AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Flood: ನೇಪಾಳ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ಬಿಎಪಿಎಸ್ ಸಂಸ್ಥೆ

ಹಿಮಾಲಯ ಪ್ರವಾಹದಿಂದ ತತ್ತರಿಸಿದ ನೇಪಾಳದ ಸಂತ್ರಸ್ತರ ನೆರವಿಗೆ ಬಿಎಪಿಎಸ್ (BAPS) ಸಂಸ್ಥೆ ಧಾವಿಸಿದೆ. ಮಹಂತ್ ಸ್ವಾಮಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ, ಬಿಎಪಿಎಸ್ ಸ್ವಯಂಸೇವಕರು ಆಹಾರ, ಔಷಧಿ, ಕಂಬಳಿಗಳನ್ನು ವಿತರಿಸುತ್ತಿದ್ದಾರೆ. ಸಂತ್ರಸ್ತರ ಬದುಕು ಸಹಜ ಸ್ಥಿತಿಗೆ ಮರಳಲಿ ಎಂದು ಪ್ರಾರ್ಥಿಸಿದ್ದಾರೆ. ಇದು ಮಾನವೀಯ ನೆರವು ನೀಡಿ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಭಾರತೀಯ ಸಂಸ್ಕೃತಿಯ ಭಾಗವಾಗಿದೆ.

Nepal Flood: ನೇಪಾಳ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ಬಿಎಪಿಎಸ್ ಸಂಸ್ಥೆ
ಬಿಎಪಿಎಸ್
ನಯನಾ ರಾಜೀವ್
|

Updated on: Aug 31, 2026 | 12:17 PM

Share

ಕಠ್ಮಂಡು, ಆಗಸ್ಟ್ 31: ನೇಪಾಳದ ಭೋಟೆ ಕೋಶಿ ನದಿ ವ್ಯಾಪ್ತಿಯಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ(Flood)ದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಬಿಎಪಿಎಸ್ (BAPS ಸ್ವಾಮಿನಾರಾಯಣ ಸಂಸ್ಥೆ) ಮುಂದಾಗಿದೆ. ಸಂಸ್ಥೆಯ ಮಹಾಂತ್ ಸ್ವಾಮಿ ಮಹಾರಾಜ್ ಅವರ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ನೇಪಾಳದ ಬಿಎಪಿಎಸ್ ಸ್ವಯಂಸೇವಕರು ತಕ್ಷಣದ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಸ್ಥಳೀಯ ಆಡಳಿತದ ಸಹಯೋಗದೊಂದಿಗೆ, ದುರಂತ ಪೀಡಿತ ಕುಟುಂಬಗಳಿಗೆ ಅಗತ್ಯವಾದ ಆಹಾರ ಧಾನ್ಯಗಳು, ಅಡುಗೆ ಎಣ್ಣೆ, ಜೀವ ರಕ್ಷಕ ಔಷಧಿಗಳು, ಬೆಚ್ಚನೆಯ ಕಂಬಳಿಗಳು ಹಾಗೂ ಬಟ್ಟೆಗಳನ್ನು ಮನೆ-ಮನೆಗೆ ನೇರವಾಗಿ ತಲುಪಿಸಲಾಗುತ್ತಿದೆ.

ಪ್ರವಾಹದಿಂದ ಬಾಧಿತರಾದ ಪ್ರತಿಯೊಬ್ಬ ನಾಗರಿಕರಿಗೂ ಧೈರ್ಯ ಸಿಗಲಿ ಹಾಗೂ ಈ ಕಠಿಣ ಪರಿಸ್ಥಿತಿಯಿಂದ ದೇಶದ ಜನಜೀವನ ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಲಿ ಎಂದು ಮಹಾಂತ್ ಸ್ವಾಮಿ ಮಹಾರಾಜ್ ಅವರು ಭಗವಂತನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನೆರೆಹೊರೆಯ ಸಂಕಷ್ಟದ ಸಮಯದಲ್ಲಿ ಮಾನವೀಯ ನೆರವು ನೀಡುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದು, ಸ್ಥಳೀಯ ತುರ್ತು ಅಗತ್ಯಗಳಿಗೆ ತಕ್ಕಂತೆ ಪರಿಹಾರ ವಿತರಣೆಯನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಮತ್ತಷ್ಟು ಓದಿ: ಶಾಲೆಯ ಗಂಟೆ ಬಾರಿಸಿ 1,643 ಮಕ್ಕಳ ಜೀವ ಉಳಿಸಿದ ಶಿಕ್ಷಕ: ಪ್ರವಾಹಕ್ಕೆ ಶಾಲೆಯೇ ಧ್ವಂಸವಾದರೂ ಮಕ್ಕಳು ಬಚಾವ್

ನೇಪಾಳದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 903ಕ್ಕೆ ಏರಿದೆ, 320 ವಿದೇಶಿ ಪ್ರಜೆಗಳು ಸೇರಿದಂತೆ 4,000 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಚಿತ್ವಾನ್‌ನಿಂದ 272, ನವಲ್ಪರಾಸಿ ಪೂರ್ವದಿಂದ 207, ನವಲ್ಪರಾಸಿ ಪಶ್ಚಿಮದಿಂದ 151 ಮತ್ತು ಗೂರ್ಖಾ ಜಿಲ್ಲೆಗಳಿಂದ 62 ಮೃತದೇಹಗಳನ್ನು ಹೊರತೆಗೆಯಲಾಗಿದೆ. ನುವಾಕೋಟ್‌ನಿಂದ 95, ಧಾಡಿಂಗ್‌ನಿಂದ 55, ತನಾಹುದಿಂದ 37 ಮತ್ತು ರಸುವಾದಿಂದ 24 ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಹೊಸ ಪ್ರವಾಹದ ಸಾಧ್ಯತೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿರುವುದರಿಂದ ಹೊಸ ಎಚ್ಚರಿಕೆಯನ್ನು ಸಹ ನೀಡಲಾಗಿದೆ, ಪೀಡಿತ ಪ್ರದೇಶಗಳಲ್ಲಿ ಜನರು ಜಾಗರೂಕರಾಗಿರಲು ಒತ್ತಾಯಿಸಲಾಗಿದೆ. ಭೋಟೆಕೋಶಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿರುವ ಬಗ್ಗೆ ಭಾನುವಾರ ಜನರ ಫೋನ್‌ಗೆ ಎಚ್ಚರಿಕೆಯನ್ನು ಕಳುಹಿಸಲಾಗಿದೆ.

ಭಾರತದ ಎನ್‌ಡಿಆರ್‌ಎಫ್ ಮತ್ತು ವಿಶೇಷ ವಿಧಿವಿಜ್ಞಾನ ತಂಡವು ನೇಪಾಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಮತ್ತು ಮೃತರನ್ನು ಗುರುತಿಸುವಲ್ಲಿ ದೇಶಕ್ಕೆ ಸಹಾಯ ಮಾಡುತ್ತಿದೆ. ಈ ತಂಡವು ನೇಪಾಳದಲ್ಲಿ ಡಿಎನ್‌ಎ ಮಾದರಿಗಳ ವಿಶ್ಲೇಷಣೆಯನ್ನು ಹೆಚ್ಚಿಸಲು, ಬಲಿಪಶುಗಳ ಮೃತದೇಹಗಳನ್ನು ಗುರುತಿಸಲು ಸಹಾಯ ಮಾಡುತ್ತದೆ” ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ