AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಕಚ್ಚಿದ್ದಕ್ಕೆ 29 ನಾಯಿಗಳನ್ನು ಗುಂಡಿಕ್ಕಿ ಕೊಂದರು; ಕತಾರ್​​ನಲ್ಲಿನ ಕ್ರೂರ ಕೃತ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ನಾಯಿಯೊಂದು ಅವರ ಮಕ್ಕಳಿಗೆ ಕಚ್ಚಿದೆ ಹಾಗಾಗಿ ಈ ನಾಯಿಗಳನ್ನು ಗುಂಡಿಕ್ಕಿ ಕೊಂದಿದ್ದೇವೆ ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಇಬ್ಬರು ವ್ಯಕ್ತಿಗಳು ಗನ್ ಹಿಡಿದುಕೊಂಡು ಬಂದಿದ್ದು ಅವರನ್ನು ನೋಡಿ ಭದ್ರತಾ ಸಿಬ್ಬಂದಿ ಕೂಡಾ ಹೆದರಿದ್ದಾರೆ.

ನಾಯಿ ಕಚ್ಚಿದ್ದಕ್ಕೆ 29 ನಾಯಿಗಳನ್ನು ಗುಂಡಿಕ್ಕಿ ಕೊಂದರು; ಕತಾರ್​​ನಲ್ಲಿನ ಕ್ರೂರ ಕೃತ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ನಾಯಿಗಳುImage Credit source: Paws Rescue Qatar
TV9 Web
| Edited By: |

Updated on:Jul 20, 2022 | 4:44 PM

Share

ಯಾರಾದ್ದೋ ಒಬ್ಬ ವ್ಯಕ್ತಿಯ ಮಗನಿಗೆ ನಾಯಿಯೊಂದು(Dog) ಕಚ್ಚಿತ್ತು. ಈ ಸಿಟ್ಟಿನಲ್ಲಿ  ಕತಾರ್​​ನಲ್ಲಿ(Qatar) ಸಶಸ್ತ್ರಧಾರಿಗಳಾದ ಜನರು ಬಂದು 29 ನಾಯಿಗಳನ್ನು ಸಾಯಿಸಿದ್ದು, ಹಲವಾರು ನಾಯಿಗಳ ಮೇಲೆ ಗಾಯಗಳೂ ಆಗಿವೆ. ಈ ಬಗ್ಗೆ ದೋಹಾ ಮೂಲದ ಪ್ರಾಣಿಗಳ ರಕ್ಷಣಾ ಸಂಘ PAWS ರೆಸ್ಕ್ಯೂ ಕತಾರ್ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದು, ಪ್ರಾಣಿಗಳ ಮೇಲೆ ದಾಳಿ ನಡೆಸುವವರು ಸುರಕ್ಷಿತವಾದ ಕಾರ್ಖಾನೆಯ ಪ್ರದೇಶದಲ್ಲಿ ಕಾಣಿಸಿಕೊಂಡರು. ಅಲ್ಲಿ ಬೀದಿನಾಯಿಗಳಿಗೆ ಆಹಾರ ಹಾಕುವ, ನೋಡಿಕೊಳ್ಳುವ ಪ್ರದೇಶಕ್ಕೆ ಹೋಗಲು ಅಲ್ಲಿಂದ ಭದ್ರತಾ ಸಿಬ್ಬಂದಿಯನ್ನು ಹೆದರಿಸಿದರು. ಅವರು ನಾಯಿಮರಿಗಳು ಸೇರಿದಂತೆ 29 ನಾಯಿಗಳನ್ನು ಕೊಂದರು. ಹಲವು ನಾಯಿಗಳಿಗೆ ಗಾಯಗಳಾಗಿವೆ ಎಂದು PAWS ಬರೆದಿದೆ. ನಾಯಿಯೊಂದು ಅವರ ಮಕ್ಕಳಿಗೆ ಕಚ್ಚಿದೆ ಹಾಗಾಗಿ ಈ ನಾಯಿಗಳನ್ನು ಗುಂಡಿಕ್ಕಿ ಕೊಂದಿದ್ದೇವೆ ಎಂದು ವ್ಯಕ್ತಿಯೊಬ್ಬರು ಹೇಳಿದ್ದಾರೆ. ಇಬ್ಬರು ವ್ಯಕ್ತಿಗಳು ಗನ್ ಹಿಡಿದುಕೊಂಡು ಬಂದಿದ್ದು ಅವರನ್ನು ನೋಡಿ ಭದ್ರತಾ ಸಿಬ್ಬಂದಿ ಕೂಡಾ ಹೆದರಿದ್ದಾರೆ. ನಾಯಿಗಳ ಮೇಲೆ ಗುಂಡು ಹಾರಿಸುವುದನ್ನ ತಡೆಯಲು ಅವರು ಪ್ರಯತ್ನಿಸಿದರು ಆದರೆ ತಮ್ಮ ಜೀವವೂ ಅಪಾಯದಲ್ಲಿದೆ ಅಂದು ಅವರು ಹಿಂದೆ ಸರಿದರು. ಒಂದು ನಾಯಿ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿದೆ. ಈ ನಾಯಿಗಳು ಯಾರಿಗೂ ತೊಂದರೆ ಕೊಟ್ಟಿಲ್ಲ. ಅವು ತುಂಬಾ ಪ್ರೀತಿಯ ನಾಯಿಗಳು ಎಂದು PAWS ಫೇಸ್ ಬುಕ್  ಪೋಸ್ಟ್ ನಲ್ಲಿ ಬರೆದಿದೆ. ದೋಹಾ ನ್ಯೂಸ್ ಪ್ರಕಾರ ಈ ಕೃತ್ಯ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘೋರ ಕೃತ್ಯ ಕತಾರಿ ಸಮಾಜಕ್ಕೆ ಬೆದರಿಕೆ ಎಂದು ಪ್ರಾಣಿಗಳ ಹಕ್ಕುಗಳನ್ನು ಸಂರಕ್ಷಿಸುವ ಬ್ರಾಂಡ್ ರೋನಿ ಹೆಲೊ ಹೇಳಿದೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅದು ಒತ್ತಾಯಿಸಿದೆ.

Published On - 4:40 pm, Wed, 20 July 22

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!