Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​
ವಿಮಾನ
Follow us
ನಯನಾ ರಾಜೀವ್
|

Updated on: Sep 05, 2023 | 11:58 AM

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಘಟನೆಗೆ ಕಾರಣವಾದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ, ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಮತ್ತೊಂದು ವಿಮಾನಕ್ಕೆ ವರ್ಗಾಯಿಸಲಾಯಿತು. ಅತಿಸಾರವಿದ್ದ ಕಾರಣ ವಿಮಾನದಲ್ಲೆಲ್ಲಾ ಮಲವಿಸರ್ಜನೆ ಮಾಡಿದ್ದರು. ಹೀಗಾಗಿ ವಿಮಾನವನ್ನು ಸಂಪೂರ್ಣವಾಗಿ ಶುಚಿಗೊಳಿಸಲಾಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ವಿಮಾನವು ನಿಗದಿತ ಸಮಯಕ್ಕಿಂತ ಎಂಟು ತಾಸು ತಡವಾಗಿ ಹಾರಾಟ ನಡೆಸಿತ್ತು. ವಿಮಾನವು ಸ್ಪೇನ್ ತಲುಪಿದಾಗ ಅತಿಸಾರ ಸಮಸ್ಯೆ ಇರುವ ಪ್ರಯಾಣಿಕ ಅದೇ ವಿಮಾನದಲ್ಲಿ ತೆರಳಿದ್ದರೇ ಎನ್ನುವ ಮಾಹಿತಿ ಅಸ್ಪಷ್ಟವಾಗಿದೆ.

ಡೆಲ್ಟಾ ಅಧಿಕಾರಿಗಳು ವಿಮಾನದಲ್ಲಿ ವೈದ್ಯಕೀಯ ಸಮಸ್ಯೆ ಸಂಭವಿಸಿರುವುದನ್ನು ದೃಢಪಡಿಸಿದರು. ಇದರ ಪರಿಣಾಮವಾಗಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಡೆಲ್ಟಾ ಅಧಿಕಾರಿಗಳು ವಿಮಾನ ವಿಳಂಬದಿಂದಾಗಿ ಉಂಟಾದ ಅನನುಕೂಲತೆ ಬಗ್ಗೆ ಕ್ಷಮೆಯಾಚಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್