AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ಮೊದಲ ಮಂಗಳಮುಖಿ ಸುದ್ದಿ ನಿರೂಪಕಿ ತಶ್ನುವಾ; ಮಹಿಳಾ ದಿನಾಚರಣೆಯಂದೇ ಕೆಲಸ ಪ್ರಾರಂಭ

ಶಿಶಿರ್​ ನಡೆದು ಬಂದ ದಾರಿ ತುಂಬ ಕಷ್ಟದ್ದಾಗಿತ್ತು. ಬಾಲ್ಯದಿಂದಲೂ ಲೈಂಗಿಕ ದೌರ್ಜನ್ಯ, ಶೋಷಣೆ, ಹಿಂಸೆಯನ್ನು ಅನುಭವಿಸುತ್ತಲೇ ಬಂದರು. 16ನೇ ವಯಸ್ಸಿಗೆ ಮನೆಯನ್ನು ಬಿಟ್ಟರು. ಆದರೆ ಧೈರ್ಯದಿಂದ ವಿದ್ಯಾಭ್ಯಾಸ ಮುಂದುವರಿಸಿದರು.

ಬಾಂಗ್ಲಾದೇಶದ ಮೊದಲ ಮಂಗಳಮುಖಿ ಸುದ್ದಿ ನಿರೂಪಕಿ ತಶ್ನುವಾ; ಮಹಿಳಾ ದಿನಾಚರಣೆಯಂದೇ ಕೆಲಸ ಪ್ರಾರಂಭ
ತಶ್ನುವಾ ಅನನ್​ ಶಿಶಿರ್​
Lakshmi Hegde
|

Updated on:Mar 15, 2021 | 7:23 PM

Share

ಢಾಕಾ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (ಮಾರ್ಚ್​ 18)ಯಂದು ಬಾಂಗ್ಲಾದೇಶದ ಸುದ್ದಿಮಾಧ್ಯಮದ ಕ್ಷೇತ್ರದಲ್ಲಿ ಒಂದು ಮಹತ್ವದ ಬೆಳವಣಿಗೆಯಾಗಿದೆ. ಆ ದೇಶದ ಮೊದಲ ತೃತೀಯಲಿಂಗಿ ಸುದ್ದಿ ನಿರೂಪಕಿಯಾಗಿ ತಶ್ನುವಾ ಅನನ್ ಶಿಶಿರ್ ಅವರು ವೃತ್ತಿ ಜೀವನ ಪ್ರಾರಂಭಿಸಿದರು. ಮಾರ್ಚ್​ 8ರಂದು ಖಾಸಗಿ ಚಾನೆಲ್​ವೊಂದರಲ್ಲಿ ತಮ್ಮ ಮೊದಲ ನ್ಯೂಸ್​ ಬುಲೆಟಿನ್​ನ್ನು ಪ್ರಸ್ತುತ ಪಡಿಸಿದರು. ಅವರ ಸಂತೋಷದಲ್ಲಿ ಇದೀಗ ಇಡೀ ಜಗತ್ತು ಪಾಲ್ಗೊಂಡಿದೆ. ತಶ್ನುವಾ ಸಾಧನೆಗೆ ಕರತಾಡನ ಮಾಡುತ್ತಿದೆ.

ಬಾಂಗ್ಲಾ ಸುದ್ದಿವಾಹಿನಿ ಬೋಯಿಶಾಖಿಯಲ್ಲಿ ಮಾರ್ಚ್​ 8ರಂದು ಸಂಜೆ 4 ಗಂಟೆಗೆ ತಶ್ನುವಾ ತಮ್ಮ ಮೊದಲ ಸುದ್ದಿ ಓದಿದ್ದಾರೆ. ಆನ್​ ಏರ್​​ನಲ್ಲಿ ಮಾತನಾಡುತ್ತ, ಇದೊಂದು ಕ್ರಾಂತಿಕಾರಿ ಬೆಳವಣಿಗೆಯಾಗಿ ಜನರ ಯೋಚನೆಗಳಿಗೆ ಒಂದು ಹೊಸ ಆಯಾಮವನ್ನೇ ನೀಡಬಹುದು ಎಂದು ಹೇಳಿದ್ದಾರೆ. ತಶ್ನುವಾ ಸುದ್ದಿ ನಿರೂಪಕಿಯಾಗಿ ಆಯ್ಕೆಯಾಗುವುದಕ್ಕೂ ಮೊದಲು ನಟನೆಯಲ್ಲಿ ತೊಡಗಿಕೊಂಡಿದ್ದರು ಹಾಗೂ ಹಕ್ಕುಗಳ ಹೋರಾಟಗಾರ್ತಿಯೂ ಆಗಿದ್ದರು. ಈಕೆಗಿನ್ನೂ 29 ವರ್ಷ.

ಶಿಶಿರ್​ ಅವರ ಸುದ್ದಿ ನಿರೂಪಕಿಯಾಗುವ ಆಸೆಗೆ ನೀರೆರೆದಿದ್ದು ಬೋಯಿಶಾಖಿ ನ್ಯೂಸ್​ ಚಾನಲ್. ಈ ಮೀಡಿಯಾ ಸಂಸ್ಥೆಯಲ್ಲೇ ಹಲವು ವಾರಗಳಿಂದ ತರಬೇತಿ ಪಡೆಯುತ್ತಿದ್ದ ಶಿಶಿರ್​ ಇತ್ತೀಚೆಗೆ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. ಮಹಿಳಾ ದಿನಾಚರಣೆಯಂದು ಮೂರು ನಿಮಿಷಗಳ ಕಾಲ ಸುದ್ದಿ ಓದಿದ ಇವರು, ನಂತರ ಕಣ್ಣೀರಾಗಿದ್ದಾರೆ.

ಮೊದಲದಿನದ ನ್ಯೂಸ್​ ಬುಲೆಟಿನ್ ಮುಗಿಯುತ್ತಿದ್ದಂತೆ ಅವರ ಸಹೋದ್ಯೋಗಿಗಳು ಚಪ್ಪಾಳೆತಟ್ಟಿ ಪ್ರೋತ್ಸಾಹಿಸಿದ್ದಾರೆ. ನಂತರ ಮಾತನಾಡಿದ ಬೋಯಿಶಾಖಿ ಸುದ್ದಿವಾಹಿನಿಯ ಚೀಫ್​ ಎಡಿಟರ್ ಟಿಪು ಅಲಾಂ, ಖಂಡಿತ ಇದನ್ನು ಜನರು ಒಪ್ಪಿಕೊಳ್ಳುತ್ತಾರೆಂಬ ಭರವಸೆ ಇದೆ. ಹಾಗೇ, ತೃತೀಯಲಿಂಗಿ ಸಮುದಾಯವನ್ನು ಜನರು ನೋಡುವ ದೃಷ್ಟಿಕೋನ ಬದಲಾಗಲಿದೆ ಎಂಬ ಆಶಯವೂ ಇದೆ ಎಂದು ಹೇಳಿದ್ದಾರೆ.

ನೋವಿನ ದಾರಿ ಶಿಶಿರ್​ ನಡೆದು ಬಂದ ದಾರಿ ತುಂಬ ಕಷ್ಟದ್ದಾಗಿತ್ತು. ಬಾಲ್ಯದಿಂದಲೂ ಲೈಂಗಿಕ ದೌರ್ಜನ್ಯ, ಶೋಷಣೆ, ಹಿಂಸೆಯನ್ನು ಅನುಭವಿಸುತ್ತಲೇ ಬಂದರು. 16ನೇ ವಯಸ್ಸಿಗೆ ಮನೆಯನ್ನು ಬಿಟ್ಟರು. ಆದರೆ ಧೈರ್ಯದಿಂದ ವಿದ್ಯಾಭ್ಯಾಸ ಮುಂದುವರಿಸಿದರು. ಇತ್ತೀಚೆಗಷ್ಟೇ ಬಾಂಗ್ಲಾದೇಶದ ಉನ್ನತ ವಿಶ್ವವಿದ್ಯಾಲಯವೊಂದರಲ್ಲಿ ಪಬ್ಲಿಕ್ ಹೆಲ್ತ್​ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸ್ಕಾಲರ್​ಶಿಪ್​ ಕೂಡ ಪಡೆದಿದ್ದಾರೆ. ಕಷ್ಟಗಳೆನ್ನೆಲ್ಲ ಮೆಟ್ಟಿನಿಂತು ಮಾಡೆಲಿಂಗ್ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ಈಗಾಗಲೇ ಎರಡು ಸಿನಿಮಾಗಳಲ್ಲಿ ನಟಿಸಲು ಸಹಿ ಮಾಡಿದ್ದು, ಶೀಘ್ರವೇ ಬಾಂಗ್ಲಾದೇಶ ಅವರನ್ನು ತೆರೆಯ ಮೇಲೆ ನೋಡಲಿದೆ.

2014ರಲ್ಲಿ ಭಾರತದಲ್ಲಿ ತಮಿಳುನಾಡಿನ ಖಾಸಗಿ ಚಾನೆಲ್​ವೊಂದರಲ್ಲಿ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ನಿರೂಪಕಿಯಾಗಿ ಸೇರಿದ್ದರು. ಹಾಗೇ 2018ರಲ್ಲಿ ಪಾಕಿಸ್ತಾನದಲ್ಲೂ ಕೂಡ  ಮಂಗಳಮುಖಿಯೊಬ್ಬರು ಸುದ್ದಿಮಾಧ್ಯಮಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಡಾ. ಅಕ್ಸಾ ಶೇಖ್.. ಕೊವಿಡ್ ಲಸಿಕಾ ಕೇಂದ್ರಕ್ಕೆ ಮುಖ್ಯಸ್ಥರಾಗಿರುವ ಏಕೈಕ ತೃತೀಯಲಿಂಗಿ- ಹೆಮ್ಮೆಯೊಂದಿಗೆ ನಿರಾಶೆಯೂ ಇದೆ ಎನ್ನುತ್ತಾರೆ ಈ ವೈದ್ಯೆ

Justice For Kamaraj: ‘ಕಾಮರಾಜು ಮತ್ತೆ ಕೆಲಸಕ್ಕೆ ನೇಮಕವಾಗುವವರೆಗೂ ಜೊಮ್ಯಾಟೊದಿಂದ ಆರ್ಡರ್​ ಪಡೆಯುವುದಿಲ್ಲ’- ಶುರುವಾಗಿದೆ ಅಭಿಯಾನ

Published On - 7:23 pm, Mon, 15 March 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು