AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಪೊಲೀಸರ ಜೊತೆ ಶೇಖ್ ಹಸೀನಾ ಬೆಂಬಲಿಗರ ಘರ್ಷಣೆ; 4 ಸಾವು, 14 ಜನರ ಬಂಧನ

ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಹಾಗೂ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ತವರಾದ ಗೋಪಾಲ್‌ಗಂಜ್‌ನಲ್ಲಿ ಇಂದು (ಗುರುವಾರ) ನಡೆದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕರ್ಫ್ಯೂ ವಿಧಿಸಿದ ನಂತರ 14 ಜನರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರು ಪೊಲೀಸ್ ಮತ್ತು ಸ್ಥಳೀಯ ಆಡಳಿತ ಮುಖ್ಯಸ್ಥರ ವಾಹನಗಳನ್ನು ಧ್ವಂಸಗೊಳಿಸಿದರು. ಎನ್‌ಸಿಪಿ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದರು. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ದಂಗೆ ಭುಗಿಲೆದ್ದಿದೆ.

ಬಾಂಗ್ಲಾದೇಶದಲ್ಲಿ ಪೊಲೀಸರ ಜೊತೆ ಶೇಖ್ ಹಸೀನಾ ಬೆಂಬಲಿಗರ ಘರ್ಷಣೆ; 4 ಸಾವು, 14 ಜನರ ಬಂಧನ
Bangladesh Violence
ಸುಷ್ಮಾ ಚಕ್ರೆ
|

Updated on:Jul 17, 2025 | 3:34 PM

Share

ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್‌ಗಂಜ್‌ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್‌ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು ಬೆಂಬಲಿಗರು ಶೇಖ್ ಹಸೀನಾ ವಿರುದ್ಧದ ದಂಗೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿಗಳ ನೇತೃತ್ವದ ಪಕ್ಷವಾದ ನ್ಯಾಷನಲ್ ಸಿಟಿಜನ್ ಪಾರ್ಟಿ ಆಯೋಜಿಸಿದ್ದ ಮೆರವಣಿಗೆಗೆ ಮುಂಚಿತವಾಗಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ ಈ ಸ್ಥಳ ಯುದ್ಧಭೂಮಿಯಾಗಿ ಮಾರ್ಪಟ್ಟಿತು.

ವಿದ್ಯಾರ್ಥಿಗಳ ನೇತೃತ್ವದ ಪಕ್ಷ ಮತ್ತು ಶೇಖ್ ಹಸೀನಾ ಬೆಂಬಲಿಗರ ನಡುವೆ ನಡೆದ ಸಂಘರ್ಷ ಹಿಂಸಾಚಾರದ ರೂಪಕ್ಕೆ ತಿರುಗಿತು. ಇದರ ನಂತರ ಪೊಲೀಸರು ಪ್ರವೇಶಿಸಿದ ಬಳಿಕ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಗೋಪಾಲ್​ಗಂಜ್​ನಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಘರ್ಷಣೆಗೆ ಸಂಬಂಧಿಸಿದಂತೆ 14 ಜನರನ್ನು ಬಂಧಿಸಲಾಗಿದೆ.

ಈ ಹಿಂಸಾಚಾರದ ವೇಳೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೊಲೀಸರು ಗಲಾಟೆ ನಿಲ್ಲಿಸಲು ಹರಸಾಹಸ ಪಡಬೇಕಾಯಿತು. ಬುಧವಾರ ನಡೆದ ಘರ್ಷಣೆಗಳ ನಂತರ ಪ್ಯಾರಾಮಿಲಿಟರಿ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ)ದ 4 ಹೆಚ್ಚುವರಿ ತುಕಡಿಗಳನ್ನು (ಸುಮಾರು 200 ಸೈನಿಕರು) ಗೋಪಾಲ್‌ಗಂಜ್‌ಗೆ ಕಳುಹಿಸಲಾಗಿದೆ. ಗೋಪಾಲ್‌ಗಂಜ್‌ನಲ್ಲಿ ಬುಧವಾರ ರಾತ್ರಿ 8 ಗಂಟೆಯಿಂದ 22 ಗಂಟೆಗಳ ಕರ್ಫ್ಯೂ ವಿಧಿಸಲಾಗಿದೆ ಎಂದು ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಕಚೇರಿ ತಿಳಿಸಿದೆ. ಎನ್‌ಸಿಪಿ ಮೇಲಿನ ದಾಳಿಯ ಅಪರಾಧಿಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಕರಣ; ಶೇಖ್ ಹಸೀನಾ, ಮಗಳ ವಿರುದ್ಧ ಬಾಂಗ್ಲಾದೇಶ ನ್ಯಾಯಾಲಯದಿಂದ ಬಂಧನ ವಾರಂಟ್ ಜಾರಿ

ಗೋಪಾಲ್​ಗಂಜ್​ನಲ್ಲೇ ಶೇಖ್ ಹಸೀನಾ ಅವರ ತಂದೆ ಹಾಗೂ ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಸಮಾಧಿಯಿದೆ. 1975ರಲ್ಲಿ ನಡೆದ ಮಿಲಿಟರಿ ದಂಗೆಯಲ್ಲಿ ಬಾಂಗ್ಲಾದೇಶದ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರನ್ನು ಅವರ ಕುಟುಂಬದ ಸದಸ್ಯರ ಜೊತೆ ಹತ್ಯೆ ಮಾಡಲಾಗಿತ್ತು. ಅದಾದ ನಂತರ ಅಲ್ಲಿಯೇ ಸಮಾಧಿ ನಿರ್ಮಿಸಲಾಗಿತ್ತು. ಅದೃಷ್ಟವಶಾತ್ ಶೇಖ್ ಹಸೀನಾ ಮತ್ತು ಅವರ ತಂಗಿ ಮಾತ್ರ ಆ ದಾಳಿಯಿಂದ ಪಾರಾಗಿದ್ದರು.

ಮಾಧ್ಯಮ ವರದಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಿದಿರಿನ ಕೋಲುಗಳು ಮತ್ತು ಇಟ್ಟಿಗೆ ಬ್ಯಾಟ್‌ಗಳನ್ನು ಹೊಂದಿದ್ದ ಪ್ರತಿಭಟನಾಕಾರರು, ಬಾಂಗ್ಲಾದೇಶದ ಸೇನೆ ಮತ್ತು ಪ್ಯಾರಾಮಿಲಿಟರಿ ಬಿಜಿಬಿ ಸೇರಿದಂತೆ ಪೊಲೀಸ್ ಮತ್ತು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದರು.

ಫೆಬ್ರವರಿಯಲ್ಲಿ ತಾರತಮ್ಯದ ವಿರುದ್ಧ ವಿದ್ಯಾರ್ಥಿಗಳ ಚಳವಳಿಯ ಒಂದು ಭಾಗವಾಗಿ ಹೊರಹೊಮ್ಮಿದ ಹೊಸದಾಗಿ ರೂಪುಗೊಂಡ ಎನ್‌ಸಿಪಿಯ ಯೋಜಿತ ರ್ಯಾಲಿಗೆ ಅನುಕೂಲವಾಗುವಂತೆ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಇದು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮಹಮ್ಮದ್ ಯೂನಸ್ ಅವರ ಬೆಂಬಲದೊಂದಿಗೆ ನಡೆಯಿತು.

ಇದನ್ನೂ ಓದಿ: ನ್ಯಾಯಾಂಗ ನಿಂದನೆ ಪ್ರಕರಣ; ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ

ಪ್ರತಿಭಟನಾಕಾರರು ಪೊಲೀಸ್ ಮತ್ತು ಸ್ಥಳೀಯ ಆಡಳಿತ ಮುಖ್ಯಸ್ಥರ ವಾಹನಗಳನ್ನು ಧ್ವಂಸಗೊಳಿಸಿದರು. ಎನ್‌ಸಿಪಿ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದರು. ಇದರಿಂದ ಪೊಲೀಸರು ಗುಂಡು ಹಾರಿಸಬೇಕಾಯಿತು ಎಂದು ವರದಿಗಳು ತಿಳಿಸಿವೆ.

ಫೆಬ್ರವರಿಯಲ್ಲಿ ಸಾವಿರಾರು ಪ್ರತಿಭಟನಾಕಾರರು ಢಾಕಾದ 32 ಧನ್‌ಮೊಂಡಿಯಲ್ಲಿರುವ ಬಂಗಬಂಧು ಎಂದೂ ಕರೆಯಲ್ಪಡುವ ರೆಹಮಾನ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿದರು. ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿದ ನಂತರ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಸಲಹೆಗಾರರಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಯೂನಸ್ ಅಧಿಕಾರ ವಹಿಸಿಕೊಂಡಿದ್ದರು.

77 ವರ್ಷದ ಶೇಖ್ ಹಸೀನಾ ಕಳೆದ ವರ್ಷ ಆಗಸ್ಟ್ 5ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿದ್ಯಾರ್ಥಿಗಳ ನೇತೃತ್ವದ ಬೃಹತ್ ಪ್ರತಿಭಟನೆಯು ಅವರ 16 ವರ್ಷಗಳ ಅವಾಮಿ ಲೀಗ್ ಆಡಳಿತವನ್ನು ಉರುಳಿಸಿದ ನಂತರ ಅವರು ಬಾಂಗ್ಲಾದೇಶದಿಂದ ಪಲಾಯನ ಮಾಡಿದರು. ಶೇಖ್ ಹಸೀನಾ ಅವರನ್ನು ಹಸ್ತಾಂತರಿಸಬೇಕೆಂದು ಬಾಂಗ್ಲಾದೇಶ ಭಾರತಕ್ಕೆ ಮನವಿ ಮಾಡುತ್ತಲೇ ಇದೆ. ಆದರೆ, ಅದಕ್ಕೆ ಭಾರತ ಸ್ಪಂದಿಸಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:33 pm, Thu, 17 July 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ