AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​
ವಿಮಾನ
ನಯನಾ ರಾಜೀವ್
|

Updated on: Sep 05, 2023 | 11:58 AM

Share

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಘಟನೆಗೆ ಕಾರಣವಾದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ, ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಮತ್ತೊಂದು ವಿಮಾನಕ್ಕೆ ವರ್ಗಾಯಿಸಲಾಯಿತು. ಅತಿಸಾರವಿದ್ದ ಕಾರಣ ವಿಮಾನದಲ್ಲೆಲ್ಲಾ ಮಲವಿಸರ್ಜನೆ ಮಾಡಿದ್ದರು. ಹೀಗಾಗಿ ವಿಮಾನವನ್ನು ಸಂಪೂರ್ಣವಾಗಿ ಶುಚಿಗೊಳಿಸಲಾಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ವಿಮಾನವು ನಿಗದಿತ ಸಮಯಕ್ಕಿಂತ ಎಂಟು ತಾಸು ತಡವಾಗಿ ಹಾರಾಟ ನಡೆಸಿತ್ತು. ವಿಮಾನವು ಸ್ಪೇನ್ ತಲುಪಿದಾಗ ಅತಿಸಾರ ಸಮಸ್ಯೆ ಇರುವ ಪ್ರಯಾಣಿಕ ಅದೇ ವಿಮಾನದಲ್ಲಿ ತೆರಳಿದ್ದರೇ ಎನ್ನುವ ಮಾಹಿತಿ ಅಸ್ಪಷ್ಟವಾಗಿದೆ.

ಡೆಲ್ಟಾ ಅಧಿಕಾರಿಗಳು ವಿಮಾನದಲ್ಲಿ ವೈದ್ಯಕೀಯ ಸಮಸ್ಯೆ ಸಂಭವಿಸಿರುವುದನ್ನು ದೃಢಪಡಿಸಿದರು. ಇದರ ಪರಿಣಾಮವಾಗಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಡೆಲ್ಟಾ ಅಧಿಕಾರಿಗಳು ವಿಮಾನ ವಿಳಂಬದಿಂದಾಗಿ ಉಂಟಾದ ಅನನುಕೂಲತೆ ಬಗ್ಗೆ ಕ್ಷಮೆಯಾಚಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್