಿ ಫೇಸ್‌ಬುಕ್‌ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದರು.

“ನಿಮ್ಮಂತಹ ಸ್ನೇಹಿತನನ್ನು ಹೊಂದಲು ಸಂತೋಷವಾಗಿದೆ. ದೇವರು ನಿಮ್ಮನ್ನು ಯಾವಾಗಲೂ ಆಶೀರ್ವದಿಸಲಿ. ಶೀಘ್ರದಲ್ಲೇ ನಿಮ್ಮ ಎಲ್ಲಾ ಕನಸುಗಳನ್ನು ನೀವು ಈಡೇರಿಸುತ್ತೀರಿ ಎಂದು ಭಾವಿಸುತ್ತೇವೆ. ನಾವು ಒಟ್ಟಿಗೆ ಸಾಕಷ್ಟು ಯೋಜನೆಯನ್ನು ಹೊಂದಿದ್ದೇವೆ ಎಂದು ನನಗೆ ತಿಳಿದಿದೆ. ಕ್ಷಮಿಸಿ, ನಮ್ಮ ಯೋಜನೆಗಳನ್ನು ಪೂರೈಸಲು ನನಗೆ ಸಾಧ್ಯವಾಗುತ್ತಿಲ್ಲ. ನಿಮ್ಮ ಜೀವನದ ಪ್ರತಿಯೊಂದು ಅಂಶದಲ್ಲೂ ದೇವರು ನಿಮ್ಮನ್ನು ಆಶೀರ್ವದಿಸಲಿ” ಎಂದು ಅವರು ಬರೆದಿದ್ದಾರೆ. ಹಿಂದಿನ ಪೋಸ್ಟ್‌ನಲ್ಲಿ ಅವರು “ಸಾವಿಗೆ ಸಮಾನವಾದ ಜೀವನವನ್ನು ಬದುಕುವುದಕ್ಕಿಂತ ಸಾಯುವುದು ಉತ್ತಮ ಎಂದು ಬರೆದಿದ್ದರು.

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.  ಏತನ್ಮಧ್ಯೆ, ಉಚ್ಚಾಟಿತ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಜೀಬ್ ವಾಝೇದ್, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಮತ್ತೊಂದು ಕ್ರೂರ ದಾಳಿ ಎಂದು ಹೇಳಿದ್ದಾರೆ.

ಆಕೆ ಕೆಲಸ ಮಾಡುತ್ತಿದ್ದ ಚಾನೆಲ್ ಇತ್ತೀಚೆಗೆ ಬಂಧಿಸಲ್ಪಟ್ಟ ಗೋಲಂ ದಸ್ತಗೀರ್ ಗಾಜಿ ಒಡೆತನದ ಜಾತ್ಯತೀತ ಮಾಧ್ಯಮ ಸಂಸ್ಥೆ ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಮಲೇಷ್ಯಾದಲ್ಲಿ ಸಿಂಕ್​ಹೋಲ್​ಗೆ ಬಿದ್ದ ಆಂಧ್ರದ ಮಹಿಳೆ, ಐದು ದಿನಗಳಿಂದ ನಡೆಯುತ್ತಿದೆ ಶೋಧ

” ಗಾಜಿ ಟಿವಿ ನ್ಯೂಸ್‌ರೂಮ್ ಸಂಪಾದಕರಾದ ರಹಮುನಾ ಸಾರಾ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಶವವನ್ನು ಢಾಕಾ ನಗರದ ಹತಿರ್‌ಜೀಲ್ ಸರೋವರದಿಂದ ಹೊರತೆಗೆಯಲಾಗಿದೆ. ಇದು ಬಾಂಗ್ಲಾದೇಶದ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಮತ್ತೊಂದು ಕ್ರೂರ ದಾಳಿಯಾಗಿದೆ. ಗಾಜಿ ಟಿವಿ ಇತ್ತೀಚೆಗೆ ಬಂಧಿಸಲ್ಪಟ್ಟ ಗೋಲಂ ದಸ್ತಗೀರ್ ಗಾಜಿ ಒಡೆತನದ ಜಾತ್ಯತೀತ ಸುದ್ದಿ ವಾಹಿನಿಯಾಗಿದೆ. ” ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಕೆಯ ಪತಿ ಸೈಯದ್ ಶುವ್ರೋ ಪ್ರಕಾರ, ಅವಳು ಕೆಲಸಕ್ಕೆ ಹೋಗಿದ್ದಳು. ಆದರೆ ಮನೆಗೆ ಹಿಂದಿರುಗಲಿಲ್ಲ. ಬೆಳಗಿನ ಜಾವ 3 ಗಂಟೆಗೆ ಆಕೆ ಕೆರೆಗೆ ಹಾರಿದ್ದಾಳೆ ಎಂಬ ಮಾಹಿತಿ ಲಭಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Wed, 28 August 24

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ