ಬಾಂಗ್ಲಾದೇಶದ ಹಿಂದೂ ಪರ ವಕೀಲ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸೆ, ದೌರ್ಜನ್ಯದ ಬಗ್ಗೆ ಧ್ವನಿ ಎತ್ತಿದ್ದ ಹಿಂದೂ ಪರ ವಕೀಲ ಹಾಗೂ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಬಂಧಿಸಿದ್ದಾರೆ. ಇದೀಗ ಇದು ಹಿಂದೂ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಂಗ್ಲಾದೇಶದ ಹಿಂದೂ ಪರ ವಕೀಲ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ
ವಕೀಲ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 25, 2024 | 6:02 PM

ಬಾಂಗ್ಲಾದೇಶದಲ್ಲಿ ಗಲಭೆಯ ನಂತರ ಇದೀಗ ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪರ ವಕೀಲರಾಗಿರುವ ಖ್ಯಾತ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಬಾಂಗ್ಲಾದೇಶ ರಾಜಧಾನಿಯಲ್ಲಿ  ಬೃಹತ್ ಹಿಂದೂ ರ್ಯಾಲಿಯನ್ನು ನಡೆಸಿದ್ದಾರೆ,  ಹಿಂದೂಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಧ್ವನಿ ಎತ್ತಿದ್ದಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ. ಇನ್ನು ಈ ಬಗ್ಗೆ ಎಕ್ಸ್​​ ಮೂಲಕ ರಾಧಾರಾಮನ್ ದಾಸ್ ಎಂಬುವವರು ಟ್ವೀಟ್​​ ಮಾಡಿದ್ದಾರೆ. ಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮುಖ್ಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಬಂಧಿಸಿದ್ದಾರೆ. ಇದು ದೊಡ್ಡ ಅಘಾತ ಹಾಗೂ ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

ದಾಸ್ ಅವರನ್ನು ಢಾಕಾ ವಿಮಾನ ನಿಲ್ದಾಣದಿಂದ ಕರೆದುಕೊಂಡು ಹೋಗಲಾಗಿದೆ ಎಂದು ಢಾಕಾ ವಿಮಾನ ನಿಲ್ದಾಣ ವ್ಯವಸ್ಥಾಪಕರು ಹೇಳಿದ್ದಾರೆ. ಢಾಕಾ ಪೊಲೀಸರು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ.  ಅವರು ಖಾಸಗಿ ವಾಹನವನ್ನು ಬಿಟ್ಟು, ಪೊಲೀಸ್​​​  ವಾಹನದಲ್ಲಿ,  ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ. ಕೃಷ್ಣ ದಾಸ್ ಅವರು ಬಾಂಗ್ಲಾದೇಶದ ಹಿಂದೂಗಳ ಹಕ್ಕುಗಳ ಪ್ರಮುಖ ಧ್ವನಿಯಾಗಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಸ್ಕಾನ್ ಉಗ್ರ ಸಂಘಟನೆಯೆಂದು ಘೋಷಿಸಿದ ಬಾಂಗ್ಲಾದೇಶ!

ಅಲ್ಪಸಂಖ್ಯಾತರ ಮೇಲಿನ ದಾಳಿಗಳು ರಾಜಕೀಯ, ಕೋಮುವಾದವಲ್ಲ: ಯೂನಸ್

ಬಾಂಗ್ಲಾದೇಶ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮ್ಮ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯ ವಿಷಯವನ್ನು “ಉತ್ಪ್ರೇಕ್ಷಿತ” ಎಂದು ಹೇಳಿದ್ದರು ಮತ್ತು ಭಾರತವು ಅದನ್ನು ವಾಖ್ಯಾನಿಸಿದ ವಿಧಾನವನ್ನು ಪ್ರಶ್ನಿಸಿದ್ದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಕೋಮುವಾದಕ್ಕಿಂತ ಹೆಚ್ಚು ರಾಜಕೀಯವಾಗಿದೆ ಎಂದು ಮುಹಮ್ಮದ್ ಯೂನಸ್ ಸಂದರ್ಶನವೊಂದರಲ್ಲಿ ಹೇಳಿದರು.

Published On - 5:55 pm, Mon, 25 November 24

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ